Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮದುವೆ ವಿಚಾರವಾಗಿ ಮತ್ತೆ ಸುದ್ದಿಯಲ್ಲಿ ನಟ ದುನಿಯಾ ವಿಜಯ್!
ನಟ ದುನಿಯಾ ವಿಜಯ್ ಅವರ ಹೆಸರು ಮದುವೆ ವಿಚಾರದಲ್ಲಿ ಸದ್ದು ಮಾಡುತ್ತಿದೆ. ಆದರೆ ಇದು ದುನಿಯಾ ವಿಜಯ್ ಅವರ ಅಪ್ಪಟ್ಟ ಅಭಿಮಾನಿಯ ಮದುವೆ ಸುದ್ದಿ. ಈ ಅಭಿಮಾನಿ ವಿಜಯ್ ಅವರ ಬಳಿ ವಿಶೇಷವಾದ ಬೇಡಿಕೆ ಇಟ್ಟಿದ್ದಾಳೆ.
ಈಕೆಯ ಮದುವೆ ವಿಚಾರ ಸ್ಯಾಂಡಲ್ವುಡ್ನಲ್ಲಿ ಸದ್ದು ಮಾಡುತ್ತಿದೆ. ಅದಕ್ಕೆ ಕಾರಣ ನಟ ದುನಿಯಾ ವಿಜಯ್. ಅದು ಹೇಗೆ ಅಂದರೆ ದಾವಣಗೆರೆ ಮೂಲಕ ಈ ಯುವತಿ ನಟ ದುನಿಯಾ ವಿಜಯ್ ಅವರ ಅಪ್ಪಟ್ಟ ಅಭಿಮಾನಿ. ಹಾಗಾಗಿ ಅವರಿಗೆ ಮದುವೆ ಆಹ್ವಾನ ನೀಡಿದ್ದಾಳೆ.
ದುನಿಯಾ ವಿಜಯ್ ಅವರಿಗೆ ಮದುವೆ ಆಹ್ವಾನ ನೀಡೋದು ಮಾತ್ರವಲ್ಲ, ಆಕೆ ದುನಿಯಾ ವಿಜಯ್ ಮದುವೆಗೆ ಬರಲೇಬೇಕು ಎಂದು ಪಟ್ಟು ಹಿಡಿದ್ದಾಳೆ.
ದುನಿಯಾ ವಿಜಯ್ ಬಾರದೇ ತಾಳೀ ಕಟ್ಟಿಸಿಕೊಳ್ಳಲ್ಲ: ಅಭಿಮಾನಿ!
ದಾವಣಗೆರೆ ಮೂಲದ ಅನುಷಾ ಎಂಬ ಯುವತಿ ದುನಿಯಾ ವಿಜಯ್ ಅವರ ಅಭಿಮಾನಿ. ಹಾಗಾಗಿ ಸ್ಯಾಂಡಲ್ವುಡ್ ನಟ ದುನಿಯಾ ವಿಜಯ್ ಅವರು ಆಗಮಿಸಿ ಆಶೀರ್ವಾದ ಮಾಡಿದರೆ ಮಾತ್ರ ಮದುವೆಯಾಗುತ್ತೇನೆ ಎಂದು ಪಟ್ಟು ಹಿಡಿದಿದ್ದಾಳೆ.
ಈ ಯುವತಿ ನಟ ದುನಿಯಾ ವಿಜಯ್ ಬರುವವರೆಗೂ ತಾಳಿ ಕಟ್ಟಿಸಿ ಕೊಳ್ಳುವುದಿಲ್ಲ ಅಂತ ಹಠ ಹಿಡಿದಿದ್ದಾಳೆ. ತನ್ನ ಮದುವೆಗೆ ದುನಿಯಾ ವಿಜಯ್ ಅವರ ಆಶೀರ್ವಾದ ಬೇಕು ಎನ್ನುತ್ತಿದ್ದಾಳೆ. ಮದುವೆಗೆ ಯಾರು ಬರದಿದ್ದರೂ ತೊಂದರೆಯಿಲ್ಲ. ಆದರೆ, ದುನಿಯಾ ವಿಜಯ್ ಬರಲೇಬೇಕು. ಇಲ್ಲದಿದ್ದರೆ ಮದುವೆಯೇ ಆಗುವುದಿಲ್ಲ ಎಂಬ ನಿರ್ಧಾರ ಮಾಡಿದ್ದಾಳೆ ಈ ಯುವತಿ.
