Just In
- 1 hr ago
ಹಿಂದೂ ಭಾವನೆಗಳಿಗೆ ಧಕ್ಕೆ; ಸೈಫ್ ನಟನೆಯ 'ತಾಂಡವ್' ವೆಬ್ ಸರಣಿ ವಿರುದ್ಧ ಬಿಜೆಪಿ ನಾಯಕರ ದೂರು
- 2 hrs ago
ಕಪಾಳಮೋಕ್ಷ ಆರೋಪ; ನಟ ಮಹೇಶ್ ಮಂಜ್ರೇಕರ್ ವಿರುದ್ಧ ದೂರು ದಾಖಲು
- 3 hrs ago
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
- 15 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
Don't Miss!
- News
ನೆದರ್ಲೆಂಡ್ಸ್ ಅಂಗಸಂಸ್ಥೆ ಮೂಲಕ ಭಾರತದಲ್ಲಿ ಹೂಡಿಕೆ ಮಾಡಲಿದೆ ಟೆಸ್ಲಾ
- Automobiles
ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಹೊಸ ಸಫಾರಿ ಎಸ್ಯುವಿ
- Finance
ದೆಹಲಿಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಮುಟ್ಟಿದ ಪೆಟ್ರೋಲ್: ನಿಮ್ಮ ನಗರದಲ್ಲೆಷ್ಟು?
- Sports
ಐಎಸ್ಎಲ್: ಸಮಬಲದ ಪ್ರದರ್ಶನ ನೀಡಿ ಡ್ರಾ ಮಾಡಿಕೊಂಡ ಎಟಿಕೆಎಂಬಿ, ಗೋವಾ
- Lifestyle
ಅಂಡಾಣು ಶೈತ್ಯೀಕರಣ: ಮಗುವನ್ನು ಪಡೆಯಲು ಈ ವಿಧಾನ ಸುರಕ್ಷಿತವೇ?
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಟಿ ರಮ್ಯಾ ನೀರ್ ದೋಸೆ ಈಗ ಖಾಲಿ ದೋಸೆ
ಇದ್ದಕ್ಕಿದ್ದಂತೆ ರಮ್ಯಾ ಅವರಿಗೆ ಅದೇನಾಯಿತೋ ಏನೋ ಚಿತ್ರವನ್ನು ಕೈಬಿಟ್ಟಿದ್ದಾರೆ. ಈ ಬಗ್ಗೆ ಟ್ವೀಟಿಸಿರುವ ಅವರು, "ಚಿತ್ರಕಥೆ ತುಂಬಾ ಇಷ್ಟವಾಗಿತ್ತು. ಆದರೆ ಆ ಪಾತ್ರಕ್ಕೆ ತಮ್ಮ್ಮಿಂದ ಸಾತ್ವಿಕ ನ್ಯಾಯ ಒದಗಿಸಲು ಸಾಧ್ಯವಾಗಲ್ಲ. ಹಾಗಾಗಿ ತಾನು ಚಿತ್ರದಿಂದ ಹೊರಬರುತ್ತಿದ್ದೇನೆ" ಎಂದಿದ್ದಾರೆ.
ರಮ್ಯಾ ಅವರ ಈ ದಿಢೀರ್ ನಿರ್ಧಾರದಿಂದ ಚಿತ್ರತಂಡಕ್ಕೆ ಖಾಲಿ ದೋಸೆ ಸವಿದಂತಾಗಿದೆ. ಆದರೆ ರಮ್ಯಾ ಇಲ್ಲದೆಯೂ 'ನೀರ್ ದೋಸೆ' ಹುಯ್ಯುವುದಾಗಿ ಚಿತ್ರದ ನಿರ್ದೇಶಕ ವಿಜಯ್ ಪ್ರಸಾದ್ ಹೇಳಿದ್ದಾರೆ. ರು.15 ಲಕ್ಷ ಮುಂಗಡ ಹಣನ್ನು ರಮ್ಯಾ ವಾಪಸ್ ಮಾಡಿದ್ದಾಗಿ ಅವರು ತಿಳಿಸಿದ್ದಾರೆ.
ಈ ಚಿತ್ರದಲ್ಲಿ ಅಭಿನಯಿಸಲು ರಮ್ಯಾ ಜೊತೆ ರು.48 ಲಕ್ಷ ಮಾತುಕತೆಯಾಗಿತ್ತು. ರು.15 ಲಕ್ಷ ಅಡ್ವಾನ್ಸ್ ಕೊಡಲಾಗಿತ್ತು. ಇನ್ನು ರು.5 ಲಕ್ಷ ಕೊಟ್ಟು ಒಪ್ಪಂದ ಪತ್ರಗಳಿಗೆ ಸಹಿ ಮಾಡಿಸಿಕೊಳ್ಳಬೇಕಾಗಿತ್ತು. ಅಷ್ಟರಲ್ಲಿ 'ನೀರ್ ದೋಸೆ'ಗೆ ರಮ್ಯಾ ತಣ್ಣೀರೆರಚಿದ್ದಾರೆ.
ಚಿತ್ರದಲ್ಲಿ ರಮ್ಯಾ ಅವರು ವೇಶ್ಯೆ ಪಾತ್ರ ಪೋಷಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಪಾತ್ರ ಮಾಡಿದರೆ ಎಲ್ಲಿ ತಮ್ಮ ಗೌರವಕ್ಕೆ ಧಕ್ಕೆ ಬರುತ್ತದೋ ಎಂದು ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನುತ್ತವೆ ಮೂಲಗಳು. 'ನೀರ್ ದೋಸೆ' ಚಿತ್ರದ ಚಿತ್ರೀಕರಣ ಇನ್ನೇನು ಆರಂಭವಾಗಬೇಕಿತ್ತು. (ಒನ್ಇಂಡಿಯಾ ಕನ್ನಡ)