Don't Miss!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ-ಧಾರಾವಾಹಿ ಚಿತ್ರೀಕರಣ ಆರಂಭ: ನಿರ್ಧಾರ ಪ್ರಕಟಿಸಲಿರುವ ಸರ್ಕಾರ
ಕೊರೊನಾ ಕಾರಣದಿಂದಾಗಿ ಸಿನಿಮಾ-ಧಾರಾವಾಹಿ ಸೇರಿದಂತೆ ಎಲ್ಲಾ ರೀತಿಯ ಚಿತ್ರೀಕರಣಗಳ ಮೇಲೆ ಸರ್ಕಾರ ನಿರ್ಬಂಧ ಹೇರಿತ್ತು.
Recommended Video
ಸುಮಾರು 44 ದಿನಗಳಿಂದಲೂ ಯಾವೊಂದು ಸಿನಿಮಾ, ಧಾರಾವಾಹಿ ಸಂಬಂಧಿ ಚಿತ್ರೀಕರಣಗಳು ನಡೆದಿರಲಿಲ್ಲ. ಆದರೆ ಈಗ ಚಿತ್ರೀಕರಣ ಆರಂಭಕ್ಕೆ ಅನುಮತಿ ನೀಡಲು ಸರ್ಕಾರ ನಿರ್ಧಾರ ಮಾಡಿದೆ.
ಚಿತ್ರೀಕರಣ ಆರಂಭಿಸಲು ಅನುಮತಿ ನೀಡುವಂತೆ ಸಿಎಂ ಗೆ ಮನವಿ
ಹಂತ-ಹಂತವಾಗಿ ಲಾಕ್ಡೌನ್ ತೆಗೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದರಂತೆ ಇಂದು ಬಾರ್ಗಳನ್ನು ತೆರೆಯಲು ಅನುಮತಿ ನೀಡಿದೆ. ಅದರ ಬೆನ್ನಲ್ಲೇ ಈಗ ಚಿತ್ರೀಕರಣಕ್ಕೂ ಅನುಮತಿ ನೀಡುವ ಬಗ್ಗೆ ನಿರ್ಧಾರ ಮಾಡಿದೆ ಎನ್ನಲಾಗಿದೆ.
ಸುಳಿವು ನೀಡಿರುವ ಕಂದಾಯ ಸಚಿವ ಆರ್.ಅಶೋಕ್
ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್ ಅವರು ಸುಳಿವು ನೀಡಿದ್ದು, ಚಿತ್ರೀಕರಣ ಆರಂಭ ಮಾಡಲು ಅನುಮತಿ ನೀಡುವ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಾಳೆ (ಏಪ್ರಿಲ್ 05) ತೀರ್ಮಾನ ಪ್ರಟಿಸುತ್ತೇವೆ ಎಂದು ಹೇಳಿದ್ದಾರೆ.
ಹಲವು ಮನವಿಗಳನ್ನು ಸಲ್ಲಿಸಲಾಗಿದೆ
ಚಿತ್ರೀಕರಣ ಆರಂಭಕ್ಕೆ ಅನುಮತಿ ನೀಡುವಂತೆ ಈಗಾಗಲೇ ಸಿಎಂ ಅವರಿಗೆ ಮನವಿಗಳನ್ನು ಸಲ್ಲಿಸಲಾಗಿದೆ. ಚಿತ್ರೀಕರಣ ಆರಂಭಕ್ಕೆ ಅನುಮತಿ ನೀಡುವಂತೆ ನಿರ್ಮಾಪಕರುಗಳು ಒತ್ತಾಯ ಸಹ ಹೇರಿದ್ದಾರೆ ಎನ್ನಲಾಗಿದೆ. ಹಾಗಾಗಿ ನಾಳೆಯೇ ಈ ಬಗ್ಗೆ ನಿರ್ಧಾರ ಪ್ರಕಟವಾಗಲಿದೆ.
ಹಳೆಯ ಎಪಿಸೋಡ್ಗಳ ಪ್ರಸಾರ
ಧಾರಾವಾಹಿ ಚಿತ್ರೀಕರಣ ಸಹ ಬಂದ್ ಆಗಿದ್ದ ಕಾರಣ, ಧಾರಾವಾಹಿಗಳ ಹಳೆಯ ಎಪಿಸೋಡ್ಗಳನ್ನೇ ಟಿವಿಗಳು ಪ್ರಸಾರ ಮಾಡುತ್ತಿದ್ದವು. ಚಂದನವು ರಾಮಾಯಣ, ಮಹಾಭಾರತವನ್ನು ಸಹ ಪ್ರಸಾರ ಮಾಡಿತು.
ನಿರ್ಮಾಪಕರ ಮೇಲೆ ಸಾಲದ ಹೊರೆ
ಚಿತ್ರೀಕರಣಗಳು ಬಂದ್ ಆಗಿರುವ ಕಾರಣ ನಿರ್ಮಾಪಕರ ಮೇಲೆ ಸಾಲದ ಒತ್ತಡ ಹೆಚ್ಚಾಗುತ್ತಿದೆ. ಸಿನಿಮಾ ನಿರ್ಮಾಣಕ್ಕೆಂದು ತಂದ ಸಾಲದ ಬಡ್ಡಿ ಬೆಳೆಯುತ್ತಲೇ ಇದೆ. ಅಷ್ಟೆ ಅಲ್ಲದೆ, ಸಿನಿಮಾ ಉದ್ಯಮದ ಬೆನ್ನೆಲುಬಾದ ದಿನಗೂಲಿ ನೌಕರರ ಪಾಡು ಸಹ ಹೇಳತೀರದಾಗಿದೆ.