Don't Miss!
- News Tirumala Property: ತಿರುಪತಿ ತಿರುಮಲ ಶ್ರೀವಾರಿಯ 2023-24ರ ಆಸ್ತಿ ವಿವರ ಇಲ್ಲಿದೆ..
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಂಕರ್ ಆದ RGV, ವಿದೇಶದಲ್ಲಿ 'ಯಜಮಾನ' ಸೇರಿದಂತೆ ಇಂದಿನ 5 ಸುದ್ದಿಗಳು
ಕನ್ನಡ ಚಿತ್ರರಂಗದಲ್ಲಿ ಪ್ರತಿದಿನ ಸಿನಿಮಾಗಳ ಕೆಲಸಗಳು ನಡೆಯುತ್ತಲೇ ಇರುತ್ತದೆ. ಯಾವುದೋ ಸಿನಿಮಾದ ಮುಹೂರ್ತ, ಇನ್ಯಾವುದೋ ಸಿನಿಮಾದ ಬಿಡುಗಡೆ, ಮತ್ತೊಂದು ಕಡೆ ವಿವಾದ, ಇನ್ನೊಂದು ಕಡೆ ವಿವಾಹ ಹೀಗೆ ಒಂದೇ ದಿನ ಸಾಕಷ್ಟು ಬೆಳವಣಿಗೆಗಳು ಆಗುತ್ತದೆ.
ಈ ದಿನ 'ನಟ ಸಾರ್ವಭೌಮ' ಸಿನಿಮಾದ ವಿಶೇಷವಾಗಿ ಪವನ್ ಒಡೆಯರ್ ಒಂದು ಫೋಟೋ ಹಂಚಿಕೊಂಡಿದ್ದಾರೆ. ವಿದೇಶದಲ್ಲಿ 'ಯಜಮಾನ' ಚಿತ್ರೀಕರಣ ನಡೆಯುತ್ತಿದೆ. ಅಣ್ಣನಿಗೆ ಶ್ರೀ ಮುರಳಿ ಶುಭಾಶಯ ತಿಳಿಸಿದ್ದಾರೆ. 'ಕವಚ' ಚಿತ್ರದ ಸೆನ್ಸಾರ್ ಆಗಿದೆ, ಹಾಗೂ 'ಭೈರವ ಗೀತಾ' ಚಿತ್ರದ ಬಗ್ಗೆ ಮತ್ತೊಂದು ಕುತೂಹಲಕಾರಿ ವಿಷಯವನ್ನು ವರ್ಮ ಹೇಳಿದ್ದಾರೆ.
ವಿಮರ್ಶೆ: 'ಚಿನ್ನಾರಿಮುತ್ತ'ನಿಗೆ ಅದೃಷ್ಟ ತಂದು ಕೊಟ್ಟ 'ಕಿಸ್ಮತ್'
ಅಂದಹಾಗೆ, ಕನ್ನಡ ಚಿತ್ರರಂಗದ ಈ ದಿನದ ಸಣ್ಣ ಸಣ್ಣ ಸುದ್ದಿಗಳ ಸಂಗ್ರಹ ಮುಂದಿದೆ ಓದಿ...
|
ಸ್ವಿಡನ್ ನಲ್ಲಿ 'ಯಜಮಾನ'
ದರ್ಶನ್ ಅಭಿನಯದ 'ಯಜಮಾನ' ಸಿನಿಮಾದ ಚಿತ್ರೀಕರಣ ಸದ್ಯ ಸ್ವಿಡನ್ ನಲ್ಲಿ ನಡೆಯುತ್ತಿದೆ. ಚಿತ್ರೀಕರಣದ ನಡುವೆ ಅಲ್ಲಿನ ಫೋಟೋವನ್ನು ನಿರ್ಮಾಪಕಿ ಶೈಲಜಾ ನಾಗ್ ಹಂಚಿಕೊಂಡಿದ್ದಾರೆ. ಸಖತ್ ಚಳಿಯಲ್ಲಿ ದರ್ಶನ್ ಹಾಗೂ ನಟಿ ರಶ್ಮಿಕಾ ಮಂದಣ್ಣ ಶೂಟಿಂಗ್ ಮಾಡುತ್ತಿದ್ದಾರೆ. ಪಿ ಕುಮಾರ್ ಈ ಸಿನಿಮಾದ ನಿರ್ದೇಶಕನಾಗಿದ್ದಾರೆ.
