Don't Miss!
- News Priyanka Gandhi V/s Amit Shah: ಕದನ ಕಣ ಬೆಂಗಳೂರು ದಕ್ಷಿಣದಲ್ಲಿ ಪ್ರಿಯಾಂಕಾ ಗಾಂಧಿ, ಅಮಿತ್ ಶಾ ಮುಖಾಮುಖಿ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗೋಧಿ ಬಣ್ಣ ಸಾಧಾರಣ ಮೈ ಕಟ್ಟು' ಚಿತ್ರಕ್ಕೆ ಮೂರು ವರ್ಷ
ಗೋಧಿ ಬಣ್ಣ ಸಾಧಾರಣ ಮೈ ಕಟ್ಟು ಕನ್ನಡ ಚಿತ್ರಂಗದಲ್ಲಿ ತೆರೆಗೆ ಬಂದ ಒಂದು ವಿಭಿನ್ನ ಸಿನಿಮಾ. ಕನ್ನಡ ಚಿತ್ರಾಭಿಮಾನಿಗಳ ಮನಗೆದ್ದು ಭರ್ಜರಿ ಯಶಸ್ಸುಗೊಳಿಸಿತ್ತು. ತಂದೆ ಮಗನ ಬಾಂಧವ್ಯದ ನಡುವೆ ಇದ್ದ ಈ ಸಿನಿಮಾ ಕನ್ನಡ ಪ್ರೇಕ್ಷಕರ ಮನ ಕಲಕುವಂತಿತ್ತು.
ತಂದೆಯ ಪಾತ್ರದಲ್ಲಿ ಅನಂತ್ ನಾಗ್ ಮಗನ ಪಾತ್ರದಲ್ಲಿ ರಕ್ಷಿತ್ ಶೆಟ್ಟಿ ಕಾಣಿಸಿಕೊಂಡಿದ್ದರು. ಅನಂತ್ ನಾಗ್ ಪಾತ್ರ ನೋಡುಗರ ಮನ ಮುಟ್ಟುವಂತಿತ್ತು. ಕಳೆದು ಹೋಗುವ ತಂದೆಯನ್ನು ಹುಡುಕುವ ಮಗನ ಕಥೆ ಇದಾಗಿತ್ತು. ಈ ಸಿನಿಮಾದ ಬಗ್ಗೆ ಈಗ್ಯಾಕೆ ಅಂದ್ರೆ ಚಿತ್ರ ರಿಲೀಸ್ ಆಗಿ ಮೂರು ವರ್ಷಗಳು ಕಳೆದಿವೆ.
ಮತ್ತೆ ನಿರ್ದೇಶನಕ್ಕೆ ಮರಳಿದ ಸಿಂಪಲ್ ಸ್ಟಾರ್: ರಕ್ಷಿತ್ ಈಗ 'ಪುಣ್ಯಕೋಟಿ'
2016 ಜೂನ್ 3ರಂದು ಗೋಧಿ ಬಣ್ಣ ಸಾಧಾರಣ ಮೈ ಕಟ್ಟು ಸಿನಿಮಾ ರಿಲೀಸ್ ಆಗಿತ್ತು. ನಿರ್ದೇಶಕ ಹೇವಂತ್ ರಾವ್ ನಿರ್ದೇಶನದ ಮೊದಲ ಸಿನಿಮಾ. ಹೇಮಂತ್ ರಾವ್ ಚೊಚ್ಚಲ ಚಿತ್ರದಲ್ಲೆ ಸ್ಯಾಂಡಲ್ ವುಡ್ ನ ಬರವಸೆಯ ನಿರ್ದೇಶಕನಾಗಿ ಗಮನ ಸೆಳೆದಿದ್ರು.
ಅನಂತ್ ನಾಗ್, ರಕ್ಷಿತ್ ಶೆಟ್ಟಿ, ವಸಿಷ್ಠ ಸಿಂಹ ಮತ್ತು ಶ್ರುತಿ ಹರಿಹರನ್ ಅಭಿನಯ, ಚರಣ್ ರಾಜ್ ಸಂಗೀತ ಹೇಮಂತ್ ರಾವ್ ನಿರ್ದೇಶನ 'ಗೋಧಿ ಬಣ್ಣ ಸಾಧಾರಣ ಮೈ ಕಟ್ಟು' ಒಂದೊಳ್ಳೆ ಸಿನಿಮಾವಾಗಿ ಹೊರಹೊಮ್ಮಲು ಕಾರಣವಾಗಿತ್ತು. ಚಿತ್ರಕ್ಕೆ ನಿರ್ಮಾಪಕ ಪುಷ್ಕರ್ ಮಲ್ಲಿಖಾರ್ಜುನಯ್ಯ ಬಂಡವಾಳ ಹೂಡಿದ್ದರು.
ಸದ್ಯ ಮೂರು ವರ್ಷದ ಸಂದರ್ಭದಲ್ಲಿ ಹಳೆಯ ನೆನಪನ್ನು ಮೆಲುಕು ಹಾಕಿದ್ದಾರೆ ನಿರ್ದೇಶಕ ಹೇವಂತ್ ರಾವ್. "ಈ ಸಿನಿಮಾ ನನ್ನ ಜೀವನವನ್ನು ಸಂಪೂರ್ಣವಾಗಿ ಬದಲಾಯಿಸಿತು. ಈ ಸಿನಿಮಾ ಈ ಮಟ್ಟಕ್ಕೆ ಸಕ್ಸಸ್ ಆಗಲು ಕಾರಣರಾದ ಎಲ್ಲರಿಗೂ, ಚಿತ್ರತಂಡ, ಕಲಾವಿದರು ಮತ್ತು ಪ್ರೇಕ್ಷಕರಿಗೆ ನಾನು ಕೃತಜ್ಞನಾಗಿರುತ್ತೇನೆ" ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಗೋಧಿ ಬಣ್ಣ ಸಾಧಾರಣ ಮೈ ಕಟ್ಟು ಸಿನಿಮಾ ರಿಲೀಸ್ ಆದ ನಂತರ ಅಂದ್ರೆ ವರ್ಷಗಳ ಬಳಿಕ ಹೇಮಂತ್ ರಾವ್ ಮತ್ತೊಂದು ಸಿನಿಮಾ 'ಕವಲುದಾರಿ' ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಕವಲುದಾರಿ ಇತ್ತೀಚಿಗಷ್ಟೆ ರಿಲೀಸ್ ಆಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.