twitter
    For Quick Alerts
    ALLOW NOTIFICATIONS  
    For Daily Alerts

    ಕದ್ರಿ ಮಂಜುನಾಥೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್

    By ಮಂಗಳೂರು ಪ್ರತಿನಿಧಿ
    |

    Recommended Video

    Hatrick Hero Shiva Rajkumar visits Kadri Temple, Mangalore

    ಮಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇಂದು ಮಂಗಳೂರಿಗೆ ಭೇಟಿ ನೀಡಿದರು. ನಗರದ ಕದ್ರಿ ದೇವಾಲಯಕ್ಕೆ ಭೇಟಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕದ್ರಿ ಮಂಜುನಾಥೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

    ಇಂದು ಕದ್ರಿ ಮೈದಾನದಲ್ಲಿ ಕದ್ರಿ ಫ್ರೆಂಡ್ಸ್ ಆಯೋಜಿಸಿರುವ ಸ್ಟಾರ್ ನೈಟ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿರುವ ಶಿವರಾಜ್ ಕುಮಾರ್ ತಮ್ಮ ಬಿಜಿ ಶೆಡ್ಯೂಲ್ ಮಧ್ಯೆಯೂ ಕದ್ರಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ದೇವಾಲಯಕ್ಕೆ ಆಗಮಿಸಿದ್ದ ಭಕ್ತರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.

    hatrick hero shivarajkumar visits kadri temple in mangalore

    ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ನಿನ್ನೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದಿದ್ದರು. ಮಠದ ಆವರಣದಲ್ಲಿ ನಡೆಯುತ್ತಿದ್ದ ಮುದ್ದುಕೃಷ್ಣ ವೇಷ ಧರಿಸಿದ್ದ ಮಕ್ಕಳೊಂದಿಗೆ ಬೆರೆತ ಶಿವರಾಜ್ ಕುಮಾರ್ ಮಕ್ಕಳನ್ನು ಎತ್ತಿಕೊಂಡು ಮುದ್ದಾಡಿದರು. ನಂತರ ಪರ್ಯಾಯ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು.

    English summary
    Hatrick Hero Shivarajkumar visited Kadri Temple in Mangaluru today (Sep 14th).
    Thursday, September 14, 2017, 16:48
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X