Don't Miss!
- News ಬಿಎಂಟಿಸಿ & ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳಕ್ಕೆ ಕಾರಣ ಏನು?-ಇಲ್ಲಿದೆ ಮಾಹಿತಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಣ್ಣಾವ್ರ ಹಾಡು ಹಾಡಿದ ಬಾಲಿವುಡ್ ಖ್ಯಾತ ನಟ ಗೋವಿಂದ: ವಿಡಿಯೋ ಹಂಚಿಕೊಂಡ ನಟಿ ಹರ್ಷಿಕಾ
ಬಾಲಿವುಡ್ ನ ಖ್ಯಾತ ನಟ ಗೋವಿಂದ ಇತ್ತೀಚಿಗೆ ಅಣ್ಣಾವ್ರ ಹಾಡು ಹಾಡುವ ಮೂಲಕ ಕನ್ನಡಾಭಿಮಾನಿಗಳ ಮನಗೆದ್ದಿದ್ದಾರೆ. ಕನ್ನಡದ ಹಾಡುಗಳು, ಕನ್ನಡ ಸಿನಿಮಾಗಳು ಎಂದರೇ ಕನ್ನಡಿಗರೇ ತಿರಸ್ಕಾರ ಮಾಡುತ್ತಿರುವ ಇಂಥ ಸಮಯದಲ್ಲಿ ಪರಭಾಷೆಯ ಕಲಾವಿದರು ಕನ್ನಡದ ಹಾಡುಗಳನ್ನು, ಸಿನಿಮಾಗಳನ್ನು ಇಷ್ಟ ಪಡುವುದು ಮತ್ತು ಹಾಡುವುದನ್ನು ನೋಡುವುದೇ ಹೆಮ್ಮೆ ಅನಿಸುತ್ತೆ.
ಇದಕ್ಕೆ ಉತ್ತಮ ಉದಾಹರಣೆ ಎಂದರೇ ಬಾಲಿವುಡ್ನ ಖ್ಯಾತ ನಟ ಗೋವಿಂದ. ಇತ್ತೀಚಿಗೆ ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ನಟ ಗೋವಿಂದ ಅವರನ್ನು ಭೇಟಿಯಾಗಿದ್ದಾರೆ. ಈ ಸಮಯದಲ್ಲಿ ಅವರ ಬಳಿ ಕನ್ನಡ ಹಾಡನ್ನು ಹೇಳುವಂತೆ ಕೇಳಿಕೊಂಡಿದ್ದಾರೆ. ಅದರಂತೆ ಅವರು ಡಾ.ರಾಜ್ ಕುಮಾರ್ ಎಂದೆಂದೂ ನಿನ್ನನು ಮರೆತು ನಾನಿರಲಾರೆ...ಹಾಡನ್ನು ಅದ್ಭುತವಾಗಿ ಹಾಡಿ ಕನ್ನಡಿಗರ ಹೃದಯ ಗೆದ್ದಿದ್ದಾರೆ.
ಬಾಲಿವುಡ್ ಜನರ ಕುತಂತ್ರಗಳ ಬಿಚ್ಚಿಟ್ಟ ಹಿರಿಯ ನಟ ಗೋವಿಂದ
ಡಾ.ರಾಜ್ ಕುಮಾರ್ ನಟನೆಯ ಎರಡು ಕನಸು ಸಿನಿಮಾದ ಹಾಡು ಇದಾಗಿದ್ದು, ಕನ್ನಡಿಗರ ನೆಚ್ಚಿನ ಗೀತೆಗಳಲ್ಲಿ ಇದು ಒಂದಾಗಿದೆ. ಈ ಹಾಡು ಎಂದರೆ ಬಾಲಿವುಡ್ ನಟ ಗೋವಿಂದ ಅವರಿಗೂ ತುಂಬಾ ಇಷ್ಟ. ಗೋವಿಂದ ಹಾಡಿರುವ ಹಾಡನ್ನು ನಟಿ ಹರ್ಷಿಕಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ಕನ್ನಡಿಗರಿಂದ ಸಿಕ್ಕಾಪಟ್ಟೆ ಲೈಕ್ಸ್ ಹರಿದುಬರುತ್ತಿದೆ.
ಅಂದಹಾಗೆ ಗೋವಿಂದ ಈ ಹಾಡನ್ನು ಹಾಡುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ಹಿಂದಿ ಕಿರುತೆರೆಯ ರಿಯಾಲಿಟಿ ಶೋ ಒಂದರಲ್ಲಿ ಈ ಹಾಡನ್ನು ಹಾಡಿ ಎಲ್ಲರ ಗಮನ ಸೆಳೆದಿದ್ದರು. ಗೋವಿಂದ ಅವರ ಆ ವಿಡಿಯೋ ಕೂಡ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಮತ್ತೆ ಅದೇ ಹಾಡನ್ನು ಹಾಡಿ ಕನ್ನಡಿಗರ ಹೃದಯ ಗೆದ್ದಿದ್ದಾರೆ.