|
'ನಟ ಸಾರ್ವಭೌಮ'ನ ನೆನಪು
ಪುನೀತ್ 'ನಟ ಸಾರ್ವಭೌಮ' ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ. ಇದೇ ಸಮಯದಲ್ಲಿ ನಿರ್ದೇಶಕ ಪವನ್ ಒಡೆಯರ್ ಒಂದು ಫೋಟೋವನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಣ್ಣವ್ರಿಗೆ ಗುಬ್ಬಿ ವೀರಣ್ಣನವರು 'ನಟ ಸಾರ್ವಭೌಮ' ಬಿರುದು ನೀಡಿ ಗೌರವಿಸುತ್ತಿರುವ ಅಪರೂಪದ ಫೋಟೋ ಇದಾಗಿದೆ. ರಾಜ್ ಬಿರುದೇ ಪುನೀತ್ ಚಿತ್ರದ ಹೆಸರಾಗಿದೆ.
|
ಶ್ರೀ ಮುರಳಿ ಶುಭಾಶಯ
ನಟ ವಿಜಯ್ ರಾಘವೇಂದ್ರ ಅಭಿನಯದ 'ಕಿಸ್ಮತ್' ಸಿನಿಮಾ ಇಂದು ಬಿಡುಗಡೆಯಾಗಿದೆ. ಈ ಸಿನಿಮಾಗೆ ಒಳ್ಳೆಯದಾಗಲಿ ಅಂತ ನಟ ಹಾಗೂ ವಿಜಯ್ ರಾಘವೇಂದ್ರ ಸಹೋದರ ಶ್ರೀ ಮುರಳಿ ಟ್ವಿಟ್ಟರ್ ಖಾತೆಯಲ್ಲಿ ಶುಭಾಶಯ ತಿಳಿಸಿದ್ದಾರೆ. ಅಂದಹಾಗೆ, 'ಕಿಸ್ಮತ್' ವಿಜಯ್ ರಾಘವೇಂದ್ರ ನಿರ್ದೇಶನದ ಮೊದಲ ಚಿತ್ರ.
'ಕವಚ' ಸೆನ್ಸಾರ್
'ಕವಚ' ಸಿನಿಮಾ ಸೆನ್ಸಾರ್ ಆಗಿದ್ದು, ಚಿತ್ರಕ್ಕೆ ಯು ಎ ಪ್ರಮಾಣ ಪತ್ರ ಸಿಕ್ಕಿದೆ. ಚಿತ್ರ ಡಿಸೆಂಬರ್ 7 ರಂದು ಬಿಡುಗಡೆಯಾಗಲು ಸಿದ್ಧವಾಗಿದೆ. ಈ ಚಿತ್ರದಲ್ಲಿ ಶಿವರಾಜ್ ಕುಮಾರ್ ಮೊದಲ ಬಾರಿಗೆ ಅಂಧನ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತದ ಹಾಡುಗಳು ಈಗಾಗಲೇ ಎಲ್ಲರ ಮನ ಗೆದ್ದಿವೆ.
ಕನ್ನಡ ಸಿನಿಮಾಗಳ ಈ ದಿನದ 5 ಚುಟುಕು ಸುದ್ದಿಗಳು
|
ಆಂಕರ್ ಆದ ಆರ್ ಜಿ ವಿ
ರಾಮ್ ಗೋಪಾಲ್ ಅರ್ಪಿಸುತ್ತಿರುವ 'ಭೈರವ ಗೀತಾ' ಸಿನಿಮಾ ಮುಂದಿನ ಶುಕ್ರವಾರ ಬಿಡುಗಡೆಯಾಗುತ್ತಿದೆ. ಇಂದು ಆ ಸಿನಿಮಾದ ಫ್ರೀ ರಿಲೀಸ್ ಕಾರ್ಯಕ್ರಮ ನಡೆಯಲಿದ್ದು, ಆ ಕಾರ್ಯಕ್ರಮಕ್ಕೆ ಆರ್ ಜಿ ವಿ ಅವರೇ ನಿರೂಪಕರಾಗುತ್ತಾರಂತೆ. ವಿಶೇಷ ಅಂದರೆ, ಇದೇ ಮೊದಲ ಬಾರಿಗೆ ವರ್ಮ ಒಂದು ಕಾರ್ಯಕ್ರಮದಲ್ಲಿ ಆಂಕರ್ ಆಗಿರುವುದು.