Don't Miss!
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- News Namma Metro Blue Line: ಇತರ ಮಾರ್ಗಕ್ಕಿಂತಲೂ 'ನೀಲಿ' ಮಾರ್ಗದಲ್ಲಿ ವೇಗವಾಗಿ ಓಡಲಿವೆ ಮೆಟ್ರೋ, ಅಪ್ಡೇಟ್
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗರುಡ ಗಮನ ವೃಷಭ ವಾಹನ' ಸಿನಿಮಾ ಬಿಡುಗಡೆ ದಿನಾಂಕ ಪ್ರಕಟ
ಪ್ರತಿಭಾವಂತ ನಿರ್ದೇಶಕ ರಾಜ್ ಬಿ ಶೆಟ್ಟಿಯ ಎರಡನೇ ಪ್ರಯತ್ನ 'ಗರುಡ ಗಮನ ವೃಷಭ ವಾಹನ' ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.
ರಾಜ್ ಬಿ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ನಟಿಸಿರುವ 'ಗರುಡ ಗಮನ ವೃಷಭ ವಾಹನ' ಸಿನಿಮಾವು ಜೂನ್ 4 ರಂದು ಚಿತ್ರಮಂದಿಗಳಲ್ಲಿ ಬಿಡುಗಡೆ ಆಗಲಿದೆ. ಈ ಬಗ್ಗೆ ನಿರ್ದೇಶಕ ರಾಜ್ ಬಿ ಶೆಟ್ಟಿ, ನಟ ರಿಷಬ್ ಶೆಟ್ಟಿ ಹಾಗೂ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ.
'ಜೂನ್ 4 2021 ರಂದು ಶಿವ ಮತ್ತು ಹರಿಯ ಪ್ರಪಂಚಕ್ಕೆ ಬರಲು ತಯಾರಾಗಿರಿ ಮಂಗಳಾದೇವಿಗೆ ಸ್ವಾಗತ' ಎಂದು ನಿರ್ದೇಶಕ, ನಟ ರಾಜ್ ಬಿ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಬಹು ಭಿನ್ನ ಪೋಸ್ಟರ್ನಿಂದ ಈ ಸಿನಿಮಾ ಈಗಾಗಲೇ ಗಮನ ಸೆಳೆದಿದೆ. ಭೂಗತಲೋಕ ಹಾಗೂ ಕರಾವಳಿ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ ಎನ್ನಲಾಗುತ್ತಿದೆ. ಶಿವ ಮತ್ತು ಹರಿ ಎಂಬಿಬ್ಬರು ರೌಡಿಗಳ ನಡುವಿನ ಕಾಳಗದ ಕತೆಯನ್ನೇ ಸಿನಿಮಾ ಆಗಿ ತೆರೆಯ ಮೇಲೆ ತರಲಾಗಿದೆ ಎಂಬ ಊಹೆಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
Recommended Video
'ಒಂದು ಮೊಟ್ಟೆಯ ಕತೆ' ಅಂಥಹಾ ಸೃಜನಶೀಲ ಹಾಸ್ಯಸಿನಿಮಾ ಮಾಡಿ ಗೆದ್ದಿದ್ದ ರಾಜ್ ಬಿ ಶೆಟ್ಟಿ ತಮ್ಮ ಎರಡನೇ ಸಿನಿಮಾದಲ್ಲಿಯೇ ಭಿನ್ನ ಹಾದಿ ಹಿಡಿದಿದ್ದಾರೆ. ಸಿನಿಮಾದ ಟ್ರೇಲರ್ ಇನ್ನೂ ಬಿಡುಗಡೆ ಆಗಿಲ್ಲ. ಸಿನಿಮಾ ಬಿಡುಗಡೆಗೆ ಮುನ್ನಾ ಟ್ರೇಲರ್ ಬಿಡುಗಡೆ ಆಗುವ ನಿರೀಕ್ಷೆ ಇದೆ.