Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗುಂಡ್ಲುಪೇಟೆ: ದರ್ಶನ್ ಮೇಲೆ ಚಪ್ಪಲಿ ಎಸೆತ ಖಂಡಿಸಿ ಅಭಿಮಾನಿಗಳ ಪ್ರತಿಭಟನೆ
'ಕ್ರಾಂತಿ' ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಹೊಸಪೇಟೆಗೆ ತೆರಳಿದ್ದ ವೇಳೆ ನಟ ದರ್ಶನ್ ಮೇಲೆ ಕಿಡಿಗೇಡಿಯೊಬ್ಬ ಚಪ್ಪಲಿ ಎಸೆದ ಘಟನೆಯನ್ನು ಚಿತ್ರರಂಗ, ದರ್ಶನ್ ಅಭಿಮಾನಿಗಳು ಹಾಗೂ ಸಿನಿಮಾ ಪ್ರೇಮಿಗಳು ತೀವ್ರವಾಗಿ ಖಂಡಿಸಿದ್ದಾರೆ.
ತಮ್ಮ ಮೆಚ್ಚಿನ ನಟನ ಮೇಲೆ ಚಪ್ಪಲಿ ಎಸೆದಿದ್ದನ್ನು ವಿರೋಧಿಸಿ ದರ್ಶನ್ರ ಅಭಿಮಾನಿಗಳು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ. ಅಂತೆಯೇ, ದರ್ಶನ್ ಮೇಲೆ ಚಪ್ಪಲಿ ಎಸೆದಿರುವ ಘಟನೆ ಖಂಡಿಸಿ ಪಟ್ಟಣದಲ್ಲಿ ದರ್ಶನ ಅಭಿಮಾನಿಗಳು ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಗುಂಡ್ಲುಪೇಟೆಯಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರತಿಭಟನೆ ಜಾಥಾ ಮೆರವಣಿಗೆ ಹೊರಟ ದರ್ಶನ್ ಅಭಿಮಾನಿಗಳು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಎಂಡಿಸಿಸಿ ಬ್ಯಾಂಕ್ ವೃತ್ತದ ಮುಂಭಾಗ ಮಾನವ ಸರಪಳಿ ನಿರ್ಮಿಸಿ ನಂತರ ತಾಲೂಕು ಕಚೇರಿ ಮುಂದೆ ಜಮಾಯಿಸಿದರು. ಈ ವೇಳೆ ಚಪ್ಪಲಿ ಎಸೆದಿರುವ ಕಿಡಿಗೇಡಿಯನ್ನು ಬಂಧಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾ ನಿರತ ದರ್ಶನ ಅಭಿಮಾನಿಗಳು, ದರ್ಶನ್ ಕನ್ನಡದ ಮೇರು ನಟನಾಗಿದ್ದು, ಕನ್ನಡ ನಾಡು ನುಡಿಗೆ ಸಂಬಂಧಿಸಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಇಂತಹ ಮೇರು ನಟನಿಗೆ ಚಪ್ಪಲಿ ಎಸೆದಿರುವುದು ಕ್ರಮ ಸರಿಯಲ್ಲ. ಘಟನೆಯಿಂದ ದರ್ಶನ್ ಅಭಿಮಾನಿಗಳ ಮನಸ್ಸಿಗೆ ನೋವುಂಟಾಗಿದೆ. ಆದ್ದರಿಂದ ಕಿಡಿಗೇಡಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಕನ್ನಡ ಚಿತ್ರ ರಂಗದ ಪ್ರತಿಯೊಬ್ಬ ನಟರು ಸಹ ಕನ್ನಡಕ್ಕೆ ಅವಿಸ್ಮರಣೀಯ ಕೊಡುಗೆ ಸಲ್ಲಿಸುತ್ತಲೆ ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡದ ಯಾವೊಬ್ಬ ನಟನ ಮೇಲು ಇಂತಹ ಕೃತ್ಯ ನಡೆಯದಂತೆ ಸರ್ಕಾರ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಪ್ರತಿಭಟನಾನಿರತ ದರ್ಶನ್ ಅಭಿಮಾನಿಗಳು ತಹಸೀಲ್ದಾರ್ ಸಿ.ಜೆ.ರವಿಶಂಕರ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯ ಕಿರಣ್ ಗೌಡ, ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಮಾಡ್ರಹಳ್ಳಿ ಮಹೇಶ್, ಕರವೇ ರಾಜೇಂದ್ರ ವಿ.ನಾಯಕ್, ಜಾರಕಿಹೊಳಿ ಬ್ರಿಗೇಡ್ ಸಂಸ್ಥಾಪಕ ಗೋವಿಂದರಾಜ್ ಸೇರಿದಂತೆ ದರ್ಶನ್ ಅಭಿಮಾನಿಗಳು ಹಾಜರಿದ್ದರು.