Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಯಂತ್ ಕಾಯ್ಕಿಣಿ ಕಥೆಗೆ ದೃಶ್ಯ ರೂಪ ನೀಡುತ್ತಿದ್ದಾರೆ ಗಿರೀಶ್ ಕಾಸರವಳ್ಳಿ
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ 7 ವರ್ಷಗಳ ನಂತರ ಮತ್ತೆ ನಿರ್ದೇಶನ ಮಾಡಲು ಹೊರಟಿದ್ದಾರೆ. 2012 ರಲ್ಲಿ ಬಿಡುಗಡೆಯಾದ 'ಕೂರ್ಮಾವತಾರ' ಬಳಿಕ ಯಾವ ಚಿತ್ರವನ್ನು ಗಿರೀಶ್ ಕಾಸರವಳ್ಳಿ ಶುರು ಮಾಡಿರಲಿಲ್ಲ.
ಸಾಹಿತಿ ಜಯಂತ್ ಕಾಯ್ಕಿಣಿ ಬರೆದ 'ಹಾಲಿನ ಮೀಸೆ' ಕಥೆ ಆಧರಿಸಿ ಸಿನಿಮಾ ಮಾಡುವ ತಯಾರಿಯನ್ನು ಗಿರೀಶ್ ಕಾಸರವಳ್ಳಿ ಮಾಡಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ ಹೆಸರು ಸಹ ನಿರ್ಧಾರವಾಗಿದ್ದು, 'ಇಲ್ಲಿರಲಾರೆ ಅಲ್ಲಿಗೂ ಹೋಗಲಾರೆ' ಎಂದು ಶೀರ್ಷಿಕೆ ಇಡಲಾಗಿದೆ.
ಕನ್ನಡ ಸಂಸ್ಕೃತಿಯನ್ನು ಡಬ್ಬಿಂಗ್ ಹಾಳು ಮಾಡುತ್ತದೆ ಎಂದ ನಿರ್ದೇಶಕ ಗಿರೀಶ್ ಕಾಸರವಳ್ಳಿ
ಗಿರೀಶ್ ಕಾಸರವಳ್ಳಿ ಹೊಸ ಸಿನಿಮಾಗೆ ಶಿವಕುಮಾರ ಬಂಡವಾಳ ಹಾಕುತ್ತಿದ್ದಾರೆ. ಕಾಯ್ಕಿಣಿ ಅವರ ಈ ಕಥೆ ಮುಂಬೈನಲ್ಲಿ ನಡೆಯುತ್ತಿದ್ದರೂ, ಅದನ್ನು ಕನ್ನಡಕ್ಕೆ ತಕ್ಕ ಹಾಗೆ ಕೆಲವು ಸಣ್ಣ ಪುಟ್ಟ ಬದಲಾವಣೆ ಮಾಡಿಕೊಳ್ಳಲಾಗುತ್ತಿದೆಯಂತೆ.
ಸಪ್ಟೆಂಬರ್ ಎರಡನೇ ವಾರದಿಂದ 'ಇಲ್ಲಿರಲಾರೆ ಅಲ್ಲಿಗೂ ಹೋಗಲಾರೆ' ಚಿತ್ರದ ಚಿತ್ರೀಕರಣ ಪ್ರಾರಂಭ ಆಗುತ್ತಿದೆ. ಸದ್ಯ, ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಹೆಚ್ ಎಂ ರಾಮಚಂದ್ರ ಛಾಯಾಗ್ರಹಣ ಮಾಡುತ್ತಿದ್ದಾರೆ.
ಕನ್ನಡ ಚಿತ್ರರಂಗದ ಏಳಿಗೆ ಬಗ್ಗೆ ಗಿರೀಶ್ ಕಾಸರವಳ್ಳಿ ಮಾತು
ಈಗಾಗಲೇ, ಕನ್ನಡದ ಖ್ಯಾತ ಕಾದಂಬರಿಗಳನ್ನು ಪರದೆ ಮೇಲೆ ತಂದ ಕೀರ್ತಿ ಪಡೆದಿರುವ ಗಿರೀಶ್ ಕಾಸರವಳ್ಳಿ, ಈಗ ಕಾಯ್ಕಿಣಿ ಕಥೆಗೆ ದೃಶ್ಯ ರೂಪ ನೀಡುತ್ತಿದ್ದಾರೆ.