ಮನೆಗೆ 'ದುನಿಯಾ ಋಣ' ಎಂದು ನಾಮಕರಣ!
ಅಷ್ಟಕ್ಕೂ ಈ ಕುಟುಂಬದಲ್ಲಿ ಅನುಷಾ ಮಾತ್ರ ದುನಿಯಾ ವಿಜಯ್ ಅಭಿಮಾನಿ ಅಲ್ಲ. ಬದಲಿಗೆ ಅವರ ಇಡೀ ಕುಟುಂಬವೇ ದುನಿಯಾ ವಿಜಯ್ ಅಭಿಮಾನಿ. ಅವರ ಮನೆಗೆ 'ದುನಿಯಾ ಋಣ' ಎನ್ನುವ ಹೆಸರು ಇಟ್ಟಿದ್ದಾರೆ. ಐದು ವರ್ಷದ ಹಿಂದೆ ಮನೆ ಕಟ್ಟಿದ್ದು ಗೃಹ ಪ್ರವೇಶಕ್ಕೆ ನಟ ದುನಿಯಾ ವಿಜಯ್ ಬರಬೇಕೆಂದು ಆಗಲೂ ಮನೆಯನ್ನು ಹಾಗೆಯೇ ಬಿಟ್ಟಿದ್ದು. ನಂತರ ದುನಿಯಾ ವಿಜಯ್ ಅವರ ಮನೆಯ ಗೃಹ ಪ್ರವೇಶಕ್ಕೆ ಹೋಗಿದ್ದರು.
ಇದೇ ನವೆಂಬರ್ 29ಕ್ಕೆ ಅನುಷಾ ಮದುವೆ!
ಶಿವಾನಂದ ಭಜಂತ್ರಿ ಅವರ ಪುತ್ರಿ ಅನುಷಾ. ಈಕೆಯ ವಿವಾಹವು ಸ್ವಗೃಹದಲ್ಲಿ ನವೆಂಬರ್ 29ರಂದು ನಡೆಯಲಿದೆ. ಪ್ರಕಾಶ್ ಎಂಬ ಯುವಕನ ಜೊತೆ ಮದುವೆ ನಿಶ್ಚಯವಾಗಿದೆ. ವಿವಾಹ ಆಮಂತ್ರಣ ಪತ್ರಿಕೆಯಲ್ಲೂ ತಮ್ಮ ಫೋಟೊ ಪಕ್ಕ ನೆಚ್ಚಿನ ನಟ ದುನಿಯಾ ವಿಜಯ್ ಅವರ ಫೋಟೊವನ್ನು ಮುದ್ರಿಸಿದ್ದಾರೆ. ಜೊತೆಗೆ 'ಒಂಟಿ ಸಲಗ' ಎಂದು ತಮ್ಮ ಕೈಗೆ ಅನುಷಾ ಹಚ್ಚೆಯನ್ನೂ ಹಾಕಿಸಿಕೊಂಡಿದ್ದಾರೆ.
ಅಭಿಮಾನಿಯ ಆಸೆ ಪೂರೈಸುತ್ತಾರಾ ದುನಿಯಾ ವಿಜಯ್!
ದುನಿಯಾ ವಿಜಯ್ ಅವರ ಅಪ್ಪಟ ಅಭಿಮಾನಿ ಅನುಷಾ ಅವರು ತಮ್ಮ ಮದುವೆಗೆ ನೆಚ್ಚಿನ ನಟ ಬರಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸದ್ಯ ದುನಿಯಾ ವಿಜಯ್ ಅವರ ದಾರಿ ಕಾಯುತ್ತಿದ್ದಾರೆ. ಈ ಸುದ್ದಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಅಭಿಮಾನಿಯ ಆಸೆಯನ್ನು ದುನಿಯಾ ವಿಜಯ್ ಪೂರ್ಣ ಮಾಡುತ್ತಾರ? ಅಭಿಮಾನಿ ಮದುವೆಗೆ ಹೋಗುತ್ತಾರಾ ಎನ್ನುವ ಕುತೂಹಲ ಹಟ್ಟಿಕೊಂಡಿದೆ.