Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹೆಬ್ಬುಲಿ' ನಿರ್ಮಾಪಕನ ಎರಡನೇ ಸಿನಿಮಾ ಟೈಟಲ್ ನೋಡಿ
ಕಿಚ್ಚ ಸುದೀಪ್ ಅಭಿನಯದ 'ಹೆಬ್ಬುಲಿ' ಚಿತ್ರವನ್ನ ನಿರ್ಮಾಣ ಮಾಡಿ ಯಶಸ್ಸು ಕಂಡಿದ್ದ ನಿರ್ಮಾಪಕ ಉಮಾಪತಿ, ಈಗ ತಮ್ಮ ಎರಡನೇ ಚಿತ್ರವನ್ನ ಘೋಷಣೆ ಮಾಡಿದ್ದಾರೆ. ಈ ಮೊದಲೇ ಸುದ್ದಿಯಾದಂತೆ ಉಮಾಪತಿ ಅವರ ಎರಡನೇ ಚಿತ್ರವನ್ನ 'ರಾಮಾ ರಾಮಾ ರೇ' ಖ್ಯಾತಿಯ ಸತ್ಯ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದಾರೆ.
ಇದೀಗ, ಎರಡು ಸೂಪರ್ ಹಿಟ್ ಜೋಡಿಗಳ ಹೊಸ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು, ಚಿತ್ರಕ್ಕೆ 'ಒಂದಲ್ಲಾ ಎರಡಲ್ಲಾ' ಎಂದು ಟೈಟಲ್ ಇಡಲಾಗಿದೆ. ನಿರ್ಮಾಣದ ಜೊತೆಗೆ ರಾಜಕಾರಣದಲ್ಲಿ ತೊಡಗಿಕೊಂಡಿರುವ ಉಮಾಪತಿ ಶ್ರೀನಿವಾಸ, ಬೊಮ್ಮನಹಳ್ಳಿ ವಿಧಾನಸಭೆಯ ಕಾಂಗ್ರೆಸ್ ನಾಯಕರಾಗಿದ್ದಾರೆ. ಒಂದು ಕಡೆ ರಾಜಕೀಯ ಮತ್ತೊಂದುಕಡೆ ಸಿನಿಮಾರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ.
ದರ್ಶನ್ ಗೆ ಆಕ್ಷನ್ ಕಟ್ ಹೇಳಲು ಜೋಗಿ ಪ್ರೇಮ್ ಗೆ ದಾಖಲೆಯ ಸಂಭಾವನೆ
ಮೊದಲ ಸಿನಿಮಾ ಬಹುದೊಡ್ಡ ಬಜೆಟ್ ನಲ್ಲಿ ನಿರ್ಮಾಣ ಮಾಡಿದ್ದ ಉಮಾಪತಿ ಅವರು ಕಮರ್ಷಿಯಲ್ ಸಿನಿಮಾ ಮಾಡಿದ್ದರು. ಆದ್ರೆ, ಎರಡನೇ ಬಾರಿ ಪ್ರಯೋಗಾತ್ಮಕ ನಿರ್ದೇಶಕನ ಜೊತೆ ಕೈಜೋಡಿಸಿದ್ದು, ಈ ಸಿನಿಮಾ ಹೇಗಿರಲಿದೆ ಎಂಬ ಕುತೂಹಲ ಹೆಚ್ಚಿದೆ.
ನಿರ್ದೇಶಕ ಪ್ರೇಮ್ ಗಾಗಿ ತನ್ನ ಹಳೆ ನಿಯಮ ಮುರಿದ ದಾಸ ದರ್ಶನ್!
ಸದ್ಯ, ಕಲಾವಿದರನ್ನ ಆಯ್ಕೆ ಮಾಡಿಕೊಂಡಿರುವ ಚಿತ್ರತಂಡ ನಾಯಕ ಹಾಗೂ ನಾಯಕಿ ಯಾರು ಎಂದು ಬಹಿರಂಗಪಡಿಸಿಲ್ಲ. 'ರಾಮಾ ರಾಮಾ ರೇ' ಎಂಬ ಸೂಪರ್ ಹಿಟ್ ಸಿನಿಮಾ ಮಾಡಿದ್ದ ನಿರ್ದೇಶಕ ಸತ್ಯ ಪ್ರಕಾಶ್, ಎರಡನೇ ಸಿನಿಮಾದಲ್ಲಿ ಯಾವ ರೀತಿ ಕತೆ ಮಾಡಿದ್ದಾರೆ ಎಂಬುದು ಕೂಡ ಅಷ್ಟೇ ನಿರೀಕ್ಷೆ ಹೆಚ್ಚಿಸಿದೆ.