Don't Miss!
- News Women voters: ರಾಜ್ಯದ 17 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳೆಯರದ್ದೇ ಪಾರುಪತ್ಯ!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಗೆಹರಿಯಿತು ವಿಷ್ಣು ಸ್ಮಾರಕ ಸಮಸ್ಯೆ: ಗೊತ್ತು ಪಡಿಸಿದ ಜಾಗದಲ್ಲೇ ಸ್ಮಾರಕ ನಿರ್ಮಾಣ.!
Recommended Video
ಸಾಹಸಸಿಂಹ ಡಾ.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಅಡ್ಡಿಯಾಗಿದ್ದ ಸಮಸ್ಯೆ ನಿವಾರಣೆಯಾಗಿದ್ದು, ಈಗ ಸ್ಮಾರಕ ನಿರ್ಮಾಣ ಕೆಲಸಕ್ಕೆ ಚಾಲನೆ ಸಿಗಲಿದೆ. ಸುಮಾರು 10 ವರ್ಷದಿಂದ ವಿಷ್ಣು ಸ್ಮಾರಕಕ್ಕಾಗಿ ಹೋರಾಟ ಮಾಡಿದ್ದ ಅಭಿಮಾನಿಗಳು, ಕುಟುಂಬದವರು ಈಗ ಖುಷಿಯಾಗಿದ್ದಾರೆ.
ವಿಷ್ಣು ಸ್ಮಾರಕ ಅಂದಾಕ್ಷಣ ಬೆಂಗಳೂರಿನಲ್ಲಿರುವ ಅಭಿಮಾನ್ ಸ್ಟುಡಿಯೋ ಎಂದುಕೊಳ್ಳಬೇಡಿ. ಸಮಸ್ಯೆ ಬಗೆಹರಿದಿರುವುದು ಮೈಸೂರಿನಲ್ಲಿ. ಕುಟುಂಬದ ಆಸೆಯಂತೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ಸರ್ಕಾರ ಜಾಗ ನೀಡಿತ್ತು. ಆ ಜಾಗವೂ ವಿವಾದಕ್ಕೆ ಗುರಿಯಾಗಿ ಅಲ್ಲಿಯೂ ಸ್ಮಾರಕ ನಿರ್ಮಾಣಕ್ಕೆ ಅಡ್ಡಿಯಾಗಿತ್ತು. ಇದೀಗ, ಆ ಸಮಸ್ಯೆ ಬಗಹರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಡ್ಯ ಪ್ರಚಾರದಲ್ಲಿ 'ವಿಷ್ಣು ಸ್ಮಾರಕ' ವಿಷ್ಯ ಬೇಕಿತ್ತಾ? ಅಭಿಮಾನಿಗಳು ಗರಂ
ಹೌದು, ಕೆಳ ನ್ಯಾಯಾಲಯ ಸ್ಮಾರಕ ನಿರ್ಮಾಣದ ಭೂ ಒಡೆತನಕ್ಕೆ ಸಂಬಂಧಿಸಿದಂತೆ ನೀಡಿದ್ದ ತಾತ್ಕಾಲಿಕ ಪ್ರತಿಬಂಧಕಾಜ್ಞೆ (ಸಿವಿಲ್ ಇಂಜೆಕ್ಷನ್) ಯನ್ನು ತೆರವುಗೊಳಿಸಿದ ಹೈಕೋರ್ಟ್ ಈಗ ಸ್ಮಾರಕ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಅಷ್ಟಕ್ಕೂ, ಏನಿದು ಸ್ಮಾರಕ ಸಮಸ್ಯೆ? ಮುಂದೆ ಓದಿ.....
