Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೇತನ್ 'ಅತಿರಥ' ಸಿನಿಮಾಗೆ ಹಿಂದೂ ಸಂಘಟನೆ ವಿರೋಧ
'ಆ ದಿನಗಳು' ಚೇತನ್ ಅಭಿನಯದ 'ಅತಿರಥ' ಸಿನಿಮಾಗೆ ರಾಜ್ಯದ ಹಲವೆಡೆ ವಿರೋಧ ವ್ಯಕ್ತವಾಗಿದೆ. ಕಳೆದ ಶುಕ್ರವಾರ (ನವೆಂಬರ್ 24) ಚೇತನ್ ಅಭಿನಯದ ಮಹೇಶ್ ಬಾಬು ನಿರ್ದೇಶನದ 'ಅತಿರಥ' ಸಿನಿಮಾ ರಾಜ್ಯಾದ್ಯಂತ ತೆರೆಗೆ ಬಂದಿತ್ತು. ಬಿಡುಗಡೆಯಾದ ದಿನದಿಂದಲೇ ಸಾಮಾಜಿಕ ಜಾಲತಾಣ ಸೇರಿದಂತೆ ರಾಜ್ಯದ ಹಲವು ಕಡೆಯಲ್ಲಿ ಸಿನಿಮಾಗೆ ವ್ಯಾಪಕವಾಗಿ ವಿರೋಧ ವ್ಯಕ್ತವಾಗಿದೆ.
ಚೇತನ್ 'ಹಿಂದೂ ವಿರೋಧಿ' ಕೆಲಸಗಳಲ್ಲಿ ಭಾಗಿಯಾಗಿದ್ದಾರೆ. ಆ ಕಾರಣದಿಂದ ಹಿಂದುಗಳು ಚೇತನ್ ಅಭಿನಯದ 'ಅತಿರಥ' ಚಿತ್ರವನ್ನ ನೋಡಬೇಡಿ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಲಾಗಿದೆ. ಅದಷ್ಟೇ ಅಲ್ಲದೇ ಚಾಮರಾಜನಗರದ 'ಪ್ಯಾರಡೈಸ್' ಸಿನಿಮಾಮಂದಿರದಲ್ಲಿ ಚಿತ್ರವನ್ನ ತೆರೆ ಕಾಣಲು ಬಿಟ್ಟಿಲ್ಲ.
ಇದೇ ವಿಚಾರವಾಗಿ ಸಿನಿಮಾ ತಂಡ ತುರ್ತು ಸುದ್ದಿಗೋಷ್ಠಿ ನಡೆಸಿ, ''ಅತಿರಥ' ಚೇತನ್ ಒಬ್ಬರದ್ದೇ ಸಿನಿಮಾ ಅಲ್ಲ. ಸಿನಿಮಾ ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರವನ್ನ ಹತ್ತಿಕ್ಕುವ ಕೆಲಸ ಮಾಡಲಾಗ್ತಿದೆ. ಹಿಂದುಗಳಾಗಿ ಹಿಂದುಗಳನ್ನೇ ವಿರೋಧ ಮಾಡುವ ಕೆಲಸ ಮಾಡುವುದು ಎಷ್ಟು ಸರಿ. ಇದು ನಿರ್ಮಾಪಕ ಹಾಗೂ ನಿರ್ದೇಶಕರ ಚಿತ್ರ. ಇಲ್ಲಿ ಸಾವಿರಾರು ಜನರು ಕೆಲಸ ಮಾಡಿದ್ದಾರೆ. ಚೇತನ್ ಹಿಂದೂ ವಿರೋಧಿಯಾಗಿದ್ದರೆ, ಅಮೇರಿಕಾದಲ್ಲಿ ವಿದ್ಯಾಭ್ಯಾಸ ಮುಗಿಸಿ ಭಾರತಕ್ಕೆ ಬಂದು ಇಲ್ಲಿಯ ಸಂಸ್ಕೃತಿ ನಾಡು ನುಡಿಗಾಗಿ ಹೋರಾಟ ಮಾಡುತ್ತಿರಲಿಲ್ಲ'' ಎಂದಿದೆ.