Don't Miss!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- News Karnataka Rain: ರಾಜ್ಯಕ್ಕೆ ಶೇ.20ರಷ್ಟು ಮಳೆ ಕೊರತೆ: ಏಪ್ರಿಲ್ 25 ದಿನದಲ್ಲಿ ಸುರಿದ ಮಳೆ ವರದಿ ಇಲ್ಲಿದೆ
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಸ್ಯ ಚಕ್ರವರ್ತಿ ನರಸಿಂಹರಾಜು ಜನ್ಮದಿನಾಚರಣೆ
ಇಂದು ಅವರು ಬೌತಿಕವಾಗಿ ಚಿತ್ರರಸಿಕರ ಜೊತೆಗಿಲ್ಲದಿದ್ದರೂ ತಮ್ಮ ಚಿತ್ರಗಳ ಮೂಲಕ ನಿತ್ಯ ನಗಿಸುತ್ತಿದ್ದಾರೆ. ಚಿತ್ರಕ್ಕೆ ನಾಯಕ, ನಾಯಕಿಯಂತೆ ಹಾಸ್ಯನಟನ ಪಾತ್ರವೂ ಮುಖ್ಯ ಎನ್ನುವುದನ್ನು ತೋರಿಸಿಕೊಟ್ಟವರು ನರಸಿಂಹರಾಜು.
ಹಾಸ್ಯ ಚಕ್ರವರ್ತಿ ನರಸಿಂಹರಾಜು ಅವರ 90ನೇ ಜನ್ಮ ದಿನಾಚರಣೆಯನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಹಮ್ಮಿಕೊಂಡಿದೆ. ಒಟ್ಟು ಎರಡು ದಿನಗಳ ಕಾಲ ಅಕ್ಟೋಬರ್ 5 ಹಾಗೂ 6ರಂದು ಪ್ರಿಯದರ್ಶಿನಿ ಚಿತ್ರಮಂದಿರ ಬಾದಾಮಿ ಹೌಸ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರು ಉದ್ಘಾಟಿಸಲಿದ್ದಾರೆ. ಉಪಸ್ಥಿತಿ ಹಿರಿಯ ಕಲಾವಿದೆ ಸುಧಾ ನರಸಿಂಹರಾಜು. ಇದೇ ಸಂದರ್ಭದಲ್ಲಿ ನರಸಿಂಹರಾಜು ಅವರ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.
ಇದೇ ಸಂದರ್ಭದಲ್ಲಿ ಹಾಸ್ಯ ಚಕ್ರವರ್ತಿ ಸಾಕ್ಷ್ಯಚಿತ್ರ ಪ್ರದರ್ಶನ, ಅಕ್ಟೋಬರ್ 5ರಂದು ಮಧ್ಯಾಹ್ನ 2 ಗಂಟೆಗೆ ಮಕ್ಕಳ ರಾಜ್ಯ ಚಲನಚಿತ್ರ ಪ್ರದರ್ಶನ ಇರುತ್ತದೆ. ಅಕ್ಟೋಬರ್ 6ರಂದು ಬೆಳಗ್ಗೆ 11ಕ್ಕೆ ವಿಚಾರ ಸಂಕಿರಣದಲ್ಲಿ 'ಕನ್ನಡ ರಂಗಭೂಮಿಗೆ ನರಸಿಂಹರಾಜು' ಕೊಡುಗೆ ಕುರಿತು ಗುಡಿಹಳ್ಳಿ ನಾಗರಾಜ್ ಮಾತನಾಡಲಿದ್ದಾರೆ.
ಚಲನಚಿತ್ರರಂಗದಲ್ಲಿ ನರಸಿಂಹರಾಜು ಕುರಿತ ವಿಚಾರ ಸಂಕಿರಣವನ್ನು ಡಾ.ಕೆ.ಪುಟ್ಟಸ್ವಾಮಿ ಮಾತನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ನರಸಿಂಹರಾಜು ಕುರಿತ ಕೃತಿಯೂ ಬಿಡುಗಡೆ ಮಾಡಲಾಗುತ್ತದೆ. ಡಾ. ರಾಜ್ ಜೊತೆಗೆ 'ಬೇಡರ ಕಣ್ಣಪ್ಪ' ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನರಸಿಂಹರಾಜು ನಂತರವೂ ರಂಗ ಭೂಮಿಯನ್ನು ಕಡೆಗಣಿಸಲಿಲ್ಲ. (ಒನ್ಇಂಡಿಯಾ ಕನ್ನಡ)