Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಸ್ಯ ಚಕ್ರವರ್ತಿ ನರಸಿಂಹರಾಜು ಜನ್ಮದಿನಾಚರಣೆ
ಇಂದು ಅವರು ಬೌತಿಕವಾಗಿ ಚಿತ್ರರಸಿಕರ ಜೊತೆಗಿಲ್ಲದಿದ್ದರೂ ತಮ್ಮ ಚಿತ್ರಗಳ ಮೂಲಕ ನಿತ್ಯ ನಗಿಸುತ್ತಿದ್ದಾರೆ. ಚಿತ್ರಕ್ಕೆ ನಾಯಕ, ನಾಯಕಿಯಂತೆ ಹಾಸ್ಯನಟನ ಪಾತ್ರವೂ ಮುಖ್ಯ ಎನ್ನುವುದನ್ನು ತೋರಿಸಿಕೊಟ್ಟವರು ನರಸಿಂಹರಾಜು.
ಹಾಸ್ಯ ಚಕ್ರವರ್ತಿ ನರಸಿಂಹರಾಜು ಅವರ 90ನೇ ಜನ್ಮ ದಿನಾಚರಣೆಯನ್ನು ಕರ್ನಾಟಕ ಚಲನಚಿತ್ರ ಅಕಾಡೆಮಿ ಹಮ್ಮಿಕೊಂಡಿದೆ. ಒಟ್ಟು ಎರಡು ದಿನಗಳ ಕಾಲ ಅಕ್ಟೋಬರ್ 5 ಹಾಗೂ 6ರಂದು ಪ್ರಿಯದರ್ಶಿನಿ ಚಿತ್ರಮಂದಿರ ಬಾದಾಮಿ ಹೌಸ್ ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರು ಉದ್ಘಾಟಿಸಲಿದ್ದಾರೆ. ಉಪಸ್ಥಿತಿ ಹಿರಿಯ ಕಲಾವಿದೆ ಸುಧಾ ನರಸಿಂಹರಾಜು. ಇದೇ ಸಂದರ್ಭದಲ್ಲಿ ನರಸಿಂಹರಾಜು ಅವರ ಅಪರೂಪದ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.
ಇದೇ ಸಂದರ್ಭದಲ್ಲಿ ಹಾಸ್ಯ ಚಕ್ರವರ್ತಿ ಸಾಕ್ಷ್ಯಚಿತ್ರ ಪ್ರದರ್ಶನ, ಅಕ್ಟೋಬರ್ 5ರಂದು ಮಧ್ಯಾಹ್ನ 2 ಗಂಟೆಗೆ ಮಕ್ಕಳ ರಾಜ್ಯ ಚಲನಚಿತ್ರ ಪ್ರದರ್ಶನ ಇರುತ್ತದೆ. ಅಕ್ಟೋಬರ್ 6ರಂದು ಬೆಳಗ್ಗೆ 11ಕ್ಕೆ ವಿಚಾರ ಸಂಕಿರಣದಲ್ಲಿ 'ಕನ್ನಡ ರಂಗಭೂಮಿಗೆ ನರಸಿಂಹರಾಜು' ಕೊಡುಗೆ ಕುರಿತು ಗುಡಿಹಳ್ಳಿ ನಾಗರಾಜ್ ಮಾತನಾಡಲಿದ್ದಾರೆ.
ಚಲನಚಿತ್ರರಂಗದಲ್ಲಿ ನರಸಿಂಹರಾಜು ಕುರಿತ ವಿಚಾರ ಸಂಕಿರಣವನ್ನು ಡಾ.ಕೆ.ಪುಟ್ಟಸ್ವಾಮಿ ಮಾತನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ನರಸಿಂಹರಾಜು ಕುರಿತ ಕೃತಿಯೂ ಬಿಡುಗಡೆ ಮಾಡಲಾಗುತ್ತದೆ. ಡಾ. ರಾಜ್ ಜೊತೆಗೆ 'ಬೇಡರ ಕಣ್ಣಪ್ಪ' ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ನರಸಿಂಹರಾಜು ನಂತರವೂ ರಂಗ ಭೂಮಿಯನ್ನು ಕಡೆಗಣಿಸಲಿಲ್ಲ. (ಒನ್ಇಂಡಿಯಾ ಕನ್ನಡ)