Don't Miss!
- News ಹಾಸನದಲ್ಲಿ ಬಿಜೆಪಿಯ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ: ಮತ್ತೆ ಸಂಕಷ್ಟದಲ್ಲಿ ದಳಪತಿ
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ-ಧಾರಾವಾಹಿ ಚಿತ್ರೀಕರಣ ಆರಂಭ: ನಿರ್ಧಾರ ಪ್ರಕಟಿಸಲಿರುವ ಸರ್ಕಾರ
ಕೊರೊನಾ ಕಾರಣದಿಂದಾಗಿ ಸಿನಿಮಾ-ಧಾರಾವಾಹಿ ಸೇರಿದಂತೆ ಎಲ್ಲಾ ರೀತಿಯ ಚಿತ್ರೀಕರಣಗಳ ಮೇಲೆ ಸರ್ಕಾರ ನಿರ್ಬಂಧ ಹೇರಿತ್ತು.
Recommended Video
ಸುಮಾರು 44 ದಿನಗಳಿಂದಲೂ ಯಾವೊಂದು ಸಿನಿಮಾ, ಧಾರಾವಾಹಿ ಸಂಬಂಧಿ ಚಿತ್ರೀಕರಣಗಳು ನಡೆದಿರಲಿಲ್ಲ. ಆದರೆ ಈಗ ಚಿತ್ರೀಕರಣ ಆರಂಭಕ್ಕೆ ಅನುಮತಿ ನೀಡಲು ಸರ್ಕಾರ ನಿರ್ಧಾರ ಮಾಡಿದೆ.
ಚಿತ್ರೀಕರಣ ಆರಂಭಿಸಲು ಅನುಮತಿ ನೀಡುವಂತೆ ಸಿಎಂ ಗೆ ಮನವಿ
ಹಂತ-ಹಂತವಾಗಿ ಲಾಕ್ಡೌನ್ ತೆಗೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದರಂತೆ ಇಂದು ಬಾರ್ಗಳನ್ನು ತೆರೆಯಲು ಅನುಮತಿ ನೀಡಿದೆ. ಅದರ ಬೆನ್ನಲ್ಲೇ ಈಗ ಚಿತ್ರೀಕರಣಕ್ಕೂ ಅನುಮತಿ ನೀಡುವ ಬಗ್ಗೆ ನಿರ್ಧಾರ ಮಾಡಿದೆ ಎನ್ನಲಾಗಿದೆ.
ಸುಳಿವು ನೀಡಿರುವ ಕಂದಾಯ ಸಚಿವ ಆರ್.ಅಶೋಕ್
ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಅವರು ಸುಳಿವು ನೀಡಿದ್ದು, ಚಿತ್ರೀಕರಣ ಆರಂಭ ಮಾಡಲು ಅನುಮತಿ ನೀಡುವ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಾಳೆ (ಏಪ್ರಿಲ್ 05) ತೀರ್ಮಾನ ಪ್ರಟಿಸುತ್ತೇವೆ ಎಂದು ಹೇಳಿದ್ದಾರೆ.
ಹಲವು ಮನವಿಗಳನ್ನು ಸಲ್ಲಿಸಲಾಗಿದೆ
ಚಿತ್ರೀಕರಣ ಆರಂಭಕ್ಕೆ ಅನುಮತಿ ನೀಡುವಂತೆ ಈಗಾಗಲೇ ಸಿಎಂ ಅವರಿಗೆ ಮನವಿಗಳನ್ನು ಸಲ್ಲಿಸಲಾಗಿದೆ. ಚಿತ್ರೀಕರಣ ಆರಂಭಕ್ಕೆ ಅನುಮತಿ ನೀಡುವಂತೆ ನಿರ್ಮಾಪಕರುಗಳು ಒತ್ತಾಯ ಸಹ ಹೇರಿದ್ದಾರೆ ಎನ್ನಲಾಗಿದೆ. ಹಾಗಾಗಿ ನಾಳೆಯೇ ಈ ಬಗ್ಗೆ ನಿರ್ಧಾರ ಪ್ರಕಟವಾಗಲಿದೆ.
ಹಳೆಯ ಎಪಿಸೋಡ್ಗಳ ಪ್ರಸಾರ
ಧಾರಾವಾಹಿ ಚಿತ್ರೀಕರಣ ಸಹ ಬಂದ್ ಆಗಿದ್ದ ಕಾರಣ, ಧಾರಾವಾಹಿಗಳ ಹಳೆಯ ಎಪಿಸೋಡ್ಗಳನ್ನೇ ಟಿವಿಗಳು ಪ್ರಸಾರ ಮಾಡುತ್ತಿದ್ದವು. ಚಂದನವು ರಾಮಾಯಣ, ಮಹಾಭಾರತವನ್ನು ಸಹ ಪ್ರಸಾರ ಮಾಡಿತು.
ನಿರ್ಮಾಪಕರ ಮೇಲೆ ಸಾಲದ ಹೊರೆ
ಚಿತ್ರೀಕರಣಗಳು ಬಂದ್ ಆಗಿರುವ ಕಾರಣ ನಿರ್ಮಾಪಕರ ಮೇಲೆ ಸಾಲದ ಒತ್ತಡ ಹೆಚ್ಚಾಗುತ್ತಿದೆ. ಸಿನಿಮಾ ನಿರ್ಮಾಣಕ್ಕೆಂದು ತಂದ ಸಾಲದ ಬಡ್ಡಿ ಬೆಳೆಯುತ್ತಲೇ ಇದೆ. ಅಷ್ಟೆ ಅಲ್ಲದೆ, ಸಿನಿಮಾ ಉದ್ಯಮದ ಬೆನ್ನೆಲುಬಾದ ದಿನಗೂಲಿ ನೌಕರರ ಪಾಡು ಸಹ ಹೇಳತೀರದಾಗಿದೆ.