Don't Miss!
- News Lok Sabha Election 2024: ಬೆಂಗಳೂರು ಉತ್ತರದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಶೋಭಾ ಎದುರು ‘ಕೈ’ ಅಸ್ತ್ರ ವರ್ಕೌಟ್ ಆಗುತ್ತಾ?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಿಧತೆಯನ್ನು ಕೊಂದರೆ ಏಕತೆ ಎಲ್ಲಿ? ಹಿಂದಿ ಹೇರಿಕೆ ಬಗ್ಗೆ 'ಹೆಬ್ಬುಲಿ' ಕೃಷ್ಣ ಕಿಡಿ
ಹಿಂದಿ ಹೇರಿಕೆಗೆ ಕರ್ನಾಟಕದಲ್ಲಿ ವಿರೋಧ ಹೆಚ್ಚಾಗುತ್ತಿದೆ. ತ್ರಿಭಾಷಾ ಸೂತ್ರವನ್ನು ಖಂಡಿಸುತ್ತಿರುವ ಕನ್ನಡಿಗರು ದ್ವಿಭಾಷಾ ನೀತಿ ಜಾರಿಗೆ ಒತ್ತಾಯಿಸುತ್ತಿದ್ದಾರೆ.
Recommended Video
ಈ ಅಭಿಯಾನಕ್ಕೆ ಕನ್ನಡ ಚಿತ್ರರಂಗದಿಂದಲೂ ಹಲವರು ಬೆಂಬಲ ನೀಡಿದ್ದಾರೆ. ನಿಖಿಲ್ ಕುಮಾರ್, ಚೇತನ್, ವಸಿಷ್ಠ ಸಿಂಹ, ಸಂತೋಷ್ ಆನಂದ್ ರಾಮ್, ಸಿಂಪಲ್ ಸುನಿ ದ್ವಿಭಾಷಾ ನೀತಿ ಪರ ನಿಂತಿದ್ದಾರೆ.
'ಸ್ಪಷ್ಟ ನಿಲುವು ಬೇಕು': ಪುನೀತ್ ಮಾಡಿದ್ದ ಟ್ವೀಟ್ ಬಗ್ಗೆ ನೆಟ್ಟಿಗರು ಅತೃಪ್ತಿ
ಇದೀಗ, ಸ್ಯಾಂಡಲ್ವುಡ್ನ ಮತ್ತೊಬ್ಬ ಸ್ಟಾರ್ ನಿರ್ದೇಶಕ ಹೆಬ್ಬುಲಿ ಖ್ಯಾತಿಯ ಕೃಷ್ಣ ಹಿಂದಿ ಹೇರಿಕೆಯನ್ನು ಖಂಡಿಸಿದ್ದಾರೆ. ವಿವಿಧತೆಯಲ್ಲಿ ಏಕತೆ ಎನ್ನುವ ದೇಶದಲ್ಲಿ ವಿವಿಧತೆಯನ್ನು ಕೊಂದರೆ ಏಕತೆ ಎಲ್ಲಿ? ಎಂದು ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕೃಷ್ಣ 'ವಿವಿಧತೆಯನ್ನು ಕೊಂದರೆ ಏಕತೆ ಎಲ್ಲಿ. ಕಡ್ಡಾಯವಾಗಿ ಮಾತೃಭಾಷಾ ಶಿಕ್ಷಣಕ್ಕೆ ಮೊದಲ ಆದ್ಯತೆ, ಅನ್ಯ ರಾಜ್ಯ ಹಾಗೂ ದೇಶಗಳೊಡನೆ ಸಂಪರ್ಕ ಭಾಷೆಯಾಗಿ ಆಂಗ್ಲ ಭಾಷೆಯನ್ನು ಸ್ವೀಕರಿಸಲಾಗಿದೆ. ಮತ್ತೊಂದು ಸಂಪರ್ಕ ಭಾಷೆಯಾಗಿ ಹಿಂದಿಯ ಅವಶ್ಯಕತೆಯಿಲ್ಲ, ಅನಗತ್ಯವಾಗಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಹೇರಿಕೆಯ ದಬ್ಬಾಳಿಕೆಯನ್ನು ವಿರೋಧಿಸುತ್ತೇನೆ' ಎಂದಿದ್ದಾರೆ.
ಅಂದು ಕನ್ನಡ ಭಾಷೆಗೆ ಅನ್ಯಾಯವಾಗುತ್ತಿದೆ ಎಂದಾಗ ಇಡೀ ಚಿತ್ರರಂಗ ಒಗ್ಗಟ್ಟಾಗಿ ನಿಂತು ಗೋಗಾಕ್ ಚಳವಳಿಯಲ್ಲಿ ಭಾಗಿಯಾಗಿತ್ತು. ಈಗ ಮತ್ತೆ ಹಿಂದಿ ಹೇರಿಕೆ ವಿಚಾರದಲ್ಲಿ ಕನ್ನಡಿಗರ ಸ್ವಾಭಿಮಾನವನ್ನು ಪ್ರಶ್ನಿಸಲಾಗುತ್ತಿದೆ. ಈಗಲೂ ಸಿನಿಮಾರಂಗ ಕನ್ನಡಿಗರ ಪರ ನಿಲ್ಲಬೇಕೆಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗ್ತಿದೆ.