Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ನಮ್ಮ ಕೈ ಬಿಡಬೇಡಿ''- ಸ್ಟಾರ್ ನಟರ ಫ್ಯಾನ್ಸ್ ಗೆ ಸಂಚಾರಿ ವಿಜಯ್ ಮನವಿ
Recommended Video
ಕನ್ನಡ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ತಮ್ಮ ಬೇಸರವನ್ನು ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾರೆ. ತಮ್ಮ 'ಜಂಟಲ್ ಮ್ಯಾನ್' ಸಿನಿಮಾಗೆ ಚಿತ್ರಮಂದಿರ ಸಮಸ್ಯೆ ಎದುರಾಗಿದ್ದು, ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ಪ್ರಜ್ವಲ್ ದೇವರಾಜ್ ಅಭಿನಯದ 'ಜಂಟಲ್ ಮ್ಯಾನ್' ಸಿನಿಮಾ ಕಳೆದ ಶುಕ್ರವಾರ ಬಿಡುಗಡೆಯಾಗಿತ್ತು. ಸಿನಿಮಾಗೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು. ಆದರೂ, ಚಿತ್ರಮಂದಿರಗಳ ಕೊರತೆ ಉಂಟಾಗಿದೆ. ಇಂದು ಕನ್ನಡದಲ್ಲಿಯೇ 12 ಸಿನಿಮಾಗಳು ಬಿಡುಗಡೆ ಆಗಿದ್ದು, 'ಜಂಟಲ್ ಮ್ಯಾನ್'ಗೆ ತೊಂದರೆಯಾಗಿದೆ.
Gentleman Movie Review: ಕುತೂಹಲಕಾರಿಯಾಗಿದೆ ಜಂಟಲ್ ಮ್ಯಾನ್ ಜರ್ನಿ
ಸಂಚಾರಿ ವಿಜಯ್ 'ಜಂಟಲ್ ಮ್ಯಾನ್' ಸಿನಿಮಾದಲ್ಲಿ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದಾರೆ. ಅವರ ಪಾತ್ರಕ್ಕೂ ಒಳ್ಳೆಯ ಮಾತುಗಳು ಕೇಳಿ ಬಂದಿದೆ. ಇದೀಗ ಚಿತ್ರತಂಡ ತಮ್ಮ ಸಿನಿಮಾಗೆ ಆಗುತ್ತಿರುವ ಸಮಸ್ಯೆಯನ್ನು ಜನರ ಮುಂದೆ ಇಟ್ಟಿದೆ. ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಕಪ್ಪು ಡಿಪಿ ಬಳಸಿ ವಿರೋಧ ವ್ಯಕ್ತಪಡಿಸಿದೆ.
ನೋವು ಹಂಚಿಕೊಂಡ ಸಂಚಾರಿ ವಿಜಯ್
ತಮ್ಮ ಫೇಸ್ ಬುಕ್ ಖಾತೆಯಲ್ಲಿ ನಟ ಸಂಚಾರಿ ವಿಜಯ್ ನೋವು ಹಂಚಿಕೊಂಡಿದ್ದಾರೆ. ''ಜಂಟಲ್ ಮ್ಯಾನ್ ಒಂದು ಸ್ವಮೇಕ್ ಸಿನಿಮಾ. ಎಲ್ಲರೂ ಒಳ್ಳೆಯ ಅಭಿಪ್ರಾಯ ನೀಡಿದ್ದಾರೆ. ಆದರೆ, ಸಿನಿಮಾವನ್ನು ಜನರು ನೋಡಬೇಕು ಎನ್ನುವ ಹೊತ್ತಿಗೆ ಅವು ಚಿತ್ರಮಂದಿರಗಳಿಂದ ಕಾಣೆ ಆಗುತ್ತಿದೆ. ಇದು ತುಂಬ ನೋವಿನ ಸಂಗತಿ. ಈ ಚಿತ್ರವನ್ನು ದಯಮಾಡಿ ಕೈ ಬಿಡಬೇಡಿ.'' ಎಂದಿದ್ದಾರೆ.
