Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ನಟ ಕರಣ್ ಮಹಾದೇವ್ ವಿರುದ್ಧ ಅತ್ಯಾಚಾರ ಆರೋಪ
'ಗೂಳಿಹಟ್ಟಿ' ಚಿತ್ರದಲ್ಲಿ ಅಭಿನಯಿಸಿದ್ದ ಕನ್ನಡ ನಟ ಮತ್ತು ನೃತ್ಯ ಸಂಯೋಜಕ ಕರಣ್ ಮಹಾದೇವ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದಾರೆ.
ದೂರು ಕೊಟ್ಟಿರುವ ಮಹಿಳೆಗೆ ಕರಣ್ ಮಹಾದೇವ್ ಅಲಿಯಾಸ್ ಮಂಜುನಾಥ್ ಎರಡು ವರ್ಷಗಳ ಹಿಂದೆ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದರಂತೆ. ಡ್ಯಾನ್ಸ್ ಟೀಚರ್ ಕೂಡ ಆಗಿರುವ ಕರಣ್ ಮಹಾದೇವ್, ಆ ಮಹಿಳೆಗೆ ಡ್ಯಾನ್ಸ್ ಹೇಳಿಕೊಡುತ್ತಿದ್ದರಂತೆ.
ಕನಸು ಹೊತ್ತು ಬಂದಿದ್ದ ಯುವತಿಗೆ 'ತಿಥಿ' ಈರೇಗೌಡ ಹೀಗೆಲ್ಲಾ ಕಿರುಕುಳ ಕೊಟ್ರಾ.?
ಹಲವು ಬಾರಿ ಮಹಿಳೆಯೊಂದಿಗೆ ಫೋನಿನಲ್ಲಿ ಮಾತನಾಡಿದ್ದ ಕರಣ್ ಮಹಾದೇವ್, ಒಮ್ಮೆ ಉಳ್ಳಾಲ ಉಪನಗರದಲ್ಲಿ ಇರುವ ತಮ್ಮ ಸ್ಟುಡಿಯೋಗೆ ಬರುವಂತೆ ಹೇಳಿದ್ದರು. ಪ್ರತಿದಿನ ಸ್ಟುಡಿಯೋಗೆ ಹೋಗಿ ಡ್ಯಾನ್ಸ್ ಕಲಿಯುತ್ತಿದ್ದ ಮಹಿಳೆ ಜೊತೆಗೆ ಕರಣ್ ಮಹಾದೇವ್ ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೇ ಅತ್ಯಾಚಾರ ಕೂಡ ಎಸಗಿದ್ದಾರೆ ಎಂದು ಆ ಮಹಿಳೆ ದೂರಿದ್ದಾರೆ.
ಆ ಮಹಿಳೆ ಗರ್ಭಿಣಿ ಆಗಿದ್ದಾರೆ ಎಂದು ಗೊತ್ತಾದ್ಮೇಲೆ, ಗರ್ಭಪಾತ ಮಾಡಿಸಿಕೊಳ್ಳುವಂತೆ ಕರಣ್ ಮಹಾದೇವ್ ಒತ್ತಡ ಹೇರಿದ್ದರು ಎನ್ನುತ್ತಾರೆ ಮಹಿಳೆ.
ಒಂದೇ ಕುಟುಂಬದ ಇಬ್ಬರು ನಟರ 'ಕಾಮ ಪುರಾಣ' ಬಿಚ್ಚಿಟ್ಟ ಸಂಗೀತಾ ಭಟ್
ಅಸಲಿಗೆ, ಆ ಮಹಿಳೆಗೆ ಅದಾಗಲೇ ನಿಶ್ಚಿತಾರ್ಥ ಆಗಿತ್ತು. ಆ ನಿಶ್ಚಿತಾರ್ಥ ಮುರಿದು ಬೀಳಲು ಕರಣ್ ಮಹಾದೇವ್ ಕಾರಣ ಎಂದು ಆ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸದ್ಯ ಕರಣ್ ಮಹಾದೇವ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ದೂರು ದಾಖಲಾಗುತ್ತಿದ್ದಂತೆಯೇ, ಕರಣ್ ಮಹಾದೇವ್ ಎಸ್ಕೇಪ್ ಆಗಿದ್ದಾನೆ. ಆರೋಪಿಯನ್ನ ಹುಡುಕುವಲ್ಲಿ ಪೊಲೀಸರು ತಲ್ಲೀನರಾಗಿದ್ದಾರೆ.