Don't Miss!
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಲೆಂಜಿಂಗ್ ಸ್ಟಾರ್ ಗೆ ಚಾಲೆಂಜ್ ಮಾಡಿದ ಅರಣ್ಯಾಧಿಕಾರಿಗಳು
ಮಾಲಾಧಾರಿಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಸ್ನೇಹಿತರ ಜೊತೆ ಇತ್ತೀಚೆಗೆ ಶಬರಿಮಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಾರ್ಗ ಮಧ್ಯೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಹಿಮವತ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಲು ಮುಂದಾದ ವೇಳೆ ಅರಣ್ಯಾಧಿಕಾರಿಗಳು ತಡೆಗಟ್ಟಿರುವ ಘಟನೆ ನಡೆದಿದೆ.
ಎರಡು ಕಾರುಗಳಲ್ಲಿ ದರ್ಶನ್ ಮತ್ತು ಅವರ ಸ್ನೇಹಿತರು ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಲು ಮುಂದಾದಾಗ ಅಧಿಕಾರಿಗಳು ತಡೆಗಟ್ಟಿದ್ದಾರೆ.[ಒಂದೇ ದಿನದಲ್ಲಿ 3 ಬಿರುದು ದಕ್ಕಿಸಿಕೊಂಡ ಚಾಲೆಂಜಿಂಗ್ ಸ್ಟಾರ್]
ಹುಲಿ ಸಂರಕ್ಷಿತ ಪ್ರದೇಶವಾದ್ದರಿಂದ ಖಾಸಗಿ ವಾಹನಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಬೇಕಿದ್ದರೆ ಅರಣ್ಯ ಇಲಾಖೆಯ ವಾಹನದಲ್ಲಿ ಬೆಟ್ಟಕ್ಕೆ ಹೋಗಿ ಎಂದು ಅಧಿಕಾರಿಗಳು ಸಲಹೆ ನೀಡಿದರು.
ಆದರೆ ಇದನ್ನು ನಿರಾಕರಿಸಿದ ನಟ ದರ್ಶನ್ ಮತ್ತು ಅವರ ಸ್ನೇಹಿತರು ತಮ್ಮ ವಾಹನದಲ್ಲೇ ಬೆಟ್ಟಕ್ಕೆ ಹೋಗಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದರು ಎನ್ನಲಾಗಿದೆ.[ವಿಷ್ಣುದಾದಾ' ಜೊತೆ 'ಜಗ್ಗುದಾದಾ', ಗಣಿ, ಪ್ರೇಮ್ ಸೂಪರ್ ಸೆಲ್ಫಿ.!]
ಇದನ್ನು ಅಧಿಕಾರಿಗಳು ನಿರಾಕರಿಸಿದ ಕಾರಣ ಕೊನೆಗೆ ಗೋಪಾಲಸ್ವಾಮಿ ಬೆಟ್ಟಕ್ಕೆ ಹೋಗದೆ ತಮ್ಮ ವಾಹನಗಳಲ್ಲಿ ನೇರವಾಗಿ ಕೇರಳಕ್ಕೆ ತೆರಳಿದರು ಎಂದು ತಿಳಿದುಬಂದಿದೆ.
ಮೇ 12 ರಂದು ನಟ ದರ್ಶನ್ ಅವರು ಶ್ರೀರಾಂಪುರದಲ್ಲಿರುವ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಶಬರಿಮಲೆ ಅಯ್ಯಪ್ಪ ಮಾಲೆ ಧರಿಸಿ ಮಾಲಾಧಾರಿಯಾಗಿದ್ದರು.