ಚಿತ್ರಮಂದಿರಗಳು ಸಿಗುತ್ತಿಲ್ಲ
''ಇಂತಹ ಸಿನಿಮಾಗಳು ಗೆದ್ದರೆ ಕನ್ನಡದಲ್ಲಿ ಹೊಸ ಅಲೆಯ ನಿರ್ದೇಶಕ, ನಿರ್ಮಾಪಕರು ಹುಟ್ಟಿಕೊಳ್ಳುತ್ತಾರೆ. ಯಾವುದೇ ಕಳಪೆ ಸಿನಿಮಾ ಆಗಿದ್ದರೆ, ನಾನು ಮಾತನಾಡುತ್ತಿರಲಿಲ್ಲ. ಸಿನಿಮಾ ಎರಡನೇ ವಾರಕ್ಕೆ ಕಾಲಿಟ್ಟಿದೆ. ಆದರೆ, ಬೇರೆ ಬೇರೆ ಸಿನಿಮಾಗಳು ಬರುತ್ತಿರುವ ಕಾರಣ ಒಂದಷ್ಟು ಚಿತ್ರಮಂದಿರಗಳು ಸಿಗುತ್ತಿಲ್ಲ.'' - ಸಂಚಾರಿ ವಿಜಯ್, ನಟ
ಅಬ್ಬಾ! ನಾಳೆ ಬರೋಬ್ಬರಿ 12 ಕನ್ನಡ ಸಿನಿಮಾಗಳ ಬಿಡುಗಡೆ
ಸಿನಿಮಾವನ್ನು ಉಳಿಸಿಕೊಡಿ
''ನಾನು ಎಲ್ಲವೂ ಒಳ್ಳೆಯ ಸಿನಿಮಾ ಮಾಡಲು ಆಗಿಲ್ಲ. ಆದರೆ, ಒಳ್ಳೆಯ ಸಿನಿಮಾ ಮಾಡಿದಾಗಲೂ ಚಿತ್ರಮಂದಿರದಿಂದ ತೆಗೆದಿದ್ದಾರೆ. 'ಜಂಟಲ್ ಮ್ಯಾನ್' ಜನರಿಗೆ ತಲುಪುತ್ತಿದೆ. ಶನಿವಾರ ಮತ್ತು ಭಾನುವಾರ ಸಿನಿಮಾ ನೋಡಿ. ಹಾಗಾದರೆ, ಸೋಮವಾರದಿಂದ ಸಿನಿಮಾ ಮುಂದೆ ಹೋಗುತ್ತದೆ. ಇದೇ ಸಿನಿಮಾ ಬೇರೆ ಭಾಷೆಯಲ್ಲಿ ಬಂದಿದ್ದರೆ, ನಾವು ಕನ್ನಡಿಗರೇ ಹೆಚ್ಚು ಪ್ರೋತ್ಸಾಹ ನೀಡುತ್ತೇವೆ. ಈಗ ಈ ಚಿತ್ರವನ್ನು ಉಳಿಸಿಕೊಡಿ.'' - ಸಂಚಾರಿ ವಿಜಯ್, ನಟ
ಸ್ಟಾರ್ ನಟರ ಅಭಿಮಾನಿಗಳಿಗೆ ಮನವಿ
''ಇಡೀ ತಂಡದ ಶ್ರಮ ನೀವು ನೋಡಿದರೆ ಮಾತ್ರ ಉಳಿಯುತ್ತದೆ. ನಾನು ದರ್ಶನ್ ಸರ್, ಸುದೀಪ್ ಸರ್, ಶಿವಣ್ಣ ಸರ್ ಪುನೀತ್ ಸರ್, ಯಶ್ ಸರ್ ಹೀಗೆ ಎಲ್ಲ ಸ್ಟಾರ್ ನಟರ ಅಭಿಮಾನಿಗಳಿಗೆ ಮನವಿ ಮಾಡುತ್ತೇನೆ. ನೀವು ಹೆಚ್ಚು ಹೆಚ್ಚು ಜನರಿಗೆ ಈ ಸಿನಿಮಾ ತಲುಪಿಸಿದಷ್ಟು ಸಹಾಯ ಆಗುತ್ತದೆ. ನೀವು ಕೈ ಬಿಡುವುದಿಲ್ಲ ಎನ್ನುವ ನಂಬಿಕೆ ಇದೆ.'' - ಸಂಚಾರಿ ವಿಜಯ್, ನಟ