Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಖಿಲ್ ಗೆ ಮಾತ್ರವಲ್ಲ ಹರಿಪ್ರಿಯಾ, ಉಪೇಂದ್ರ ಚಿತ್ರಕ್ಕೂ ರಿಲೀಸ್ ಸಮಸ್ಯೆ
Recommended Video
ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣೆ ನೀತಿ ಸಂಹಿತೆಯೂ ಜಾರಿಯಾಗಿದೆ. ಹೀಗಾಗಿ, ರಾಜಕೀಯ ಪಕ್ಷಕ್ಕೆ ಸಂಬಂಧಪಟ್ಟ ಮತ್ತು ಅಭ್ಯರ್ಥಿಗಳಿಗೆ ಸಂಬಂಧಪಟ್ಟ ಸಿನಿಮಾಗಳ ಪ್ರಚಾರ ಮಾಡುವಂತಿಲ್ಲ.
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಾಗಿರುವ ನಿಖಿಲ್ ಕುಮಾರ್ ಮತ್ತು ಸುಮಲತಾ ಅಭಿನಯದ ಯಾವ ಚಿತ್ರಗಳು ಸದ್ಯಕ್ಕೆ ಬಿಡುಗಡೆಯಾಗುವುದಿಲ್ಲ.
ನಿಖಿಲ್ ಅಭಿನಯದ ಕುರುಕ್ಷೇತ್ರ ಏಪ್ರಿಲ್ 5ಕ್ಕೆ ತೆರೆಗೆ ತರುವ ತಯಾರಿ ನಡೆಸಿದ್ದರು ನಿರ್ಮಾಪಕ ಮುನಿರತ್ನ. ಆದ್ರೆ, ನಿಖಿಲ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದರಿಂದ ಕುರುಕ್ಷೇತ್ರ ಬಿಡುಗಡೆಗೆ ಬ್ರೇಕ್ ಬಿದ್ದಿದೆ.
ಮಂಡ್ಯದ ಈ ನಾಲ್ಕು ವರ್ಗ ಸುಮಲತಾ ಬೆನ್ನಿಗೆ ನಿಂತರೆ ಗೆಲುವು ಖಚಿತ.!
ಅದೇ ರೀತಿ ಸುಮಲತಾ ಮತ್ತು ನಟಿ ಹರಿಪ್ರಿಯಾ ಅಭಿನಯದ 'ಡಾಟರ್ ಅಫ್ ಪಾರ್ವತಮ್ಮ' ಸಿನಿಮಾ ಏಪ್ರಿಲ್ ನಲ್ಲಿ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದರಂತೆ. ಸುಮಲತಾ ಅವರು ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸೂಚನೆ ನೀಡಿರುವುದರಿಂದ ಸದ್ಯಕ್ಕೆ ಈ ಚಿತ್ರದ ರಿಲೀಸ್ ಕೂಡ ಮುಂದಕ್ಕೆ ಹೋಗಲಿದೆ.
ಸುಮಲತಾ - ನಿಖಿಲ್ ಕುಮಾರ್ ಇಬ್ಬರಲ್ಲಿ ಚರಣ್ ರಾಜ್ ಯಾರ ಪರ?
ಇನ್ನು ರಿಯಲ್ ಸ್ಟಾರ್ ಉಪೇಂದ್ರ ಮತ್ತು ರಚಿತಾ ರಾಮ್ ಅಭಿನಯದ 'ಐ ಲವ್ ಯೂ' ಸಿನಿಮಾಗೂ ಎಲೆಕ್ಷನ್ ಬಿಸಿ ತಟ್ಟಲಿದೆ. ಪ್ರಜಾಕೀಯ ಪಕ್ಷದ ಎಲ್ಲ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನ ನಿಲ್ಲಿಸುವ ತಯಾರಿ ನಡೆಸುತ್ತಿರುವ ಉಪೇಂದ್ರ ಅವರು, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಆದ್ರೆ, ತಮ್ಮ ಪಕ್ಷ ಎಲೆಕ್ಷನ್ ನಲ್ಲಿ ಭಾಗಿಯಾಗುತ್ತಿರುವ ಕಾರಣ ಉಪ್ಪಿಯ ಐ ಲವ್ ಯೂ ಚಿತ್ರವೂ ಸದ್ಯಕ್ಕೆ ರಿಲೀಸ್ ಆಗುವುದು ಅನುಮಾನ
ಚುನಾವಣೆ ಮುಗಿದು, ಫಲಿತಾಂಶ ಹೊರಬೀಳುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರುತ್ತೆ. ಅಲ್ಲಿಯವರೆಗೂ ಈ ಚಿತ್ರಗಳು ತೆರೆಗೆ ಬರುವುದು ಕಷ್ಟ.