Don't Miss!
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತುಳುವಿನಲ್ಲೂ ಬಂದಿದೆ 'ಗೋಲ್ ಮಾಲ್' ಸಿನಿಮಾ
ಹಿಂದಿಯಲ್ಲಿ 'ಗೋಲ್ ಮಾಲ್' ಸೀರಿಸ್ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಈಗ ತುಳುಭಾಷೆಯಲ್ಲಿಯೂ ಗೋಲ್ಮಾಲ್' ಸಿನಿಮಾ ಬರುತ್ತಿದೆ.
ನಾಯಕ ನಟನ ಕಿರಿಕ್ : ನಟಿ ಮೇಲೆ ಹಲ್ಲೆ ನಡೆಸಿದ ನಟ
ಶ್ರೀ ಮಹಾಕಾಳಿ ಮಹಾಮಂತ್ರ ಕ್ರಿಯೇಷನ್ಸ್ ಲಾಂಛನದಲ್ಲಿ ತಯಾರಾದ ಮಂಜುನಾಥ ನಾಯಕ್ ಕಾರ್ಕಳ ಮತ್ತು ಅಕ್ಷಯ ಪ್ರಭು ನಿರ್ಮಾಣದಲ್ಲಿ ರಮಾನಂದ ನಾಯಕ್ ನಿರ್ದೇಶನದ 'ಗೋಲ್ಮಾಲ್' ತುಳು ಚಲನಚಿತ್ರದ ಬಿಡುಗಡೆ ಸಮಾರಂಭವು ಮಂಗಳೂರಿನ ಜ್ಯೋತಿ ಚಲನ ಚಿತ್ರಮಂದಿರದಲ್ಲಿ ನಡೆಯಿತು.
ಯಶಸ್ವಿ 25 ದಿನ ಪೂರೈಸಿದ ತುಳು ಹಾಸ್ಯ ಸಿನಿಮಾ 'ದಗಲ್ ಬಾಜಿಲು'
ಸಮಾರಂಭದಲ್ಲಿ ತುಳು ಚಲನ ಚಿತ್ರ ನಿರ್ದೇಶಕರಾದ ದೇವದಾಸ್ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್ , ನಿರ್ಮಾಪಕರಾದ ಕಿಶೋರ್ ಡಿ. ಶೆಟ್ಟಿ, ಪ್ರಕಾಶ್ ಪಾಂಡೇಶ್ವರ್, ಆರ್. ಧನರಾಜ್, ವಿಜಯ ಕುಮಾರ್ ಕಾರ್ಕಳ, ಮೇಗಿನ ಮಾಲಾಡಿ ಬಾಲಕೃಷ್ಣ ಶೆಟ್ಟಿ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ, ಡಾ. ಸದಾನಂದ ಪೆರ್ಲ, ವಿ.ಜಿ ಪಾಲ್, ಗಂಗಾಧರ ಶೆಟ್ಟಿ ಅಳಕೆ, ಸುಧಾಕರ ಕುದ್ರೋಳಿ, ಚೇತನ್ ಮುಂಡಾಡಿ, ಮೋಹನ್ ಕೊಪ್ಪಲ, ಪ್ರೇಮ್ ಶೆಟ್ಟಿ ಸುರತ್ಕಲ್, ಗೋಲ್ಮಾಲ್ ಚಲನ ಚಿತ್ರದ ನಿರ್ಮಾಪಕರಾದ ಮಂಜುನಾಥ ನಾಯಕ್, ಅಕ್ಷಯ್ ಪ್ರಭು, ನಿರ್ದೇಶಕ ರಮಾನಂದ ನಾಯಕ್, ನಟ ಪೃಥ್ವಿ ಅಂಬರ್, ಶ್ರೇಯಾ ಅಂಚನ್, ನಿರೀಕ್ಷಾ ಶೆಟ್ಟಿ, ಅರವಿಂದ ಬೋಳಾರ್, ಸುನಿಲ್ ನೆಲ್ಲಿಗುಡ್ಡೆ, ಭೋಜರಾಜ್ ವಾಮಂಜೂರು, ಸುನಾದ್ ಗೌತಮ್, ಸಂದೀಪ್ ಶೆಟ್ಟಿ ಮಾಣಿ ಬೆಟ್ಟು, ರೂಪೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
'ಗೋಲ್ಮಾಲ್' ತುಳು ಚಲನಚಿತ್ರ ಮಂಗಳೂರು, ಉಡುಪಿ, ಮಣಿಪಾಲ, ಮೂಡುಬಿದ್ರೆ, ಕಾರ್ಕಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಚಿತ್ರಮಂದಿರಗಳಲ್ಲಿ ಯಶಸ್ವೀ ಪ್ರದರ್ಶನ ಕಂಡಿದೆ.
ಸಿನಿಮಾದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಸುನಿಲ್ ನೆಲ್ಲಿಗುಡ್ಡೆ, ಸುಂದರ ರೈ ಮಂದಾರ, ಸತೀಶ್ ಬಂದಲೆ, ಪೃಥ್ವಿ ಅಂಬರ್, ಶ್ರೇಯಾ ಅಂಚನ್, ಸಾಯಿಕುಮಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ತುಳುವಿನಲ್ಲಿ ಅದ್ದೂರಿ ಬಜೆಟ್ ನ ಸಿನಿಮಾ ಇದಾಗಿದ್ದು ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿದೆ.