Don't Miss!
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸಬರ 'ಗಿಲ್ಕಿ'ಗೆ ಗುರುಡ ಗಮನ ವೃಷಭ ವಾಹನ 'ಶಿವ'ನ ಬೆಂಬಲ
ಕನ್ನಡ ಚಿತ್ರರಂಗಕ್ಕೆ ಹೊಸ ಪ್ರತಿಭೆಗಳು ಬರುವುದ ಹೊಸದೇನಲ್ಲ. ಪ್ರತಿ ದಿನ ಯಾರಾದರೂ ಸಿನಿಮಾ ಮಾಡುವ ಕನಸನ್ನು ಹೊತ್ತು ಬರುತ್ತಾರೆ. ಆದರೆ, ಅವರು ಸ್ಯಾಂಡಲ್ವುಡ್ನಲ್ಲಿ ಗೆಲ್ಲುತ್ತಾರಾ? ಅನ್ನುವುದು ದೊಡ್ಡ ಪ್ರಶ್ನೆಯಾಗಿ ಉಳಿಯುತ್ತೆ. ಕೆಲವರಿಗೆ ಸಿನಿಮಾ ಗೆದ್ದು ಬಿಡುತ್ತೆ. ಕೆಲವರಿಗೆ ನಿರಾಶ ಆಗುವುದು ಗ್ಯಾರಂಟಿ. ಆದರೆ ಪ್ರಯತ್ನ ಮಾತ್ರ ನಿಲ್ಲಿಸುವ ಹಾಗಿಲ್ಲ. ಈಗೊಂದು ಹೊಸಬರ ತಂಡ 'ಗಿಲ್ಕಿ' ಅನ್ನುವ ಸಿನಿಮಾ ಮಾಡಿದೆ. ಹಾಡುಗಳಿಂದಲೇ ಗಮನ ಸೆಳೆಯುತ್ತಿದೆ.
ಕಂಟೆಂಟ್ ಸಿನಿಮಾ ಕೊಟ್ಟರೆ ಪ್ರೇಕ್ಷಕರು ಸಿನಿಮಾ ನೋಡುತ್ತಾರೆ ಅನ್ನುವುದಕ್ಕೆ ಗರುಡ ಗಮನ ವೃಷಭ ವಾಹನದಂತಹ ಸಿನಿಮಾ ಒಂದೊಳ್ಳೆ ಉದಾಹರಣೆ. ಇತ್ತೀಚೆಗೆ ತೆರೆಕಂಡಿರುವ ಈ ಸಿನಿಮಾ ನೋಡಿ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಹೀಗಾಗಿ 'ಗಿಲ್ಕಿ' ತಂಡ ಶಿವನ ಅವತಾರವೆತ್ತಿದ ರಾಜ್ ಬಿ ಶೆಟ್ಟಿಯಿಂದ ಹಾಡೊಂದನ್ನು ಬಿಡುಗಡೆ ಮಾಡಿಸಿದೆ.
'ಗಿಲ್ಕಿ' ಟೈಟಲ್ ಸಾಂಗ್ಗೆ ಭೇಷ್ ಎಂದ 'ಶಿವ'
'ಗಿಲ್ಕಿ' ಸಿನಿಮಾದ ನಿರ್ದೇಶಕ YK ನಿಶ್ಕಲ್ಮಶ ಪ್ರೇಮಕಥೆಯನ್ನು ತೆರೆಮೇಲೆ ತರುತ್ತಿದ್ದಾರೆ. ಸಮಾಜದಿಂದ ದೂರ ಉಳಿದಿರುವ ಮೂವರು ವಿಶೇಷ ಚೇತನ ಜೀವಗಳು ತಮ್ಮದೇ ಆದ ಅದ್ಭುತ ಪ್ರಪಂಚ ಕಟ್ಟಿಕೊಳ್ಳುವ ಅದ್ಭುತ ಪರಿಕಲ್ಪನೆಯೇ ಈ 'ಗಿಲ್ಕಿ'. ಈ ಸಿನಿಮಾ ಪ್ರೇಕ್ಷಕರ ಮನಸ್ಸಿಗೆ ನಾಟುತ್ತದೆ ಅನ್ನುವ ಭರವಸೆಯಲ್ಲಿ ಇಡಿ ಚಿತ್ರತಂಡವಿದೆ. ಇದೊಂದು ಕಂಟೆಂಟ್ ಸಿನಿಮಾ ಆಗಿರುವುದರಿಂದ ಗೆದ್ದೇ ಗೆಲ್ಲುತ್ತೇವೆ ಅನ್ನುವ ನಂಬಿಕೆಯಲ್ಲಿ ಹೊಸಬರ ತಂಡವಿದೆ.
