Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನಂತಮೂರ್ತಿ ಕುರಿತು ಗಿರೀಶ್ ಕಾಸರವಳ್ಳಿ ಚಿತ್ರ
ಪ್ರತಿಭಾನ್ವಿತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಜ್ಞಾನಪೀಠ ಪುರಸ್ಕೃತ ಸಾಹಿತಿ ಯು.ಆರ್.ಅನಂತಮೂರ್ತಿ ಅವರ ಕುರಿತು ಒಂದು ಸಾಕ್ಷ್ಯಚಿತ್ರ ಮಾಡಿದ್ದಾರೆ. ತಮ್ಮ ಸಾಕ್ಷ್ಯಚಿತ್ರಕ್ಕೆ ಅವರು "Ananthamurthy not a Biography But Hypothesis" ಎಂದು ಹೆಸರಿಟ್ಟಿದ್ದಾರೆ.
ಫಿಲಂಸ್ ಡಿವಿಜನ್ ನಿರ್ಮಿಸಿರುವ ಈ ಸಾಕ್ಷ್ಯಚಿತ್ರದ ಪ್ರದರ್ಶನ ಶನಿವಾರ (ಡಿ.14) ಬೆಂಗಳೂರು ಇನ್ಫೆಂಟ್ರಿ ರಸ್ತೆಯಲ್ಲಿರುವ ವಾರ್ತಾ ಇಲಾಖೆಯ ಸುಲೋಚನಾ ಹಾಲ್ ನಲ್ಲಿ ಪ್ರದರ್ಶಿಸಲಾಗುತ್ತಿದೆ. ಬೆಳಗ್ಗೆ 10.30ಕ್ಕೆ ಪ್ರದರ್ಶನವಿರುತ್ತದೆ.
ಈ ಸಾಕ್ಷ್ಯಚಿತ್ರ ಅನಂತಮೂರ್ತಿ ಅವರ ಬಗ್ಗೆ ಹೊಸ ಬೆಳಕು ಚೆಲ್ಲಲಿದೆ. ಅವರ ಸಾಮಾಜಿಕ ಹೋರಾಟ, ಗಾಂಧಿಜಿಯವರ ಆದರ್ಶ, ಸಮಾಜವಾದಿ ಧೋರಣೆ ಇವೆಲ್ಲವನ್ನೂ ಚಿತ್ರದಲ್ಲಿ ನೋಡಬಹುದು. ಹಲವು ದಶಕಗಳಿಂದ ಚಿಂತಕರು, ವಿಮರ್ಶಕರ ಜೊತೆಗಿನ ಅವರ ಒಡನಾಟವನ್ನೂ ಕಾಣಬಹುದಾಗಿದೆ.
ಈ ಸಾಕ್ಷ್ಯಚಿತ್ರಕ್ಕೆ ಗಿರೀಶ್ ಕಾಸರವಳ್ಳಿ ಅವರು ಚಿತ್ರಕಥೆ ಹಾಗೂ ನಿರ್ದೇಶನ ಮಾಡಿದ್ದಾರೆ. ಛಾಯಾಗ್ರಹಣ ಜಿ.ಎಸ್.ಭಾಸ್ಕರ್, ವಿಷಯ ಸಮಾಲೋಚನೆ ಎನ್.ಮನುಚಕ್ರವರ್ತಿ, ಸಂಕಲನ ಮೋಹನ್ ಕಾಮಾಕ್ಷಿ, ಸಂಗೀತ ಬಿಂದು ಮಾಲಿನಿ ಹಾಗೂ ಗೋಕುಲ್ ಅಭಿಷೇಕ್ ಧ್ವನಿ ಇದೆ. (ಒನ್ಇಂಡಿಯಾ ಕನ್ನಡ)