Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಏಪ್ರಿಲ್ 27ರಿಂದಲೇ 'ಮಲ್ಟಿಪ್ಲೆಕ್ಸ್'ಗಳಲ್ಲಿ ರೂ 200 ಟಿಕೆಟ್ ದರ ಜಾರಿ: ಸಾ.ರಾ ಗೋವಿಂದು!
'ಮಲ್ಟಿಪ್ಲೆಕ್ಸ್' ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ನಾಳೆಯಿಂದನೇ ಜಾರಿಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸಾರಾ ಗೋವಿಂದು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.['ಮಲ್ಟಿಫ್ಲೆಕ್ಸ್'ಗಳಿಗೆ ಸಿದ್ದು ಸರ್ಕಾರ ಶಾಕ್: ಚಿತ್ರಪ್ರೇಮಿಗಳಿಗೆ 'ಸಿನಿಮಾ ಭಾಗ್ಯ' ]
ಏಕರೂಪ ಟಿಕೆಟ್ ದರ ನೀತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸಹಿ ಮಾಡಿದ್ದು, ನಾಳೆ ಪತ್ರ ಅಧಿಕೃತವಾಗಿ ವಾಣಿಜ್ಯ ಮಂಡಳಿ ಕೈಸೇರಲಿದೆ. ಪತ್ರ ಕೈಸೇರುತ್ತಿದ್ದಂತೆ ತಕ್ಷಣವೇ ಮಲ್ಟಿಪ್ಲೆಕ್ಸ್ ಗಳಲ್ಲಿ 200 ಟಿಕೆಟ್ ದರ ಜಾರಿಯಾಗಲಿದೆ ಎಂದು ಸಾರಾ ಗೋವಿಂದು ಸ್ವಷ್ಟಪಡಿಸಿದರು.['ಮಲ್ಟಿಪ್ಲೆಕ್ಸ್'ಗಳಲ್ಲಿ ರೂ.200 ಟಿಕೆಟ್ ದರ: ಇನ್ನೆರೆಡು ದಿನಗಳಲ್ಲಿ ಅಧಿಕೃತ]
ಏಕರೂಪ ಟಿಕೆಟ್ ದರ ಕೇವಲ ಮಲ್ಟಿಪ್ಲೆಕ್ಸ್ ಗಳಲ್ಲಿ ಮಾತ್ರವಲ್ಲ, ಸಿಂಗಲ್ ಸ್ಕ್ರೀನ್ ಚಿತ್ರಮಂದಿರಕ್ಕೂ ಈ ನೀತಿ ಅನ್ವಯವಾಗಲಿದೆ ಎಂದರು. ಇನ್ನು 'ಬಾಹುಬಲಿ' ಚಿತ್ರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಸಾರಾ ಗೋವಿಂದು, 500, 600 ರೂ ಕೊಟ್ಟು 'ಬಾಹುಬಲಿ' ಚಿತ್ರಕ್ಕೆ ಟಿಕೆಟ್ ಪಡೆಯುತ್ತಿದ್ದಾರೆ. ದಯವಿಟ್ಟು ಹೆಚ್ಚು ದುಡ್ಡು ಕೊಟ್ಟು ಟಿಕೆಟ್ ಪಡಯಬೇಡಿ, ಏಕರೂಪ ಟಿಕೆಟ್ ದರ ನಾಳೆಯೇ ಜಾರಿಯಾಗಲಿದೆ ಎಂದು ಮನವಿ ಮಾಡಿಕೊಂಡರು.[ಮೇ ತಿಂಗಳಿಂದ 'ಮಲ್ಟಿಪ್ಲೆಕ್ಸ್'ಗಳಲ್ಲಿ 200 ರೂ ಟಿಕೆಟ್ ಕಡ್ಡಾಯ: ಸಿದ್ದರಾಮಯ್ಯ]
ಮಾರ್ಚ್ 15 ರಂದು 2017ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಮಲ್ಟಿಪ್ಲೆಕ್ಸ್'ಗಳಿಗೆ ಏಕರೀತಿಯ ಪ್ರವೇಶದರ ನೀತಿ ಆದೇಶ ಹೊರಡಿಸಿದ್ದರು. ಮೇ ತಿಂಗಳಿನಿಂದ ಈ ನೀತಿ ಜಾರಿಯಾಗಲಿದೆ ಎಂದು ಸರ್ಕಾರ ತಿಳಿಸಿತ್ತು.['ಮಲ್ಟಿಪ್ಲೆಕ್ಸ್'ಗಳಲ್ಲಿ ಇನ್ನೂ ಸಿಗುತ್ತಿಲ್ಲ 200 ರೂಗೆ ಸಿನಿಮಾ ಟಿಕೆಟ್ ]