Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾಲೇಜ್ ಕುಮಾರ್' ಡೈರೆಕ್ಟರ್ ಮುಂದಿನ ಚಿತ್ರದ ನಾಯಕ ಇವರೇ ನೋಡಿ
'ಕಾಲೇಜ್ ಕುಮಾರ್' ಸಿನಿಮಾ ಹಿಟ್ ಆಗಿದೆ. ಈ ಚಿತ್ರದ ಸಂತಸದಲ್ಲಿರುವ ನಿರ್ದೇಶಕ ಹರಿ ಸಂತೋಷ್ ಅದೇ ಉತ್ಸಾಹದಲ್ಲಿ ತಮ್ಮ ಮುಂದಿನ ಸಿನಿಮಾದ ತಯಾರಿಯನ್ನು ಶುರು ಮಾಡಿದ್ದಾರೆ.
ಹರಿ ಸಂತೋಷ್ ಅವರ ಮುಂದಿನ ಚಿತ್ರದಲ್ಲಿ ನಟ ಶರಣ್ ಅಭಿನಯಿಸುತ್ತಿದ್ದಾರೆ. ಶರಣ್ ಜೊತೆ ಇದೇ ಮೊದಲ ಬಾರಿಗೆ ನಿರ್ದೇಶಕ ಸಂತು ಸಿನಿಮಾ ಮಾಡುತ್ತಿದ್ದಾರೆ. 'ಕಾಲೇಜ್ ಕುಮಾರ್' ಚಿತ್ರದ ಮೂಲಕ ಫ್ಯಾಮಿಲಿ ಡ್ರಾಮಾ ಹೇಳಿದ್ದ ಸಂತು ತಮ್ಮ ಮುಂದಿನ ಚಿತ್ರದಲ್ಲಿಯೂ ಕುಟುಂಬದ ಕಥೆ ಹೇಳಲಿದ್ದಾರಂತೆ. ಶರಣ್ 'ಸತ್ಯ ಹರಿಶ್ಚಂದ್ರ' ಚಿತ್ರದ ಬಳಿಕ ಯೋಗನಾಥ್ ಮುದ್ದಾನ್ ಮತ್ತು ಅನಿಲ್ ಕುಮಾರ್ ಅವರ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಸದ್ಯ ನಡೆಯುತ್ತಿದ್ದು, ಅದರ ನಂತರ ಹೊಸ ಸಿನಿಮಾ ಶುರು ಆಗಲಿದೆ.
ಇನ್ನು ವಿಶೇಷ ಅಂದರೆ ಈ ಸಿನಿಮಾಗೆ 'ಚೌಕ' ಖ್ಯಾತಿಯ ನಿರ್ದೇಶಕ ತರುಣ್ ಸುಧೀರ್ ಸ್ಕ್ರಿಪ್ಟ್ ಬರೆಯುತ್ತಿದ್ದಾರೆ. 'ಮಾಸ್ ಲೀಡರ್' ಚಿತ್ರ ನಿರ್ಮಾಣ ಮಾಡಿದ್ದ ನಿರ್ಮಾಪಕ ತರುಣ್ ಶಿವಣ್ಣ ಈ ಸಿನಿಮಾಗೆ ಬಂಡವಾಳ ಹಾಕುತ್ತಿದ್ದಾರೆ. ಜನವರಿಯಲ್ಲಿ ಶುರುವಾಗಲಿರುವ ಈ ಹೊಸ ಚಿತ್ರಕ್ಕೆ ಇನ್ನು ಟೈಟಲ್ ಇಟ್ಟಿಲ್ಲ.