Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ನಿರ್ಮಾಪಕರಿಗೆ ಗೃಹ ಸಚಿವ ಆರಗ ಜ್ಞಾನೆಂದ್ರ ಅಭಯ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಸಿನಿಮಾ ನಿರ್ಮಾಪಕರಿಗೆ ಅಭಯ ನೀಡಿದರು.
''ಸಿನಿಮಾ ನಿರ್ಮಾಪಕರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಿರ್ಮಾಪಕರ ಸಮಸ್ಯೆಗಳ ಕುರಿತಂತೆ ಸಿಎಂ ಜೊತೆ ಚರ್ಚೆ ನಡೆಸುತ್ತೇನೆ. ನಾನೂ ಸಹ ಚಿತ್ರರಂಗದೊಂದಿಗೆ ನಿಕಟ ಸಂಪರ್ಕದಲ್ಲಿರುತ್ತೇನೆ'' ಎಂದರು.
''ಕನ್ನಡ ಪ್ರತಿಭೆಗಳು ಹೆಚ್ಚು-ಹೆಚ್ಚು ಬೆಳೆಯಬೇಕು. ಕನ್ನಡ ಚಿತ್ರರಂಗ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಛಾಪು ಮೂಡಿಸಬೇಕು ಎಂಬುದು ಸರ್ಕಾರದ ಆಸೆ ಸಹ. ಅದಕ್ಕೆ ತಕ್ಕುದಾದ ನೆರವು ಸರ್ಕಾರದ ಕಡೆಯಿಂದ ಇರುತ್ತದೆ'' ಎಂದರು.
''ನಾನು ಹೆಚ್ಚು ಸಿನಿಮಾ ನೋಡಿದವನಲ್ಲ ಆದರೆ ರಾಜ್ಕುಮಾರ್ ಅಭಿಮಾನಿಯಾಗಿದ್ದವನು. ರಾಜ್ಕುಮಾರ್ ನಂತರ ಮತ್ಯಾರು ಎಂದು ನೋಡುವ ಸಮಯವಿತ್ತು, ಆದರೆ ಕನ್ನಡ ಚಿತ್ರರಂಗದಲ್ಲಿ ಅದ್ಭುತ ಪ್ರತಿಭೆಗಳು ಆ ನಂತರವೂ ಬಂದರು. ಕನ್ನಡ ಚಿತ್ರರಂಗ ಕೆಲವು ಅತ್ಯುತ್ತಮ ಪ್ರತಿಭೆಗಳನ್ನು ರಾಜ್ಯಕ್ಕೆ, ರಾಷ್ಟ್ರಕ್ಕೆ ನೀಡಿದೆ. ಚಿತ್ರರಂಗದ ಕೊಡುಗೆಯನ್ನು ಮರೆಯುವಂತಿಲ್ಲ'' ಎಂದರು.
''ಈಗಾಗಲೇ ಸರ್ಕಾರ ಕೆಲವು ಕ್ರಮಗಳನ್ನು ಕೈಗೊಂಡಿದೆ. ಕೋವಿಡ್ನಿಂದ ಆಗಿರುವ ನಷ್ಟ ಸರಿತೂಗಿಸುವ ಬಗ್ಗೆ ಚರ್ಚಿಸಲಾಗುವುದು. ಈಗಾಗಲೇ ಚಿತ್ರಮಂದಿರಗಳ ಕೆಲವು ತೆರಿಗೆಗಳನ್ನು ಮನ್ನಾ ಮಾಡುವ ಕಾರ್ಯ ಆಗಿದೆ. ಕಲಾವಿದರಿಗೆ ನೆರವನ್ನೂ ನೀಡಲಾಗಿದೆ'' ಎಂದರು.
