Don't Miss!
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Automobiles Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೇಮಶ್ರೀ ನಿಗೂಢ ಸಾವು ಬೂದಿಮುಚ್ಚಿದ ಕೆಂಡ
ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಕಳುಹಿಸಿರುವ ಮರಣೋತ್ತರ ಪರೀಕ್ಷೆಯಲ್ಲೂ ಹೇಮಶ್ರೀ ಸಾವಿಗೆ ಸ್ಪಷ್ಟವಾದ ಉತ್ತರ ಸಿಕ್ಕಿಲ್ಲ. ಏತನ್ಮಧ್ಯೆ ಬರಬೇಕಾಗಿದ್ದ ವಿಧಿ ವಿಜ್ಞಾನ ಪ್ರಯೋಗ ಇಲಾಖೆಯ ವರದಿ ಇನ್ನೂ ಪೊಲೀಸರ ಕೈಸೇರಿಲ್ಲ. ಅದು ಬರುವುದು ಮತ್ತಷ್ಟು ತಡವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಆ ವರದಿ ಪೊಲೀಸರ ಕೈಸೇರಿದರೆ ಈ ಹೇಮಶ್ರೀ ಸಾವಿನ ಹಿಂದಿನ ರಹಸ್ಯ ಬಯಲಾಗಬಹುದು. ಈಗಾಗಲೆ ಹೇಮಶ್ರೀ ಪತಿ ಸುರೇಂದ್ರ ಬಾಬು, ಆಕೆಯ ಸಂಬಂಧಿಕರು, ಸ್ನೇಹಿತರಿಂದ ಹಲವು ಮಾಹಿತಿ ಲಭ್ಯವಾಗಿದೆ. ಹೇಮಶ್ರೀ ಸಾವಿಗೆ ನಿಖರವಾದ ಕಾರಣವೂ ಗೊತ್ತಾಗಿದೆಯಂತೆ.
ಆದರೆ ವಿಧಿ ವಿಜ್ಞಾನ ಪ್ರಯೋಗಾಲದ ವರದಿ ಬಂದ ಬಳಿಕವಷ್ಟೇ ಪೊಲೀಸರು ಸಾವಿನ ರಹಸ್ಯವನ್ನು ಬಹಿರಂಗಪಡಿಸಲಿದ್ದಾರೆ ಎನ್ನುತ್ತವೆ ಮೂಲಗಳು. ಈ ಪ್ರಕರಣದ ಪ್ರಮುಖ ಸಾಕ್ಷಿ ಸುರೇಂದ್ರ ಬಾಬು ಅವರ ಕಾರಿನ ಚಾಲಕ ಸತೀಶ್ ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ.
ಈ ಮಧ್ಯೆ ಹೇಮಶ್ರೀ ಗೆಳೆಯ ಎನ್ನಲಾಗಿರುವ ಮಂಜುನಾಥನನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇದಿಷ್ಟೇ ಅಲ್ಲದೆ ಅನಂತಪುರಂ ಫಾರಂ ಹೌಸ್ ಮಾಲೀಕ ಮುರಳಿ ಹಾಗೂ ಸುರೇಂದ್ರ ಬಾಬು ಸ್ನೇಹಿತ ಕೃಷ್ಣ ಎಂಬುವವರಿಂದಲೂ ಪೊಲೀಸರು ಸಾಕಷ್ಟು ಮಾಹಿತಿ ಕಲೆ ಹಾಕಿದ್ದಾರೆ. (ಏಜೆನ್ಸೀಸ್)