ಗಿಲ್ಕಿ ಚಿತ್ರತಂಡ ಕೆಲವು ದಿನಗಳ ಹಿಂದೆ ಆ ದೇವರೇ ಎನ್ನುವ ಹಾಡನ್ನು ಬಿಡುಗಡೆ ಮಾಡಿತ್ತು. ಆ ಹಾಡು ಸಿನಿಪ್ರಿಯರ ಹೃದಯವನ್ನು ಗೆದ್ದಿತ್ತು. ಇದೀಗ ಮತ್ತೊಂದು ಹಾಡನ್ನು ಬಿಡುಗಡೆ ಮಾಡಿದೆ. ಈ ಹಾಡನ್ನು 'ಗರುಡ ಗಮನ ವೃಷಭ ವಾಹನ' ಸಿನಿಮಾದ ನಟ ಹಾಗೂ ನಿರ್ದೇಶಕ ರಾಜ್ ಬಿ ಶೆಟ್ಟಿ ಬಿಡುಗಡೆ ಮಾಡಿದ್ದಾರೆ. ತೀರ ಸೇರೋ ಅನ್ನುವ ಗಿಲ್ಕಿ ಸಿನಿಮಾದ ಟೈಟಲ್ ಸಾಂಗ್ ಅನ್ನು ಬಿಡುಗಡೆ ಮಾಡಿ ಹಾಡಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತೀರ ಸೇರೊ.. ಹಾಡಿಗೆ ವಾಸುಕಿ ವೈಭವ್ ಸಾಹಿತ್ಯ
ಹೊಸಬರ 'ಗಿಲ್ಕಿ' ಸಿನಿಮಾಗೆ ಸಂಗೀತ ನಿರ್ದೇಶಕ ಹಾಗೂ ಗಾಯಕ ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ. ಆದಿಲ್ ನದಾಫ್ ಈ ಹಾಡಿಗೆ ಅದ್ಭುತವಾಗಿ ಸಂಗೀತ ಸಂಯೋಜನೆ ಮಾಡಿದ್ದಾರೆ. ಈಇಂಪಾದ ಹಾಡನ್ನು ಭರತ್ ನಾಯಕ್ ಹಾಡಿ ಜೀವ ತುಂಬಿದ್ದಾರೆ. ಕಂಟೆಂಟ್ ಬೇಸಡ್ , ಸೋಷಿಯಲ್ ಮೆಸೇಜ್ ಹೊಂದಿರುವ ಸಿನಿಮಾಗಳು ಬಾಕ್ಸಾಫೀಸ್ನಲ್ಲಿ ಗೆಲ್ಲುವುದೇ ಇಲ್ಲ ಅನ್ನು ಮಾತಿತ್ತು. ಆದ್ರೀಗ ಅವುಗಳ ಮಹತ್ವ ಅರಿವಿಗೆ ಬರುತ್ತಿದೆ. ಕಂಟೆಂಟ್ ಸಿನಿಮಾಗಳನ್ನು ಇಷ್ಟ ಪಡುವವರಿಗೆ ಈ ಸಿನಿಮಾ ಹೇಳಿ ಮಾಡಿಸಿದ್ದು ಅನ್ನುತ್ತೆ ಚಿತ್ರತಂಡ. ಈ ಸಿನಿಮಾದಲ್ಲಿ ತಾರಕ್ ಪೊನ್ನಪ್ಪ, ಚೈತ್ರಾ ಆಚಾರ್ ಹಾಗೂ ಗೌತಮ್ ರಾಜ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.