Don't Miss!
- News Karnataka Rain Forecast: ಏಪ್ರಿಲ್ 20ರವರೆಗೆ ಈ ಜಿಲ್ಲೆಗಳಲ್ಲಿ ವರ್ಷಧಾರೆ
- Sports KKR vs LSG IPL 2024: ಸಾಲ್ಟ್, ಅಯ್ಯರ್ ಭರ್ಜರಿ ಬ್ಯಾಟಿಂಗ್; ಲಕ್ನೋ ವಿರುದ್ಧ ಕೋಲ್ಕತ್ತಾಗೆ ಚೊಚ್ಚಲ ಗೆಲುವು
- Lifestyle ಬೇಸಿಗೆಯಲ್ಲಿ ನಿತ್ಯ ಸೌತೆಕಾಯಿ ತಿಂದರೆ ಏನಾಗುತ್ತೆ? ರಾತ್ರಿ ಸೇವಿಸಬಾರದು ಏಕೆ.?
- Finance ಅಮೇರಿಕನ್ ಕಂಪನಿಗಳಿಗೆ ಸೆಡ್ಡು ಹೊಡೆಯಲು ಮುಂದಾದ ಆರ್ಬಿಐ, ಫೋನ್ಪೇ, ಗೂಗಲ್ಗೆ ಆತಂಕ!
- Technology Poco: ಶೀಘ್ರದಲ್ಲೇ ಲಾಂಚ್ ಆಗಲಿದೆ ಪೊಕೊ F6 ಸ್ಮಾರ್ಟ್ಫೋನ್: ನಿರೀಕ್ಷಿತ ಫೀಚರ್ಸ್ ಏನು?
- Automobiles ಬಿಡುಗಡೆಗೆ ಸಜ್ಜಾದ ಫೋರ್ಸ್ ಗೂರ್ಖಾ 5-ಡೋರ್ ಎಸ್ಯುವಿ: ಮಹೀಂದ್ರಾ ಥಾರ್ಗೆ ಎದೆಬಡಿತ ಶುರು
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಹೋಟೆಲ್ ಗಲಾಟೆ ಕುರಿತು ಎಚ್ಡಿ ಕುಮಾರಸ್ವಾಮಿ ಏನಂದ್ರು?
ಹೋಟೆಲ್ ಸಪ್ಲೈಯರ್ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ''ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಲಿ'' ಎಂದಿದ್ದಾರೆ.
''ಇಂತಹ ವಿಷಯಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಆಮೇಲೆ ಅದಕ್ಕೆ ಬೇರೆ ಏನೋ ಸಂಬಂಧ ಕಲ್ಪಿಸುವುದು ಬೇಡ. ಇದೆಲ್ಲ ಅವಶ್ಯಕತೆ ಇಲ್ಲ. ಯಾರಾದರೂ ತಪ್ಪು ಮಾಡಿದ್ರೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು, ನನಗೆ ಇದು ಸಂಬಂಧ ಇಲ್ಲ. ಈ ವಿಷಯಗಳು ಏನು ಎಂದು ಸರ್ಕಾರ ಮಾಹಿತಿ ಹೇಳಬೇಕು'' ಎಂದು ತಿಳಿಸಿದ್ದಾರೆ.
2 ದಿನದಲ್ಲಿ 25 ಲಕ್ಷ ಸಂಗ್ರಹ: ಡಿ-ಬಾಸ್ ಮನವಿಗೆ ಭರ್ಜರಿ ಪ್ರತಿಕ್ರಿಯೆ
ಇನ್ನು ಸಾರ್ವಜನಿಕ ಜೀವನದಲ್ಲಿ ಈ ರೀತಿ ಎಲ್ಲಾ ನಡೆದುಕೊಳ್ಳುವುದು ಎಷ್ಟು ಸರಿ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ''ಅದು ಅವರವರ ವೈಯಕ್ತಿಕ, ಸಾರ್ವಜನಿಕ ಜೀವನದಲ್ಲಿ ಹೇಗಿರಬೇಕು ಎನ್ನುವುದು ಅವರಿಗೆ ಸೇರಿದ್ದು'' ಎಂದಿದ್ದಾರೆ.
ಇಂದ್ರಜಿತ್ ಲಂಕೇಶ್ ಆರೋಪ
ಅರುಣಾ ಕುಮಾರಿ ಪ್ರಕರಣ ಸ್ವಲ್ಪ ತಣ್ಣಗಾಗುತ್ತಿದ್ದಂತೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಟ ದರ್ಶನ್ ವಿರುದ್ಧ ಸಿಡಿದೆದ್ದಿದ್ದಾರೆ. ಸಂದೇಶ್ ಪ್ರಿನ್ಸ್ ಹೋಟೆಲ್ನಲ್ಲಿ ವೇಟರ್ವೊಬ್ಬರ ಮೇಲೆ ನಟ ದರ್ಶನ್ ಹಲ್ಲೆ ಮಾಡಿದರು. ಲಾಕ್ಡೌನ್ ಸಮಯದಲ್ಲಿ ಪಾರ್ಟಿ ಮಾಡಿದರು ಎಂದು ದೂರಿದರು.
Recommended Video
ಈ ಸಂಬಂಧ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿದ್ದು, ತನಿಖೆ ಮಾಡಿ ಸೆಲೆಬ್ರಿಟಿಗಳ ವಿರುದ್ಧ ಕ್ರಮ ಜರುಗಿಸಿ ಎಂದು ಮನವಿ ಮಾಡಿದ್ದಾರೆ.