Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾಲೇಜ್ ಕುಮಾರ್' ಡೈರೆಕ್ಟರ್ ಮುಂದಿನ ಚಿತ್ರದ ನಾಯಕ ಇವರೇ ನೋಡಿ
'ಕಾಲೇಜ್ ಕುಮಾರ್' ಸಿನಿಮಾ ಹಿಟ್ ಆಗಿದೆ. ಈ ಚಿತ್ರದ ಸಂತಸದಲ್ಲಿರುವ ನಿರ್ದೇಶಕ ಹರಿ ಸಂತೋಷ್ ಅದೇ ಉತ್ಸಾಹದಲ್ಲಿ ತಮ್ಮ ಮುಂದಿನ ಸಿನಿಮಾದ ತಯಾರಿಯನ್ನು ಶುರು ಮಾಡಿದ್ದಾರೆ.
ಹರಿ ಸಂತೋಷ್ ಅವರ ಮುಂದಿನ ಚಿತ್ರದಲ್ಲಿ ನಟ ಶರಣ್ ಅಭಿನಯಿಸುತ್ತಿದ್ದಾರೆ. ಶರಣ್ ಜೊತೆ ಇದೇ ಮೊದಲ ಬಾರಿಗೆ ನಿರ್ದೇಶಕ ಸಂತು ಸಿನಿಮಾ ಮಾಡುತ್ತಿದ್ದಾರೆ. 'ಕಾಲೇಜ್ ಕುಮಾರ್' ಚಿತ್ರದ ಮೂಲಕ ಫ್ಯಾಮಿಲಿ ಡ್ರಾಮಾ ಹೇಳಿದ್ದ ಸಂತು ತಮ್ಮ ಮುಂದಿನ ಚಿತ್ರದಲ್ಲಿಯೂ ಕುಟುಂಬದ ಕಥೆ ಹೇಳಲಿದ್ದಾರಂತೆ. ಶರಣ್ 'ಸತ್ಯ ಹರಿಶ್ಚಂದ್ರ' ಚಿತ್ರದ ಬಳಿಕ ಯೋಗನಾಥ್ ಮುದ್ದಾನ್ ಮತ್ತು ಅನಿಲ್ ಕುಮಾರ್ ಅವರ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಸದ್ಯ ನಡೆಯುತ್ತಿದ್ದು, ಅದರ ನಂತರ ಹೊಸ ಸಿನಿಮಾ ಶುರು ಆಗಲಿದೆ.
ಇನ್ನು ವಿಶೇಷ ಅಂದರೆ ಈ ಸಿನಿಮಾಗೆ 'ಚೌಕ' ಖ್ಯಾತಿಯ ನಿರ್ದೇಶಕ ತರುಣ್ ಸುಧೀರ್ ಸ್ಕ್ರಿಪ್ಟ್ ಬರೆಯುತ್ತಿದ್ದಾರೆ. 'ಮಾಸ್ ಲೀಡರ್' ಚಿತ್ರ ನಿರ್ಮಾಣ ಮಾಡಿದ್ದ ನಿರ್ಮಾಪಕ ತರುಣ್ ಶಿವಣ್ಣ ಈ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ. ಜನವರಿಯಲ್ಲಿ ಶುರುವಾಗಲಿರುವ ಈ ಹೊಸ ಚಿತ್ರಕ್ಕೆ ಇನ್ನು ಟೈಟಲ್ ಇಟ್ಟಿಲ್ಲ.