Don't Miss!
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Finance 2023 ಡಿಸೆಂಬರ್ ವೇಳೆಗೆ 160 ಲಕ್ಷ ಕೋಟಿ ರೂ. ದಾಟಿದ ಸರ್ಕಾರದ ಸಾಲ!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳು ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೌರಿ-ಗಣೇಶ ಹಬ್ಬಕ್ಕೆ ಶುಭಕೋರಿದ ಡಿ-ಬಾಸ್ ಮತ್ತು ರಾಕಿ ಭಾಯ್
ಕೊರೊನಾ ವೈರಸ್ ನಡುವೆಯೂ ದೇಶಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಶುರುವಾಗಿದೆ. ಕಳೆದ ವರ್ಷಗಳಿಗೆ ಹೋಲಿಸಿಕೊಂಡರೆ ಈ ವರ್ಷ ಅದ್ಧೂರಿ, ಕಲರ್ ಫುಲ್, ಸಡಗರ ಕಮ್ಮಿಯಾಗಿದ್ದರೂ ಸಂಪ್ರದಾಯದಂತೆ ಹಬ್ಬ ಆಚರಿಸಲಾಗುತ್ತಿದೆ.
Recommended Video
ಸಿನಿಮಾ ಇಂಡಸ್ಟ್ರಿಯಲ್ಲೂ ಈ ಬಾರಿ ಗೌರಿ ಗಣೇಶ ಹಬ್ಬದ ಕಳೆ ಸಹಜವಾಗಿದೆ. ಇಷ್ಟು ದಿನ ಶೂಟಿಂಗ್ ಇಲ್ಲದೇ ಸುಮ್ಮನಿದ್ದ ಮಂದಿ ಗಣೇಶನಿಗೆ ಪ್ರಾರ್ಥಿಸಿ ಚಿತ್ರೀಕರಣ ಪ್ರಾರಂಭಿಸಿದ್ದಾರೆ. ಇನ್ನು ಕೆಲವು ಪೋಸ್ಟರ್, ಟೀಸರ್ ಬಿಡುಗಡೆ ಮಾಡುವ ತಯಾರಿಯಲ್ಲಿದ್ದಾರೆ. ಈ ಮಧ್ಯೆ ಕನ್ನಡದ ಸ್ಟಾರ್ ನಟರಾದ ದರ್ಶನ್ ಮತ್ತು ಯಶ್ ತಮ್ಮ ಅಭಿಮಾನಿಗಳಿಗೆ ಶುಭಾಶಯ ಕೋರಿದ್ದಾರೆ. ಮುಂದೆ ಓದಿ....
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮನೆಯಲ್ಲಿ ಗಣೇಶ ಸಂಭ್ರಮ
ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಸಿ
'ಶ್ರೀ ಗೌರಿ ಸುತನಾದ ಶ್ರೀ ಸಿದ್ದಿ ವಿನಾಯಕನು, ನಿಮ್ಮ ಜೀವನದ ಎಲ್ಲಾ ಅಡೆತಡೆಗಳನ್ನು ದೂರಗೊಳಿಸಿ, ಮಂಗಳಕರ ಆರಂಭವನ್ನು ನೀಡಲೆಂದು ಹಾರೈಸುತ್ತೇನೆ. ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು!! ಪರಿಸರ ಸ್ನೇಹಿ ಗೌರಿ ಗಣೇಶ ಮೂರ್ತಿಗಳನ್ನು ಬಳಸಿ ಪರಿಸರ ಸಂರಕ್ಷಣೆಯಲ್ಲಿ ಕೈಜೋಡಿಸಿ' ಎಂದು ಡಿ ಬಾಸ್ ಮನವಿ ಮಾಡಿದ್ದಾರೆ.
ಎಲ್ಲರಿಗೂ ಸಂತೋಷ ತರಲಿ
'ಈ ವರ್ಷ ನಮ್ಮ ಆಚರಣೆಗಳು ಪ್ರತಿವರ್ಷ ಇದ್ದಷ್ಟು ಭವ್ಯವಾಗಿರದೆ ಇರಬಹುದು ಆದರೆ ಅದೇನೇ ಇದ್ದರೂ ನಮ್ಮ ಉತ್ಸಾಹಕ್ಕೆ ಅಡ್ಡಿಯಾಗಲ್ಲ. ಈ ಹಬ್ಬ ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ತರಲಿ. ಸಂತೋಷವಾಗಿ, ಖುಷಿಯಿಂದ ಗಣೇಶ ಹಬ್ಬವನ್ನು ಆಚರಿಸಿ'' ಎಂದು ನಟ ಯಶ್ ಶುಭಕೋರಿದ್ದಾರೆ.
ಪರಿಸರ ಸ್ನೇಹಿ ಗಣೇಶ ಬಳಸಿ
'ಗೌರಿ ಗಣೇಶ ಹಬ್ಬಕ್ಕೆ ಶುಭಕೋರಿರುವ ನಟಿ ಸಂಯುಕ್ತ ಹೊರನಾಡು 'ಪರಿಸರ ಸ್ನೇಹಿ ಗಣೇಶ ಮೂರ್ತಿ ನನಗೆ ಹೆಚ್ಚು ಇಷ್ಟ. ನೀವು ಸಹ ಪರಿಸರ ಸ್ನೇಹಿ ಗಣೇಶ ಬಳಸಿ ಹಬ್ಬವನ್ನು ಆಚರಿಸಿ' ಎಂದು ಶುಭ ಕೋರಿದ್ದಾರೆ.
ನಿರ್ಮಾಪಕಿ ಶೈಲಜಾ ನಾಗ್
ಯಜಮಾನ ಸಿನಿಮಾದ ನಿರ್ಮಾಪಕಿ ಶೈಲಜಾ ನಾಗ್ ಅವರು ನಾಡಿನ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಯಶ ತಿಳಿಸಿದ್ದಾರೆ. 'ಎಲ್ಲ ತಲ್ಲಣಗಳೂ ನದಿಯ ನೀರಿನ ಹಾಗೆ ಹರಿದು ಹೋಗಿ ಹೊಸದು ಮನತುಂಬಲಿ. ಗೌರಿ, ಗಣೇಶ ಹಬ್ಬದ ಶುಭಾಶಯಗಳು' ಎಂದು ಟ್ವೀಟ್ ಮಾಡಿದ್ದಾರೆ.