Don't Miss!
- Automobiles ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- Sports ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಪಾಕ್ ತಂಡದ ಮಾಜಿ ನಾಯಕಿ
- News Karnataka Lok Sabha Election 2024: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧ!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗರುಡ ಗಮನ ವೃಷಭ ವಾಹನ' ಸಿನಿಮಾ ಬಿಡುಗಡೆ ದಿನಾಂಕ ಪ್ರಕಟ
ಪ್ರತಿಭಾವಂತ ನಿರ್ದೇಶಕ ರಾಜ್ ಬಿ ಶೆಟ್ಟಿಯ ಎರಡನೇ ಪ್ರಯತ್ನ 'ಗರುಡ ಗಮನ ವೃಷಭ ವಾಹನ' ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
ರಾಜ್ ಬಿ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ನಟಿಸಿರುವ 'ಗರುಡ ಗಮನ ವೃಷಭ ವಾಹನ' ಸಿನಿಮಾವು ಜೂನ್ 4 ರಂದು ಚಿತ್ರಮಂದಿಗಳಲ್ಲಿ ಬಿಡುಗಡೆ ಆಗಲಿದೆ. ಈ ಬಗ್ಗೆ ನಿರ್ದೇಶಕ ರಾಜ್ ಬಿ ಶೆಟ್ಟಿ, ನಟ ರಿಷಬ್ ಶೆಟ್ಟಿ ಹಾಗೂ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ.
'ಜೂನ್ 4 2021 ರಂದು ಶಿವ ಮತ್ತು ಹರಿಯ ಪ್ರಪಂಚಕ್ಕೆ ಬರಲು ತಯಾರಾಗಿರಿ ಮಂಗಳಾದೇವಿಗೆ ಸ್ವಾಗತ' ಎಂದು ನಿರ್ದೇಶಕ, ನಟ ರಾಜ್ ಬಿ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಬಹು ಭಿನ್ನ ಪೋಸ್ಟರ್ನಿಂದ ಈ ಸಿನಿಮಾ ಈಗಾಗಲೇ ಗಮನ ಸೆಳೆದಿದೆ. ಭೂಗತಲೋಕ ಹಾಗೂ ಕರಾವಳಿ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ ಎನ್ನಲಾಗುತ್ತಿದೆ. ಶಿವ ಮತ್ತು ಹರಿ ಎಂಬಿಬ್ಬರು ರೌಡಿಗಳ ನಡುವಿನ ಕಾಳಗದ ಕತೆಯನ್ನೇ ಸಿನಿಮಾ ಆಗಿ ತೆರೆಯ ಮೇಲೆ ತರಲಾಗಿದೆ ಎಂಬ ಊಹೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
Recommended Video
'ಒಂದು ಮೊಟ್ಟೆಯ ಕತೆ' ಅಂಥಹಾ ಸೃಜನಶೀಲ ಹಾಸ್ಯಸಿನಿಮಾ ಮಾಡಿ ಗೆದ್ದಿದ್ದ ರಾಜ್ ಬಿ ಶೆಟ್ಟಿ ತಮ್ಮ ಎರಡನೇ ಸಿನಿಮಾದಲ್ಲಿಯೇ ಭಿನ್ನ ಹಾದಿ ಹಿಡಿದಿದ್ದಾರೆ. ಸಿನಿಮಾದ ಟ್ರೇಲರ್ ಇನ್ನೂ ಬಿಡುಗಡೆ ಆಗಿಲ್ಲ. ಸಿನಿಮಾ ಬಿಡುಗಡೆಗೆ ಮುನ್ನಾ ಟ್ರೇಲರ್ ಬಿಡುಗಡೆ ಆಗುವ ನಿರೀಕ್ಷೆ ಇದೆ.