Just In
- 10 hrs ago
ನ್ಯಾಯಾಲಯಕ್ಕೆ ಹಾಜರಾದ ರಕ್ಷಿತ್ ಶೆಟ್ಟಿ, ಇದು ಸುಲಿಗೆ ತಂತ್ರ ಎಂದ ಸಿಂಪಲ್ ಸ್ಟಾರ್
- 11 hrs ago
50 ಲಕ್ಷ ವಂಚನೆ: ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂಜನಾ ಗಲ್ರಾನಿ ಸಹೋದರಿ
- 11 hrs ago
ರಾಜ್ಕುಮಾರ್ ಪುಣ್ಯಸ್ಮರಣೆ: ಅಣ್ಣಾವ್ರನ್ನು ದರ್ಶನ್ ಸ್ಮರಿಸಿದ್ದು ಹೀಗೆ
- 13 hrs ago
ಬಾಫ್ಟಾ 2021: ರಿಷಿ ಕಪೂರ್, ಇರ್ಫಾನ್ಗೆ ಗೌರವ, 'ವೈಟ್ ಟೈಗರ್'ಗೆ ನಿರಾಸೆ
Don't Miss!
- Sports
ರಾಜಸ್ಥಾನ್ ವಿರುದ್ಧ ಗೆದ್ದು ಮುಂಬೈ ಹಿಂದಿಕ್ಕಿದ ಪಂಜಾಬ್ ಕಿಂಗ್ಸ್
- News
ಮಹಾರಾಷ್ಟ್ರ; ಮುಂಬೈನಲ್ಲೂ ಹೆಚ್ಚಿದ ಹೊಸ ಕೊರೊನಾ ಪ್ರಕರಣ
- Finance
ಏಪ್ರಿಲ್ 13ರ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ
- Automobiles
ಎಲೆಕ್ಟ್ರಿಕ್ ವಾಹನ ಉತ್ಪಾದನೆ ಮೇಲೆ ಒಟ್ಟು ರೂ.12 ಸಾವಿರ ಕೋಟಿ ಹೂಡಿಕೆ ಮಾಡಿದ ಮಹೀಂದ್ರಾ
- Lifestyle
ಮಂಗಳವಾರದ ದಿನ ಭವಿಷ್ಯ: ಯುಗಾದಿಯಂದು ಹೇಗಿದೆ ನಿಮ್ಮ ರಾಶಿಫಲ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಕೆ ಮಂಜು ಯಾರು ಗೊತ್ತಿಲ್ಲ, ಕೆಲವರಿಗೆ ನಾನು ಖಳನಾಯಕ ಆಗಿದ್ದೇನೆ' - ಸಚಿವ ಸುಧಾಕರ್
ಚಿತ್ರಮಂದಿರಗಳಲ್ಲಿ ಮತ್ತೆ 50 ಪರ್ಸೆಂಟ್ ಆದೇಶ ಹೊರಡಿಸಿದ್ದಕ್ಕೆ ಚಿತ್ರರಂಗದ ಹಲವರು ವಿರೋಧ ವ್ಯಕ್ತಪಡಿಸಿದ್ದರು. ನಿರ್ಮಾಪಕ ಕೆ ಮಂಜು ಮಾತನಾಡಿ ''ಸಚಿವ ಸುಧಾಕರ್ ಅವರಿಗೆ ಖಾತೆ ಬದಲಾಯಿಸಿ, ಬೇರೆ ಯಾರಿಗಾದರೂ ಖಾತೆಯ ಜವಾಬ್ದಾರಿ ಕೊಡಿ'' ಎಂದು ಆಗ್ರಹಿಸಿದ್ದರು.
