ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಚಿತ್ರರಂಗಕ್ಕೆ ಸಿಕ್ಕಿದ್ದೇನು?
ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು 2019-20ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ರೈತರಿಗೆ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಹಲವು ಯೋಜನೆಗಳನ್ನ ಘೋಷಿಸಿದ್ದಾರೆ.
ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಕನ್ನಡ ಚಿತ್ರರಂಗಕ್ಕೆ ಏನು ಸಿಗಲಿದೆ ಎಂಬ ಕುತೂಹಲ ಹೆಚ್ಚಿತ್ತು. ಯಾಕಂದ್ರೆ, ಸಿಎಂ ಕುಮಾರಸ್ವಾಮಿ ಅವರು ಮೂಲತಃ ನಿರ್ಮಾಪಕ ಹಾಗೂ ಚಿತ್ರರಂಗಕ್ಕೆ ಸಂಬಂಧಪಟ್ಟವರು. ಆದ್ರೆ, ಎಚ್ ಡಿ ಕೆ ಬಜೆಟ್ ನಲ್ಲಿ ಸಿನಿಮಾರಂಗಕ್ಕೆ ಯಾವ ದೊಡ್ಡ ಕೊಡುಗೆಯೂ ಸಿಕ್ಕಿಲ್ಲ. ಸಮಾಧಾನ ಅಂತಂದ್ರೆ ತುಳು, ಕೊಂಕಣಿ, ಕೊಡುವ ಚಲನಚಿತ್ರಗಳನ್ನ ಪ್ರೋತ್ಸಾಹಿಸಲು ವಿಶೇಷ ಕಾರ್ಯಕ್ರಮಗಳನ್ನ ರೂಪಿಸಲು ನಿರ್ಧರಿಸಿದ್ದಾರೆ.
ಕರ್ನಾಟಕ ಬಜೆಟ್ 2019: ಎಚ್.ಡಿ ಕುಮಾರಸ್ವಾಮಿಯವರ ಜನಪ್ರಿಯ ಯೋಜನೆಗಳ ಸಂಪೂರ್ಣ ವಿವರ..
- ತುಳು, ಕೊಂಕಣಿ, ಕೊಡುವ ಚಲನಚಿತ್ರಗಳನ್ನ ಪ್ರೋತ್ಸಾಹಿಸಲು ವಿಶೇಷ ಕಾರ್ಯಕ್ರಮಗಳನ್ನ ರೂಪಿಸಲಾಗುವುದು. ಈ ಉದ್ದೇಶದಿಂದ 19-20ನೇ ಸಾಲಿನಲ್ಲಿ 1 ಕೋಟಿ ರೂ ಅನುದಾನ ನೀಡಲು ನಿರ್ಧರಿಸಲಾಗಿದೆ ಎಂದು ಘೋಷಿಸಿದ್ದಾರೆ.

ಕುಮಾರಸ್ವಾಮಿ ಬಜೆಟ್: ಸಾಲಮನ್ನಾ ಯೋಜನೆಗೆ 12,650 ಕೋಟಿ
- ಇದರ ಜೊತೆಗೆ ದಿವಂಗತ ಹಾಸ್ಯನಟ ನರಸಿಂಹರಾಜು ಅವರ ಸ್ಮರಾಣರ್ಥ ತಿಪಟೂರಿನಲ್ಲಿ ಸ್ಮಾರಕ ಸಭಾ ಮಂದಿರ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.
ಇದಕ್ಕೂ ಮುಂಚೆ ಕಳೆದ ಜುಲೈನಲ್ಲಿ ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್ ನಲ್ಲಿ ಚಿತ್ರರಂಗಕ್ಕೆ ಹಲವು ಕೊಡುಗೆ ನೀಡಿದ್ದರು. ಅದು ಮುಂದುವರಿಯಲಿದೆ. ಈ ಸಲ ಅಂತಹದ್ದೇನು ವಿಶೇಷವಿಲ್ಲ.


Click it and Unblock the Notifications











