Just In
- 21 min ago
ಬಾಯ್ ಫ್ರೆಂಡ್ ನನ್ನು ತಬ್ಬಿಕೊಂಡಿದ್ದಾರಾ ಕತ್ರಿನಾ ಕೈಫ್; ಇದು ಆ ಸ್ಟಾರ್ ನಟನೇ ಎನ್ನುತ್ತಿದ್ದಾರೆ ನೆಟ್ಟಿಗರು
- 2 hrs ago
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
- 2 hrs ago
ಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
- 11 hrs ago
ಡ್ರಗ್ಸ್ ಪ್ರಕರಣ: ಇಂದ್ರಜಿತ್ ಲಂಕೇಶ್ ಗೆ ಮತ್ತೆ ಬುಲಾವ್ ನೀಡಿದ ಸಿಸಿಬಿ
Don't Miss!
- News
ಬೆಳಗಾವಿ; ರೈಲಿಗೆ ತಲೆಕೊಟ್ಟ ಒಂದೇ ಕುಟುಂಬದ ನಾಲ್ವರು
- Finance
ಭಾರತದ ಮಾರುಕಟ್ಟೆಯಲ್ಲಿ ಈಗ ಚೀನಾ ಸ್ಮಾರ್ಟ್ ಫೋನ್ ಗಳದ್ದೇ ಹಿಡಿತ
- Automobiles
3 ಡೋರುಗಳ, 5 ಡೋರುಗಳ ಫೇಸ್ಲಿಫ್ಟ್ ಆವೃತ್ತಿಗಳನ್ನು ಪರಿಚಯಿಸಿದ ಮಿನಿ
- Sports
ಸ್ಟೇಡಿಯಂ ಒಳಗೆ ಅಭಿಮಾನಿಗಳಿಗೆ ಪ್ರವೇಶ ನೀಡಲು ಬಿಸಿಸಿಐ ಸಿದ್ಧತೆ
- Lifestyle
ಕರ್ನಾಟಕ ಶೈಲಿಯ ಅವರೆಕಾಳು ಚಿತ್ರಾನ್ನ ನಿಮಗಾಗಿ
- Education
BEL Recruitment 2021: 22 ಸರಂಕ್ಷಣೆ ಅಧಿಕಾರಿ, ಕಿರಿಯ ಮೇಲ್ವಿಚಾರಕರು ಮತ್ತು ಹವಿಲ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಚೇತನ್ 'ಅತಿರಥ' ಸಿನಿಮಾಗೆ ಹಿಂದೂ ಸಂಘಟನೆ ವಿರೋಧ
'ಆ ದಿನಗಳು' ಚೇತನ್ ಅಭಿನಯದ 'ಅತಿರಥ' ಸಿನಿಮಾಗೆ ರಾಜ್ಯದ ಹಲವೆಡೆ ವಿರೋಧ ವ್ಯಕ್ತವಾಗಿದೆ. ಕಳೆದ ಶುಕ್ರವಾರ (ನವೆಂಬರ್ 24) ಚೇತನ್ ಅಭಿನಯದ ಮಹೇಶ್ ಬಾಬು ನಿರ್ದೇಶನದ 'ಅತಿರಥ' ಸಿನಿಮಾ ರಾಜ್ಯಾದ್ಯಂತ ತೆರೆಗೆ ಬಂದಿತ್ತು. ಬಿಡುಗಡೆಯಾದ ದಿನದಿಂದಲೇ ಸಾಮಾಜಿಕ ಜಾಲತಾಣ ಸೇರಿದಂತೆ ರಾಜ್ಯದ ಹಲವು ಕಡೆಯಲ್ಲಿ ಸಿನಿಮಾಗೆ ವ್ಯಾಪಕವಾಗಿ ವಿರೋಧ ವ್ಯಕ್ತವಾಗಿದೆ.
ಚೇತನ್ 'ಹಿಂದೂ ವಿರೋಧಿ' ಕೆಲಸಗಳಲ್ಲಿ ಭಾಗಿಯಾಗಿದ್ದಾರೆ. ಆ ಕಾರಣದಿಂದ ಹಿಂದುಗಳು ಚೇತನ್ ಅಭಿನಯದ 'ಅತಿರಥ' ಚಿತ್ರವನ್ನ ನೋಡಬೇಡಿ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಲಾಗಿದೆ. ಅದಷ್ಟೇ ಅಲ್ಲದೇ ಚಾಮರಾಜನಗರದ 'ಪ್ಯಾರಡೈಸ್' ಸಿನಿಮಾಮಂದಿರದಲ್ಲಿ ಚಿತ್ರವನ್ನ ತೆರೆ ಕಾಣಲು ಬಿಟ್ಟಿಲ್ಲ.
ಇದೇ ವಿಚಾರವಾಗಿ ಸಿನಿಮಾ ತಂಡ ತುರ್ತು ಸುದ್ದಿಗೋಷ್ಠಿ ನಡೆಸಿ, ''ಅತಿರಥ' ಚೇತನ್ ಒಬ್ಬರದ್ದೇ ಸಿನಿಮಾ ಅಲ್ಲ. ಸಿನಿಮಾ ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರವನ್ನ ಹತ್ತಿಕ್ಕುವ ಕೆಲಸ ಮಾಡಲಾಗ್ತಿದೆ. ಹಿಂದುಗಳಾಗಿ ಹಿಂದುಗಳನ್ನೇ ವಿರೋಧ ಮಾಡುವ ಕೆಲಸ ಮಾಡುವುದು ಎಷ್ಟು ಸರಿ. ಇದು ನಿರ್ಮಾಪಕ ಹಾಗೂ ನಿರ್ದೇಶಕರ ಚಿತ್ರ. ಇಲ್ಲಿ ಸಾವಿರಾರು ಜನರು ಕೆಲಸ ಮಾಡಿದ್ದಾರೆ. ಚೇತನ್ ಹಿಂದೂ ವಿರೋಧಿಯಾಗಿದ್ದರೆ, ಅಮೇರಿಕಾದಲ್ಲಿ ವಿದ್ಯಾಭ್ಯಾಸ ಮುಗಿಸಿ ಭಾರತಕ್ಕೆ ಬಂದು ಇಲ್ಲಿಯ ಸಂಸ್ಕೃತಿ ನಾಡು ನುಡಿಗಾಗಿ ಹೋರಾಟ ಮಾಡುತ್ತಿರಲಿಲ್ಲ'' ಎಂದಿದೆ.