Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಕ್ಕಿ ನಾಯಕಿ ಹರಿಪ್ರಿಯಾಗೆ ದಿನಕರ್ ತಂಡದಿಂದ ಬುಲಾವ್
ಚಂದನವನದ ಲಕ್ಕಿ ಹೀರೋಯಿನ್ ಹರಿಪ್ರಿಯಾಗೆ ಮತ್ತೊಂದು ಬಿಗ್ ಪ್ರಾಜೆಕ್ಟ್ ನಲ್ಲಿ ನಟಿಲಸು ಅವಕಾಶ ಸಿಕ್ಕಿದೆ. ಈಗಾಗಲೇ ಸಾಲು ಸಾಲು ಸಿನಿಮಾಗಳನ್ನ ಕೈಯಲ್ಲಿಟ್ಟುಕೊಂಡಿರುವ ಹರಿಪ್ರಿಯಾ ಒಂದರ ಹಿಂದೆ ಒಂದರಂತೆ ಚಿತ್ರಗಳನ್ನ ಒಪ್ಪಿಕೊಳ್ಳುತ್ತಿದ್ದಾರೆ.
ದಿನಕರ್ ತೂಗುದೀಪ ಅಡ್ಡದಿಂದ ಇದೀಗಷ್ಟೇ ಹೊರಬಂದ ಸುದ್ದಿಯಿದು...
ಹೀಗಿರುವಾಗ, ದಿನಕರ್ ತೂಗುದೀಪ್ ಡೈರೆಕ್ಷನ್ ನಲ್ಲಿ ಮೂಡಿ ಬರುತ್ತಿರುವ ಹೊಸ ಚಿತ್ರಕ್ಕೆ ಹರಿಪ್ರಿಯಾ ಎಂಟ್ರಿ ಕೊಟ್ಟಿದ್ದಾರೆ. ಇತ್ತೀಚೆಗಷ್ಟೆ ದಿನಕರ್ ತೂಗುದೀಪ್ 'ಲೈಫ್ ಜೊತೆ ಒಂದು ಸೆಲ್ಫಿ' ಚಿತ್ರವನ್ನ ಘೋಷಣೆ ಮಾಡಿದ್ದರು. ಈ ಚಿತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮತ್ತು ನೆನಪಿರಲಿ ಪ್ರೇಮ್ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇವರಿಬ್ಬರಿಗೆ ಜೋಡಿಯಾಗಿ ಈಗ ಹರಿಪ್ರಿಯಾ ಆಯ್ಕೆಯಾಗಿದ್ದಾರೆ.
ಹರಿಪ್ರಿಯಾ ಅವರದ್ದು ಈ ಚಿತ್ರದಲ್ಲಿ ತುಂಬಾ ವಿಶೇಷವಾದ ಪಾತ್ರವಾಗಿದೆ ಎಂದು ದಿನಕರ್ ತೂಗುದೀಪ್ ಹೇಳಿದ್ದಾರೆ. 'ನಿರ್ದೋಸೆ' ಇಲ್ಲಿಯವರೆಗೂ ಹರಿಪ್ರಿಯಾ ಅವರ ಬೆಸ್ಟ್ ಪರ್ಫಾಮೆನ್ಸ್ ಅಂತಾನೆ ಹೇಳಬಹುದು. ಆದ್ರೆ, ಆ ರೀತಿಯ ಪಾತ್ರ ಇದಲ್ಲ. ಈ ಹಿಂದೆ ಮಾಡದ ಪಾತ್ರದಲ್ಲಿ ಹರಿಪ್ರಿಯಾ ಅಭಿನಯಿಸಲಿದ್ದಾರೆ ಎಂದು ನಿರ್ದೇಶಕರು ಹರಿಪ್ರಿಯಾ ಅವರ ಪಾತ್ರದ ಬಗ್ಗೆ ಬಹಿರಂಗಪಡಿಸಿದ್ದಾರೆ.
'ನೀರ್ ದೋಸೆ' ಹರಿಪ್ರಿಯಾ ಅವರ ಡೇಟಿಂಗ್ ವಿಷ್ಯ
ಇದೊಂದು ಸ್ನೇಹದ ಕುರಿತಾದ ಸಿನಿಮಾವಾಗಿದ್ದು, ಈ ಚಿತ್ರಕ್ಕೆ ದಿನಕರ್ ತೂಗುದೀಪ್ ಅವರ ಪತ್ನಿ ಮಾನಸ ಅವರೇ ಸ್ಕ್ರಿಪ್ಟ್ ಬರೆದಿದ್ದಾರೆ. ಅಂದ್ಹಾಗೆ, ಈ ಚಿತ್ರವನ್ನ ಸಮೃದ್ಧಿ ಮಂಜುನಾಥ್ ಮತ್ತು ವಿರಾಟ್ ಸಾಯಿ ನಿರ್ಮಾಣ ಮಾಡುತ್ತಿದ್ದಾರೆ. ವಿ.ಹರಿಕೃಷ್ಣ ಅವರ ಸಂಗೀತವಿದ್ದು, ನಿರಂಜನ್ ಬಾಬು ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಸೆಪ್ಟಂಬರ್ ತಿಂಗಳಿನಲ್ಲಿ ಈ ಚಿತ್ರವ ಸೆಟ್ಟೇರಲಿದೆ.