Don't Miss!
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ರೇಕ್ ನಿರೀಕ್ಷೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್
ಗೋಲ್ಡನ್ ಸ್ಟಾರ್ ಗಣೇಶ್ ಅವರ 'ಸಕ್ಕರೆ' ಚಿತ್ರ ಹಲವಾರು ಕಾರಣಗಳಿಗಾಗಿ ನಿರೀಕ್ಷಿಸುವಂತಾಗಿದೆ. ಮೊದಲನೆಯದಾಗಿ ಶೈಲಜಾ ನಾಗ್ ಹಾಗೂ ಬಿ ಸುರೇಶ್ ಅವರ ನಿರ್ಮಾಣದ ಚಿತ್ರ ಎಂಬ ಕಾರಣಕ್ಕೆ. ಏನೋ ಹೊಸದನ್ನು ಕೊಡುತ್ತಾರೆ ಎಂಬ ನಿರೀಕ್ಷೆಗಳು ನಿರ್ಮಾಪಕರ ಮೇಲಿವೆ.
ಇನ್ನು ಗೋಲ್ಡನ್ ಸ್ಟಾರ್ ಗಣೇಶ್ ಸಹ ಬ್ರೇಕ್ ನಿರೀಕ್ಷೆಯಲ್ಲಿದ್ದಾರೆ. ಸಕ್ಕರೆಗೂ ಮುನ್ನ ಬಿಡುಗಡೆಯಾದ ರೋಮಿಯೋ, ಮಿ.420 ಹಾಗೂ ಆಟೋರಾಜ ಚಿತ್ರಗಳು ನಿರೀಕ್ಷಿಸಿದ ಮಟ್ಟದಲ್ಲಿ ಸದ್ದು ಮಾಡಲಿಲ್ಲ. ಈಗ 'ಸಕ್ಕರೆ'ಯ ಅಕ್ಕರೆ ನಿರೀಕ್ಷೆಯಲ್ಲಿದ್ದಾರೆ.
ಮೀಡಿಯಾ ಹೌಸ್ ಸ್ಟೂಡಿಯೋ ಲಾಂಛನದಲ್ಲಿ ಶೈಲಜಾನಾಗ್ ಹಾಗೂ ಬಿ.ಸುರೇಶ್ ನಿರ್ಮಿಸಿರುವ ಚಿತ್ರ. ಅಭಯಸಿಂಹ ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆಯನ್ನೂ ಬರೆದಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ದೀಪಾಸನ್ನಿಧಿ, ಅನಂತನಾಗ್, ವಿನಯಾಪ್ರಸಾದ್, ಅನುಪ್ರಭಾಕರ್, ರಾಜೇಶ್, ಅಚ್ಯುತಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ವಿ.ಹರಿಕೃಷ್ಣ ಸಂಗೀತ ನೀಡಿರುವ ಈ ಚಿತ್ರಕ್ಕೆ ಡಾ.ವಿಕ್ರಂ ಶ್ರೀವಾತ್ಸವ್ ಅವರ ಛಾಯಾಗ್ರಹಣವಿದೆ. ಜೋ.ನಿ.ಹರ್ಷ ಸಂಕಲನ, ಹರ್ಷ, ಚಿನ್ನಿ ಪ್ರಕಾಶ್ ನೃತ್ಯ ನಿರ್ದೇಶನ, ಮಾಸ್ ಮಾದ ಸಾಹಸ ನಿರ್ದೇಶನ, ಶಶಿಧರ್ ಅಡಪ ಕಲಾ ನಿರ್ದೇಶನವಿರುವ 'ಸಕ್ಕರೆ' ಚಿತ್ರದ ಸಂಭಾಷಣೆಯನ್ನು ಸುಮನ್ ದೀಪ್ ಬರೆದಿದ್ದಾರೆ. (ಒನ್ಇಂಡಿಯಾ ಕನ್ನಡ)