ಕೆ ಮಂಜು ಅವರ ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ ಸುಧಾಕರ್ ''ಕೆ ಮಂಜು ಯಾರು ಎಂದೇ ಗೊತ್ತಿಲ್ಲ, ಕೆಲವರಿಗೆ ನಾನು ಖಳನಾಯಕ ಆಗಿ ಕಾಣುತ್ತಿದ್ದೇನೆ'' ಎಂದಿದ್ದಾರೆ
ಚಿತ್ರರಂಗದ ಮನವಿಗೆ ಮನ್ನಣೆ: ಚಿತ್ರಮಂದಿರದ ಮೇಲೆ ಹೇರಿದ್ದ ನಿರ್ಬಂಧ ಸಡಿಲಿಕೆ
''ಕೆ ಮಂಜು ಯಾರು ಎನ್ನುವುದು ನನಗೆ ಗೊತ್ತಿಲ್ಲ. ಕೆಲವರ ಪಾಲಿಗೆ ನಾನು ಖಳನಾಯಕನಾಗಿ ಕಾಣಿಸುತ್ತಿದ್ದೇನೆ. ಆದರೆ, ಬಹಳಷ್ಟು ಜನರಿಗೆ ಒಬ್ಬ ನಾನು ಆರೋಗ್ಯ ಸಚಿವನಾಗಿ ಏನು ಮಾಡಬೇಕು ಅದನ್ನು ಅಂತಃಕರಣದಿಂದ ಮಾಡುತ್ತಿದ್ದೇನೆ. ಹಾಗಾಗಿ, ಇಂತಹದಕ್ಕೆಲ್ಲಾ ನಾನು ತಲೆಕೆಡಿಸಿಕೊಳ್ಳುವುದಿಲ್ಲ'' ಎಂದು ಹೇಳಿದ್ದಾರೆ.
ಪ್ರತಿ ಬಾರಿ ಮಾತನಾಡಬೇಕಾದರೂ 'ಜನರ ಆರೋಗ್ಯ ಮುಖ್ಯ' ಎಂದು ಒತ್ತಿ ಒತ್ತಿ ಹೇಳುತ್ತಿದ್ದ ಸುಧಾಕರ್ ಅವರು, ಥಿಯೇಟರ್ಗಳ ವಿಚಾರದಲ್ಲಿ ಹೆಚ್ಚುವರಿಯಾಗಿ ಕಾಲಾವಕಾಶ ಕೊಟ್ಟಿದ್ದೇಕೆ ಎಂಬ ಪ್ರಶ್ನೆಯನ್ನು ಮಾಧ್ಯಮದವರು ಕೇಳಿದರು.
ಇದಕ್ಕೆ ಉತ್ತರಿಸಿದ ಸಚಿವ ಸುಧಾಕರ್ ''ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಆಗಿರುತ್ತದೆ, ಹಣ ಹಿಂತಿರುಗಿಸಲು ಸಾಧ್ಯವಿಲ್ಲ ಎಂಬ ಬೇಡಿಕೆಯನ್ನು ಸಿಎಂ ಮುಂದೆ ಇಟ್ಟಿದ್ದರು. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಈ ನಿರ್ಧಾರ ಪ್ರಕಟಿಸಿದ್ದಾರೆ'' ಎಂದು ಸ್ಪಷ್ಟನೆ ನೀಡಿದ್ದಾರೆ.
ಇದಕ್ಕೂ ಮುಂಚೆ ಮಾಧ್ಯಮಗಳ ಜೊತೆ ಮಾತನಾಡಿದ್ದ ನಿರ್ಮಾಪಕ ಕೆ ಮಂಜು ''60-70 ಕೋಟಿ ಬಂಡವಾಳ ಹಾಕಿ ಸಿನಿಮಾ ಮಾಡಿರ್ತಾರೆ. 1ನೇ ತಾರೀಖು ಸಿನಿಮಾ ರಿಲೀಸ್ ಆಗುತ್ತೆ, 2ನೇ ತಾರೀಖು 50 ಪರ್ಸೆಂಟ್ ಅಂದ್ರೆ ಹೇಗೆ? ಏಕಾ ಏಕಿ ಈ ನಿರ್ಧಾರ ಏಕೆ? ಪದೇ ಪದೇ ಚಿತ್ರರಂಗ ಮತ್ತು ಜಿಮ್ ಟಾರ್ಗೆಟ್ ಮಾಡುವುದು ಏಕೆ?'' ಎಂದು ಪ್ರಶ್ನಿಸಿದ್ದರು.