Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ಆಗ್ತಿದೆ ರವಿಬೆಳಗೆರೆ ಕಾದಂಬರಿ: ಅನೀಶ್ ನಾಯಕ
'ಗುಳ್ಟು' ಅಂತಹ ಉತ್ತಮ ಸಿನಿಮಾ ಮಾಡಿದ್ದ ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ಈಗ ಹೊಸ ಸಿನಿಮಾ ತಯಾರಿ ನಡೆಸಿದ್ದಾರೆ. ಕಳೆದ ಬಾರಿ ಸೈಬರ್ ಕ್ರೈಂ ಆಧಾರಿತ ಚಿತ್ರದ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದ ನಿರ್ದೇಶಕ ಈಗ ರವಿಬೆಳಗೆರೆ ಅವರ ಕಾದಂಬರಿಯನ್ನ ಸಿನಿಮಾ ಮಾಡಲು ಹೊರಟಿದ್ದಾರೆ.
ಹೌದು, ಪತ್ರಕರ್ತ, ಬರಹಗಾರ ರವಿಬೆಳಗೆರೆ ಬರೆದಿರುವ 'ಒಮರ್ಟಾ' ಕಾದಂಬರಿ ಈಗ ಸಿನಿಮಾ ಆಗ್ತಿದೆ. ಭೂಗತ ಮಾಫಿಯಾ, ರೌಡಿಸಂ ಹಾಗೂ ಇನ್ನಿತರ ವಿಷ್ಯಗಳ ಬಗ್ಗೆ ಈ ಪುಸ್ತುಕದಲ್ಲಿ ಪ್ರಸ್ತಾಪಿಸಲಾಗಿದೆ. ಈ ರೋಚಕ ಕಥೆಯನ್ನ ತೆರೆಮೇಲೆ ತರ್ತಿದ್ದಾರೆ ಯುವ ನಿರ್ದೇಶಕ.
'ಪಾಪಿಗಳ ಲೋಕ'ದಿಂದ ಬಣ್ಣದ ಲೋಕಕ್ಕೆ ಬಂದ ಬೆಳಗೆರೆ ಥ್ರಿಲ್ಲಿಂಗ್ ಕಥೆ!
ಈ ಸಂಬಂಧ ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ಅವರು ರವಿಬೆಳಗೆರೆ ಅವರನ್ನ ಭೇಟಿ ಮಾಡಿ ಅನುಮತಿ ಕೂಡ ಪಡೆದುಕೊಂಡಿದ್ದಾರೆ. ಈ ಹಿಂದೆ ಈ ಪುಸ್ತುಕವನ್ನ ಸಿನಿಮಾ ಮಾಡುವ ಉದ್ದೇಶದಿಂದ ಹಲವು ನಿರ್ದೇಶಕರು ರವಿಬೆಳಗೆರೆ ಅವರನ್ನ ಭೇಟಿ ಮಾಡಿದ್ದರು. ಆದರೆ, ಯಾರಿಗೂ ಅನುಮತಿ ನೀಡಿರಲಿಲ್ಲ. ಇದೀಗ, ಜರ್ನಾಧನ್ ಚಿಕ್ಕಣ್ಣಗೆ ಆ ಅವಕಾಶ ಸಿಕ್ಕಿದೆ.
ಅಂದ್ಹಾಗೆ, ಈ ಚಿತ್ರದಲ್ಲಿ ಯಾರು ನಾಯಕನಾಗಿ ನಟಿಸುಬಹುದು ಎಂಬ ಕುತೂಹಲವಿತ್ತು. ಧನಂಜಯ್, ಸತೀಶ್ ನೀನಸಾಂ ಅಂತವರು ಹೆಸರು ಕೇಳಿಬರ್ತಿತ್ತು. ಆದ್ರೀಗ ಅಕಿರಾ ಖ್ಯಾತಿ ಅನೀಶ್ ತೇಜೇಶ್ವರ್ ನಾಯಕನಾಗಿ ಅಂತಿಮವಾಗಿದ್ದಾರೆ.
ಬಹುತೇಕ ಗುಳ್ಟು ಸಿನಿಮಾದಲ್ಲಿ ಕೆಲಸ ಮಾಡಿದವರೇ ಇಲ್ಲಿಯೂ ಮುಂದುವರಿಯಲಿದ್ದಾರೆ. ಗುಳ್ಟು ಸಿನಿಮಾ ನಿರ್ಮಾಣ ಮಾಡಿದ್ದ ಪ್ರಶಾಂತ್ ರೆಡ್ಡಿ ಅವರೇ ಬಂಡವಾಳ ಹಾಕಲಿದ್ದಾರೆ. ಸದ್ಯಕ್ಕೆ ಚಿತ್ರದ ಶೀರ್ಷಿಕೆ ಅಂತಿಮವಾಗಿಲ್ಲ. ಉಳಿದಂತೆ ಪ್ರಿ-ಪ್ರೊಡಕ್ಷನ್ ಕೆಲಸ ನಡೆಯುತ್ತಿದ್ದು, ಆಗಸ್ಟ್ ನಿಂದ ಸಿನಿಮಾ ಆರಂಭವಾಗಲಿದೆ.