Don't Miss!
- Lifestyle ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ತ್ರಿಬಲ್ ರೈಡಿಂಗ್' ಆರಂಭಿಸಿದ ಗೋಲ್ಡನ್ ಸ್ಟಾರ್ ಗಣೇಶ್
ಕೊರೊನಾ ಲಾಕ್ಡೌನ್ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರೀಕರಣಕ್ಕೆ ಮರುಳುತ್ತಿದ್ದಾರೆ. ಐದಾರು ತಿಂಗಳಿನಿಂದ ಶೂಟಿಂಗ್ ಇಲ್ಲದೇ ಸುಮ್ಮನಿದ್ದ ಗಣೇಶ್ ಈಗ 'ತ್ರಿಬಲ್ ರೈಡಿಂಗ್' ಆರಂಭಿಸಿದ್ದಾರೆ.
ಹೌದು, ತ್ರಿಬಲ್ ರೈಡಿಂಗ್ ಚಿತ್ರೀಕರಣಕ್ಕೆ ಗಣೇಶ್ ಸಜ್ಜಾಗಿದ್ದು, ಅಕ್ಟೋಬರ್ ತಿಂಗಳಿನಿಂದ ಅಖಾಡಕ್ಕೆ ಇಳಿಯಲಿದ್ದಾರೆ. ಸದ್ಯಕ್ಕೆ, ಹೈದರಾಬಾದ್ನಲ್ಲಿ ಹಾಡುಗಳ ಮುದ್ರಿಕೆ ಕೆಲಸ ಆರಂಭವಾಗಿದೆ.
ಮುಂಗಾರು ಮಳೆ ಸಿನಿಮಾಕ್ಕೆ ಮೊದಲ ಆಯ್ಕೆ ಗಣೇಶ್ ಆಗಿರಲಿಲ್ಲ! ಮತ್ಯಾರು?
ಇದು ಪಕ್ಕಾ ಕಮರ್ಷಿಯಲ್ ಚಿತ್ರವಾಗಿದ್ದು, ಲವ್, ಕಾಮಿಡಿ, ಆಕ್ಷನ್ ಹಾಗೂ ಥ್ರಿಲ್ಲರ್ ಸಬ್ಜೆಕ್ಟ್ ಹೊಂದಿದೆ. ಈ ಹಿಂದೆ ವಿನೋದ್ ಪ್ರಭಾಕರ್ ನಟನೆಯ ರಗಡ್ ಚಿತ್ರ ನಿರ್ದೇಶನ ಮಾಡಿದ್ದ ಮಹೇಶ್ ಗೌಡ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ರಾಮ್ ಗೋಪಾಲ್ ಈ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದು, ಸಾಯಿ ಕಾರ್ತಿಕ್ ಸಂಗೀತ ಇರಲಿದೆ. ಸಾಧುಕೋಕಿಲಾ, ರವಿಶಂಕರ್, ಕುರಿ ಪ್ರತಾಪ್ ಸೇರಿದಂತೆ ಹಲವು ಕಲಾವಿದರು ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ನಾಯಕಿಯ ಆಯ್ಕೆ ಇನ್ನೂ ಆಗಿಲ್ಲ.
Recommended Video
ಇನ್ನುಳಿದಂತೆ ನಟ ಗಣೇಶ್ ಅವರು ಯೋಗರಾಜ್ ಭಟ್ ಅವರ ಜೊತೆ 'ಗಾಳಿಪಟ-2', ಸಿಂಪಲ್ ಸುನಿ ಜೊತೆ 'ಸಖತ್', ಪ್ರಶಾಂತ್ ರಾಜು ಜೊತೆ ಒಂದು ಸಿನಿಮಾ ಮಾಡುತ್ತಿದ್ದಾರೆ.