Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಲ್ಲರಿಗೂ ಧನ್ಯವಾದಗಳು: ಗೀತಾ ಮತ್ತು ಶಿವರಾಜಕುಮಾರ್
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಜೇಷ್ಠ ಪುತ್ರಿ ಡಾ.ನಿರುಪಮಾ ಅವರ ವಿವಾಹವು ಡಾ.ದಿಲೀಪ್ ಅವರ ಜೊತೆ ಕಳೆದ ಸೋಮವಾರ (ಆಗಸ್ಟ್ 31) ದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ವೈಭವದಿಂದ ನೆರವೇರಿದೆ.
ಇದೀಗ ನಟ ಶಿವರಾಜ್ ಕುಮಾರ್ ಅವರು ತಮ್ಮ ಮುದ್ದು ಮಗಳ ಮದುವೆಯ ಸಂಭ್ರಮವನ್ನು ಎಲ್ಲಾ ಅಭಿಮಾನಿ ಬಳಗಕ್ಕೆ ಹಾಗೂ ಪ್ರೇಕ್ಷಕರಿಗೆ ತಲುಪಿಸಿದ್ದಕ್ಕಾಗಿ ಎಲ್ಲಾ ಮಾಧ್ಯಮ ಬಂಧುಗಳಿಗೆ ಶನಿವಾರ (ಸೆಪ್ಟೆಂಬರ್ 5) ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದ್ದಾರೆ.[ಶಿವಣ್ಣ ಮಗಳ ಮದುವೆಯಲ್ಲಿ ಸುದೀಪ್-ಪುನೀತ್ ಮಾಡಿದ್ದೇನು? ]
ಹೀಗಾಗಿ ನಟ ಶಿವರಾಜ್ ಕುಮಾರ್ ಅವರು ವಿಶೇಷವಾಗಿ ಮಾಧ್ಯಮದವರಿಗೆಂದೇ ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ನಲ್ಲಿ ಶನಿವಾರ (ಸೆಪ್ಟೆಂಬರ್ 5) ದಂದು ಸ್ಪೆಷಲ್ ಗೆಟ್-ಟುಗೆದರ್ ಪಾರ್ಟಿ ಆರೆಂಜ್ ಮಾಡಿದ್ದರು.[ಶಿವಣ್ಣ ಮಗಳ ಮದುವೆಯ 'ರಾಜ' ವೈಭೋಗ]
ಈ ಸಂದರ್ಭದಲ್ಲಿ ಮಾತನಾಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮಗಳ ಮದುವೆಯ ಸಂಭ್ರಮವನ್ನು ಅದ್ಧೂರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಿದ್ದಕ್ಕಾಗಿ ಹಾಗೂ ಮದುವೆ ಸಾಂಗವಾಗಿ ನೆರವೇರಿದ್ದಕ್ಕಾಗಿ ಮಾದ್ಯಮ ವರ್ಗದವರಿಗೆ ಧನ್ಯವಾದ ತಿಳಿಸಿದ್ದಾರೆ.[ಮುತ್ತಣ್ಣನ ಮಗಳ ಮದುವೆಗೆ ಕುಮಾರನಿಗಿಲ್ಲ ಆಹ್ವಾನ ]
ಈ ವಿಶೇಷ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್, ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಗೀತಾ ಶಿವರಾಜ್ ಕುಮಾರ್ ಅವರ ಸೋದರ ಮಧು ಬಂಗಾರಪ್ಪ, ಕೆ.ಪಿ ಶ್ರೀಕಾಂತ್ ಮುಂತಾದವರು ಭಾಗವಹಿಸಿದ್ದರು.