ಏನಿದು ಮೈಸೂರಿನ ವಿವಾದ
ಮೈಸೂರು ತಾಲೂಕಿನ ಉದ್ಬೂರು ಹತ್ತಿರವಿರುವ ಮಾನಂದವಾಡಿ ಮುಖ್ಯ ರಸ್ತೆಗೆ ಹೊಂದಿಕೊಂಡಂತೆ ಇರುವ ಕಸಬಾ ಹೋಬಳಿ ಹಾಲಾಳು ಗ್ರಾಮದ ಸರ್ವೆ ನಂ.8ರಲ್ಲಿ 6 ಎಕರೆ 5 ಗುಂಟೆ ಸರ್ಕಾರಿ ಭೂಮಿಯಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ 5 ಎಕರೆ ಭೂಮಿಯನ್ನು ಜಿಲ್ಲಾಡಳಿತ ಮಂಜೂರು ಮಾಡಿತ್ತು. ಆದರೆ ಆ ಭೂಮಿ ನಮಗೆ ಮಂಜೂರಾಗಿದ್ದು, ಅದರ ಒಡೆತನ ನಮ್ಮದು ಎಂದಿದ್ದರು. ಹಾಗಾಗಿ, ಇಲ್ಲಿ ಸ್ಮಾರಕ ನಿರ್ಮಾಣ ಮಾಡಬಾರದು ಎಂದು ಕೋರ್ಟ್ ನಲ್ಲಿ ಇಂಜಕ್ಷನ್ ಆರ್ಡರ್ ತಂದಿದ್ದರು.
ಡಾ.ವಿಷ್ಣು ಸ್ಮಾರಕ ವಿವಾದ ಬಗೆಹರಿಸಲು ಸುದೀಪ್ ನೀಡಿದ 4 ಸಲಹೆಗಳು
ಹೈಕೋರ್ಟ್ ಹಸಿರು ನಿಶಾನೆ
ವಿಷ್ಣುವರ್ಧನ್ ಸ್ಮಾರಕ ಸಂಬಂಧ ಮೈಸೂರಿನ ಸಿವಿಲ್ ಕೋರ್ಟ್ ಸ್ಮಾರಕ ನಿರ್ಮಾಣಕ್ಕೆ ತಡೆಯೊಡ್ಡಿತ್ತು. ಇದನ್ನು ಪ್ರಶ್ನಿಸಿದ ರಾಜ್ಯ ಸರ್ಕಾರ ಹೈಕೋರ್ಟ್ ನಲ್ಲಿ ಅರ್ಜಿಸಲ್ಲಿಸಿತ್ತು. ಇದೀಗ ಹೈಕೋರ್ಟ್ ಆದೇಶದಂತೆ ವಿಷ್ಣು ಸ್ಮಾರಕಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಅಂತಿಮ ವಿಚಾರಣೆ ಮಾತ್ರ ಬಾಕಿ ಇದೆ.
ಗೊತ್ತು ಪಡಿಸಿದ ಜಾಗದಲ್ಲೇ ಸ್ಮಾರಕ
ಕೋರ್ಟ್ ಸೂಚನೆ ಮೆರೆಗೆ ಈಗ ಈ ಮೊದಲು ಮೈಸೂರು ಜಿಲ್ಲಾಡಳಿತ ಗೊತ್ತು ಪಡಿಸಿದ್ದ ಸ್ಥಳದಲ್ಲೇ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಬಹುದು. ಕುಟುಂಬದ ಆಸೆಯಂತೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣವಾಗಲಿದ್ದು, ಈ ಕೆಲಸಕ್ಕೆ ಅತಿ ಶೀಘ್ರದಲ್ಲಿ ಚಾಲನೆ ದೊರೆಯಲಿದೆ.
ಅಭಿಮಾನಿ ಒತ್ತಾಯವೇ ಬೇರೆ ಇದೆ
ಇತ್ತ ವಿಷ್ಣುವರ್ಧನ್ ಅವರು ಲೀನವಾಗಿರುವ ಅಭಿಮಾನ್ ಸ್ಟುಡಿಯೋದಲ್ಲಿ ಸ್ಮಾರಕ ಆಗಬೇಕೆಂಬುದು ಅಭಿಮಾನಿಗಳ ಕನಸಾಗಿದೆ. ಆದರೆ, ಇಲ್ಲಿಯೂ ಕೂಡ ವಿವಾದ ಕೋರ್ಟ್ ಅಂಗಳದಲ್ಲಿದೆ. ಈ ಬಗ್ಗೆ ವಿಷ್ಣು ಸೇನಾ ಸಮಿತಿ ನೇತೃತ್ವದಲ್ಲಿ ಸಾಕಷ್ಟು ಪ್ರತಿಭಟನೆಗಳು ಕೂಡ ನಡೆಸಿದೆ. ಆದರೆ ಇದುವರೆಗೂ ಬೆಳವಣಿಗೆ ಕಂಡುಬಂದಿಲ್ಲ.