Don't Miss!
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- News BREAKING: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಸಾವು
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೆಸರುಘಟ್ಟದಲ್ಲಿ ಫಿಲಂಸಿಟಿ ಸ್ಥಾಪನೆಗೆ ಗ್ರೀನ್ ಸಿಗ್ನಲ್
ಇನ್ನೊಂದೆರಡು ತಿಂಗಳಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧವಾಗಲಿದೆ ಎಂದು ಹೇಳಿದರು. ಈ ಚಿತ್ರನಗರಿಯನ್ನು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುತ್ತದೆ. ಶೀಘ್ರದಲ್ಲೇ ಕಾಮಗಾರಿಯನ್ನು ಆರಂಭಿಸಲಾಗುತ್ತದೆ ಎಂದು ಅವರು ವಿವರ ನೀಡಿದರು.
ನಷ್ಟದಲ್ಲಿ ಕಂಠೀರವ ಸ್ಟುಡಿಯೋಗೆ ಕಾಯಕಲ್ಪ ಕಲ್ಪಿಸುವಲ್ಲಿ ಇಲ್ಲಿಯವರೆಗೆ ಯಾವ ಸರ್ಕಾರಗಳೂ ಮುಂದಾಗಿರಲಿಲ್ಲ. ಆದರೆ ಬಿಜೆಪಿ ಸರ್ಕಾರ ಸ್ಟುಡಿಯೋಗೆ ಪುನಶ್ಚೇತನ ನೀಡಿ ಲಾಭದತ್ತ ತಂದಿದ್ದೇವೆ ಎಂದರು. ಸಾಹಿತ್ಯ, ಸಂಸ್ಕೃತಿ, ಕಲೆಯ ಅವಿಭಾಜ್ಯ ಅಂಗವಾಗಿರುವ ಕನ್ನಡ ಚಿತ್ರರಂಗದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ ಎಂಬ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಅವರು ಡಾ.ರಾಜ್ ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಸ್ಮಾರಕದ ನಿರ್ಮಾಣ ಕಾರ್ಯಗಳನ್ನು ಆದಷ್ಟು ಪೂರ್ಣಗೊಳಿಸಲಾಗುತ್ತದೆ ಎಂದರು. ಗೃಹಸಚಿವ ಆರ್ ಅಶೋಕ್ ಮಾತನಾಡುತ್ತಾ, ಕಂಠೀರವ ಸ್ಟುಡಿಯೋವನ್ನು ಕನ್ನಡ ಚಿತ್ರರಂಗದ ಚಟುವಟಿಕೆಗಳಿಗಷ್ಟೇ ಬಳಸಿಕೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಕನ್ನಡ ಚಿತ್ರರಂಗದ ಬಹುತೇಕ ಸಮಸ್ಯೆಗಳನ್ನು ಈಡೇರಿಸಲಾಗಿದೆ. 75 ಚಿತ್ರಗಳಿಗೆ ನೀಡುತ್ತಿದ್ದ ಸಹಾಯಧನವನ್ನು 100 ಚಿತ್ರಗಳಿಗೆ ವಿಸ್ತರಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಹಿರಿಯ ತಾರೆ ಭಾರತಿ ವಿಷ್ಣುವರ್ಧನ್ ಸೇರಿದಂತೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಸುಧಾರಾಣಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷೆ ತಾರಾ, ಸಚಿವರಾದ ವಿ ಸೋಮಣ್ಣ, ರೇಣುಕಾಚಾರ್ಯ, ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಸ್ಟುಡಿಯೋ ಅಧ್ಯಕ್ಷ ರುದ್ರೇಶ್ ಉಪಸ್ಥಿತರಿದ್ದರು. (ಒನ್ಇಂಡಿಯಾ ಕನ್ನಡ)