Don't Miss!
- News 1951 ರಿಂದ 2019 : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಇಲ್ಲಿದೆ ವಿವರ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯ ಪ್ರಚಾರದಲ್ಲಿ ವಿಷ್ಣು ಸ್ಮಾರಕ ಕೂಗು: ಅಭಿಮಾನಕ್ಕೆ ತಲೆಬಾಗಿದ ಸಿಎಂ
Recommended Video
ಮಂಡ್ಯ ಲೋಕಸಭೆ ಅಖಾಡ ರಣರಂಗವಾಗಿದೆ. ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಅಬ್ಬರ ಪ್ರಚಾರ ನಡೆಯುತ್ತಿದೆ. ಒಂದು ಕಡೆ ಸಿಎಂ ಇನ್ನೊಂದು ಕಡೆ ಯಶ್-ದರ್ಶನ್ ಬಿರುಸಿನ ಮತಯಾಚನೆ ನಡೆಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಬುಧವಾರ ನಿಖಿಲ್ ಪರವಾಗಿ ಪ್ರಚಾರ ಮಾಡಿದ ಸಿಎಂ, ಡಾ ವಿಷ್ಣುವರ್ಧನ್ ಸ್ಮಾರಕದ ಬಗ್ಗೆ ಭರವಸೆ ನೀಡಿ ಗಮನ ಸೆಳೆದರು. ಮಂಡ್ಯದ ಹಳ್ಳಿಯೊಂದರಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ವಿಷ್ಣುವರ್ಧನ್ ಅಭಿಮಾನಿಗಳು ಸಿಎಂಗೆ ಬೇಡಿಕೆ ಇಟ್ಟರು.
ಸತ್ತ ಮೇಲೂ ನಾನು ವಿಷ್ಣು ಅಭಿಮಾನಿ ಎಂದು ಜಗತ್ತಿಗೆ ಸಾರಿದ ದಾದಾ ಸೇನಾನಿ
ಇದಕ್ಕೆ ಪ್ರತಿಯಾಗಿ ಸ್ಪಂದಿಸಿದ ಕುಮಾರಸ್ವಾಮಿ ''ಡಾ ವಿಷ್ಣುವರ್ಧನ್ ಅವರ ನಿಧನರಾದಾಗ ಅಭಿಮಾನ್ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ಮಾಡಲು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹೇಳಿದ್ದು ನಾನು. ಅಂದು ಜಯನಗರದಲ್ಲಿ ಅಂತ್ಯಕ್ರಿಯೆ ಮಾಡಲು ಕುಟುಂಬದವರು ನಿರ್ಧರಿಸಿದ್ದರು'' ಎಂದು ಸಿಎಂ ಅಭಿಮಾನಿಗಳಿಗೆ ಮನವರಿಕೆ ಮಾಡಿಕೊಟ್ಟರು.
'ರಾಜ್-ವಿಷ್ಣು-ಅಂಬಿ ನಂತರ ಯಾರಿಗೂ ಸ್ಮಾರಕ ಬೇಡ' ಎಂದ ಖ್ಯಾತ ನಟ
ಇನ್ನು ಸ್ಮಾರಕ ನಿರ್ಮಾಣ ಮಾಡಿ ಎಂದು ಕೇಳಿದ ಅಭಿಮಾನಿಗಳಿಗೆ ''ಚುನಾವಣೆ ನಂತರ ಯಾವ ರೀತಿ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ನೀವು ಆದೇಶ ಮಾಡಿ, ನಾನು ಮಾಡಿಕೊಡುತ್ತೇನೆ'' ಎಂದು ಭರವಸೆ ನೀಡಿದರು.
ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕ ಆಗಲಿ ಎಂದು ಕೋಟ್ಯಾಂತರ ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಆದ್ರೆ, ಅಲ್ಲಿನ ಜಾಗ ವಿವಾದಕ್ಕೆ ಗುರಿಯಾಗಿದ್ದು, ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವಂತೆ ಕುಟುಂಬ ಕೇಳಿಕೊಂಡಿದೆ.
ಹಾಗಾಗಿ, ವಿಷ್ಣು ಸ್ಮಾರಕ ವಿವಾದ ಇದುವರೆಗೂ ಬಗೆಹರಿಯದ ಸಮಸ್ಯೆಯಾಗಿ ಉಳಿದುಕೊಂಡಿದೆ. ಎಲೆಕ್ಷನ್ ಮುಗಿದ ಮೇಲೆ ಮಾಡೋಣ ಎಂದಿರುವ ಸಿಎಂ, ಆದಷ್ಟೂ ಬೇಗ ಈ ಒಳ್ಳೆಯ ಕೆಲಸ ಮಾಡಿಕೊಡಲಿ ಎಂಬುದಷ್ಟೇ ದಾದಾ ಅಭಿಮಾನಿಗಳ ಕೋರಿಕೆ.