'ಹೆಬ್ಬುಲಿ' ನಿರ್ಮಾಪಕನ ಎರಡನೇ ಸಿನಿಮಾ ಟೈಟಲ್ ನೋಡಿ
ಕಿಚ್ಚ ಸುದೀಪ್ ಅಭಿನಯದ 'ಹೆಬ್ಬುಲಿ' ಚಿತ್ರವನ್ನ ನಿರ್ಮಾಣ ಮಾಡಿ ಯಶಸ್ಸು ಕಂಡಿದ್ದ ನಿರ್ಮಾಪಕ ಉಮಾಪತಿ, ಈಗ ತಮ್ಮ ಎರಡನೇ ಚಿತ್ರವನ್ನ ಘೋಷಣೆ ಮಾಡಿದ್ದಾರೆ. ಈ ಮೊದಲೇ ಸುದ್ದಿಯಾದಂತೆ ಉಮಾಪತಿ ಅವರ ಎರಡನೇ ಚಿತ್ರವನ್ನ 'ರಾಮಾ ರಾಮಾ ರೇ' ಖ್ಯಾತಿಯ ಸತ್ಯ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದಾರೆ.
ಇದೀಗ, ಎರಡು ಸೂಪರ್ ಹಿಟ್ ಜೋಡಿಗಳ ಹೊಸ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು, ಚಿತ್ರಕ್ಕೆ 'ಒಂದಲ್ಲಾ ಎರಡಲ್ಲಾ' ಎಂದು ಟೈಟಲ್ ಇಡಲಾಗಿದೆ. ನಿರ್ಮಾಣದ ಜೊತೆಗೆ ರಾಜಕಾರಣದಲ್ಲಿ ತೊಡಗಿಕೊಂಡಿರುವ ಉಮಾಪತಿ ಶ್ರೀನಿವಾಸ, ಬೊಮ್ಮನಹಳ್ಳಿ ವಿಧಾನಸಭೆಯ ಕಾಂಗ್ರೆಸ್ ನಾಯಕರಾಗಿದ್ದಾರೆ. ಒಂದು ಕಡೆ ರಾಜಕೀಯ ಮತ್ತೊಂದುಕಡೆ ಸಿನಿಮಾರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ.

ಮೊದಲ ಸಿನಿಮಾ ಬಹುದೊಡ್ಡ ಬಜೆಟ್ ನಲ್ಲಿ ನಿರ್ಮಾಣ ಮಾಡಿದ್ದ ಉಮಾಪತಿ ಅವರು ಕಮರ್ಷಿಯಲ್ ಸಿನಿಮಾ ಮಾಡಿದ್ದರು. ಆದ್ರೆ, ಎರಡನೇ ಬಾರಿ ಪ್ರಯೋಗಾತ್ಮಕ ನಿರ್ದೇಶಕನ ಜೊತೆ ಕೈಜೋಡಿಸಿದ್ದು, ಈ ಸಿನಿಮಾ ಹೇಗಿರಲಿದೆ ಎಂಬ ಕುತೂಹಲ ಹೆಚ್ಚಿದೆ.
ಸದ್ಯ, ಕಲಾವಿದರನ್ನ ಆಯ್ಕೆ ಮಾಡಿಕೊಂಡಿರುವ ಚಿತ್ರತಂಡ ನಾಯಕ ಹಾಗೂ ನಾಯಕಿ ಯಾರು ಎಂದು ಬಹಿರಂಗಪಡಿಸಿಲ್ಲ. 'ರಾಮಾ ರಾಮಾ ರೇ' ಎಂಬ ಸೂಪರ್ ಹಿಟ್ ಸಿನಿಮಾ ಮಾಡಿದ್ದ ನಿರ್ದೇಶಕ ಸತ್ಯ ಪ್ರಕಾಶ್, ಎರಡನೇ ಸಿನಿಮಾದಲ್ಲಿ ಯಾವ ರೀತಿ ಕತೆ ಮಾಡಿದ್ದಾರೆ ಎಂಬುದು ಕೂಡ ಅಷ್ಟೇ ನಿರೀಕ್ಷೆ ಹೆಚ್ಚಿಸಿದೆ.


Click it and Unblock the Notifications