ಪೈರಸಿ ಸಮಸ್ಯೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ''ಆನ್ಲೈನ್ ಗೇಮಿಂಗ್ ನಿಷೇಧ ಕಾಯ್ದೆಯನ್ನು ನಮ್ಮ ಸರ್ಕಾರ ಕೆಲ ದಿನಗಳ ಹಿಂದಷ್ಟೆ ತಂದಿದೆ. ಭಾರಿ ಒತ್ತಡ ಇದ್ದರೂ ನಾವು ಕಾಯ್ದೆ ತಂದು ಅನಿಷ್ಟ ಹೊರಗೆ ಹಾಕಿದ್ದೇವೆ. ಹಾಗೆಯೇ ಪೈರಸಿ ವಿರುದ್ಧ ಕಾಯ್ದೆ ತರಬೇಕಾದ ಪರಿಸ್ಥಿತಿ ಬಂದರೆ ಖಂಡಿತ ನಾವು ಹಿಂಜರಿಯುವುದಿಲ್ಲ'' ಎಂದು ಭರವಸೆ ನೀಡಿದರು.
''ನಮ್ಮ ಸೈಬರ್ ಸೆಲ್ ಬಹಳ ಶಕ್ತವಾಗಿದೆ. ತರಬೇತಿ ಪಡೆದವರನ್ನೇ ನೇಮಕ ಮಾಡಿಕೊಂಡಿದ್ದೇವೆ. ಗುಜರಾತ್ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡು ನಮ್ಮ ಕೆಲವು ಅಧಿಕಾರಿಗಳನ್ನು ತರಬೇತಿಗೆಂದೇ ಅಲ್ಲಿಗೆ ಕಳಿಸಿದ್ದೇವೆ. ಆಧುನಿಕ ತಂತ್ರಜ್ಞಾನ ಹೊಂದಿದ ಘಟಕವನ್ನು ಅನ್ನು ನಾವು ಹೊಂದಿದ್ದೇವೆ. ತಂತ್ರಜ್ಞಾನದ ವಿಷಯದಲ್ಲಿ ಇನ್ಫೋಸಿಸ್ ದೊಡ್ಡ ಸಹಾಯವನ್ನು ನಮಗೆ ಮಾಡಿದೆ'' ಎಂದರು ಆರಗ ಜ್ಞಾನೇಂದ್ರ.
''ಚಿತ್ರಮಂದಿರ ಹಾಗೂ ಮಲ್ಟಿಫ್ಲೆಕ್ಸ್ಗಳ ಸಮಸ್ಯೆ ಬಗೆಹರಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಕಾರ್ಯಪ್ರವೃತ್ತವಾಗುತ್ತೇವೆ. ನನಗೆ ಚಿತ್ರೋದ್ಯಮ ಹೊಸದು. ನಾನು ರೈತರ ಮಗ, ನಮಗೆ ಪರದೆಯ ಮೇಲೆ ನಟಿಸುವ ಕಲಾವಿದರಷ್ಟೆ ಕಾಣುತ್ತಾರೆ. ಅದರ ಹಿಂದಿನ ನಿರ್ಮಾಪಕ, ತಂತ್ರಜ್ಞರು ಕಾಣುವುದಿಲ್ಲ. ನಾನೂ ಸಹ ಸಾಕಷ್ಟು ಅಧ್ಯಯನ ಮಾಡಬೇಕಿದೆ. ನಮ್ಮ ಅಧಿಕಾರಿಗಳ ಸಹಾಯದಿಂದ ಇನ್ನಷ್ಟು ಮಾಹಿತಿ ಪಡೆದುಕೊಳ್ಳುತ್ತೇನೆ. ಅಧಿಕಾರಿಗಳನ್ನು ಬೇಕಿದ್ದರೆ ಚಿತ್ರರಂಗದ ಪ್ರಮುಖರೊಂದಿಗೆ ಮುಖಾ-ಮುಖಿ ಮಾಡಿಸಿ ನಮ್ಮಿಂದ ಆಗಬೇಕಾದ ಸಹಾಯಗಳ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸೋಣ'' ಎಂದರು.