Don't Miss!
- News ಆರಂಭದಲ್ಲೇ ಬಿಜೆಪಿ- ಜೆಡಿಎಸ್ ದೋಸ್ತಿಯಲ್ಲಿ ಬಿರುಕು: ವಿಜಯೇಂದ್ರ ಏನಂದ್ರು?
- Lifestyle ಕೊನೆಗೂ ಬೆಂಗಳೂರಿಗೆ ಮಳೆ ಭಾಗ್ಯ..! ಹವಾಮಾನ ಇಲಾಖೆ ಸೂಚಿಸಿದ ದಿನಾಂಕವಿದು..!
- Automobiles Self-Driving Car: ಭಾರತೀಯರು ಅಸಮಾನ್ಯರು... ಬೊಲೆರೋದಲ್ಲಿ ಭವಿಷ್ಯ ಬದಲಿಸುವ ತಂತ್ರಜ್ಞಾನ!
- Sports Viral look: IPL 2024 ಆರಂಭಕ್ಕೂ ಮುನ್ನ ಸಾಮಾಜಿಕ ತಾಣದಲ್ಲಿ ಸಂಚಲನ ಮೂಡಿಸಿರುವ ವಿರಾಟ್ ಕೊಹ್ಲಿ Trendy look
- Technology Lava: ಭಾರತದಲ್ಲಿ ಸುನಾಮಿ ಎಬ್ಬಿಸಲಿದೆ ಲಾವಾ O2! ನಿರೀಕ್ಷಿತ ಫೀಚರ್ಸ್ ಬಗ್ಗೆ ತಿಳಿಯಿರಿ
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ-ಧಾರಾವಾಹಿ ಚಿತ್ರೀಕರಣ ಆರಂಭ: ನಿರ್ಧಾರ ಪ್ರಕಟಿಸಲಿರುವ ಸರ್ಕಾರ
ಕೊರೊನಾ ಕಾರಣದಿಂದಾಗಿ ಸಿನಿಮಾ-ಧಾರಾವಾಹಿ ಸೇರಿದಂತೆ ಎಲ್ಲಾ ರೀತಿಯ ಚಿತ್ರೀಕರಣಗಳ ಮೇಲೆ ಸರ್ಕಾರ ನಿರ್ಬಂಧ ಹೇರಿತ್ತು.
Recommended Video
ಸುಮಾರು 44 ದಿನಗಳಿಂದಲೂ ಯಾವೊಂದು ಸಿನಿಮಾ, ಧಾರಾವಾಹಿ ಸಂಬಂಧಿ ಚಿತ್ರೀಕರಣಗಳು ನಡೆದಿರಲಿಲ್ಲ. ಆದರೆ ಈಗ ಚಿತ್ರೀಕರಣ ಆರಂಭಕ್ಕೆ ಅನುಮತಿ ನೀಡಲು ಸರ್ಕಾರ ನಿರ್ಧಾರ ಮಾಡಿದೆ.
ಚಿತ್ರೀಕರಣ ಆರಂಭಿಸಲು ಅನುಮತಿ ನೀಡುವಂತೆ ಸಿಎಂ ಗೆ ಮನವಿ
ಹಂತ-ಹಂತವಾಗಿ ಲಾಕ್ಡೌನ್ ತೆಗೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದರಂತೆ ಇಂದು ಬಾರ್ಗಳನ್ನು ತೆರೆಯಲು ಅನುಮತಿ ನೀಡಿದೆ. ಅದರ ಬೆನ್ನಲ್ಲೇ ಈಗ ಚಿತ್ರೀಕರಣಕ್ಕೂ ಅನುಮತಿ ನೀಡುವ ಬಗ್ಗೆ ನಿರ್ಧಾರ ಮಾಡಿದೆ ಎನ್ನಲಾಗಿದೆ.
ಸುಳಿವು ನೀಡಿರುವ ಕಂದಾಯ ಸಚಿವ ಆರ್.ಅಶೋಕ್
ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಅವರು ಸುಳಿವು ನೀಡಿದ್ದು, ಚಿತ್ರೀಕರಣ ಆರಂಭ ಮಾಡಲು ಅನುಮತಿ ನೀಡುವ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಾಳೆ (ಏಪ್ರಿಲ್ 05) ತೀರ್ಮಾನ ಪ್ರಟಿಸುತ್ತೇವೆ ಎಂದು ಹೇಳಿದ್ದಾರೆ.
ಹಲವು ಮನವಿಗಳನ್ನು ಸಲ್ಲಿಸಲಾಗಿದೆ
ಚಿತ್ರೀಕರಣ ಆರಂಭಕ್ಕೆ ಅನುಮತಿ ನೀಡುವಂತೆ ಈಗಾಗಲೇ ಸಿಎಂ ಅವರಿಗೆ ಮನವಿಗಳನ್ನು ಸಲ್ಲಿಸಲಾಗಿದೆ. ಚಿತ್ರೀಕರಣ ಆರಂಭಕ್ಕೆ ಅನುಮತಿ ನೀಡುವಂತೆ ನಿರ್ಮಾಪಕರುಗಳು ಒತ್ತಾಯ ಸಹ ಹೇರಿದ್ದಾರೆ ಎನ್ನಲಾಗಿದೆ. ಹಾಗಾಗಿ ನಾಳೆಯೇ ಈ ಬಗ್ಗೆ ನಿರ್ಧಾರ ಪ್ರಕಟವಾಗಲಿದೆ.
ಹಳೆಯ ಎಪಿಸೋಡ್ಗಳ ಪ್ರಸಾರ
ಧಾರಾವಾಹಿ ಚಿತ್ರೀಕರಣ ಸಹ ಬಂದ್ ಆಗಿದ್ದ ಕಾರಣ, ಧಾರಾವಾಹಿಗಳ ಹಳೆಯ ಎಪಿಸೋಡ್ಗಳನ್ನೇ ಟಿವಿಗಳು ಪ್ರಸಾರ ಮಾಡುತ್ತಿದ್ದವು. ಚಂದನವು ರಾಮಾಯಣ, ಮಹಾಭಾರತವನ್ನು ಸಹ ಪ್ರಸಾರ ಮಾಡಿತು.
ನಿರ್ಮಾಪಕರ ಮೇಲೆ ಸಾಲದ ಹೊರೆ
ಚಿತ್ರೀಕರಣಗಳು ಬಂದ್ ಆಗಿರುವ ಕಾರಣ ನಿರ್ಮಾಪಕರ ಮೇಲೆ ಸಾಲದ ಒತ್ತಡ ಹೆಚ್ಚಾಗುತ್ತಿದೆ. ಸಿನಿಮಾ ನಿರ್ಮಾಣಕ್ಕೆಂದು ತಂದ ಸಾಲದ ಬಡ್ಡಿ ಬೆಳೆಯುತ್ತಲೇ ಇದೆ. ಅಷ್ಟೆ ಅಲ್ಲದೆ, ಸಿನಿಮಾ ಉದ್ಯಮದ ಬೆನ್ನೆಲುಬಾದ ದಿನಗೂಲಿ ನೌಕರರ ಪಾಡು ಸಹ ಹೇಳತೀರದಾಗಿದೆ.