Don't Miss!
- News 'ಚೊಂಬು' ವಾಗ್ದಾದ: ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟಿದ್ದು ನೀವು: ಬಿಜೆಪಿ ತಿರುಗೇಟು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೊಡ್ಡ ಸಂಸ್ಥೆಗಳ ವಿರುದ್ಧ ಹೊಂಬಾಳೆ ಫಿಲ್ಮ್ಸ್ ಚಾಲೆಂಜ್: 3 ಸಾವಿರ ಕೋಟಿ ಹೂಡಿಕೆ ಪಕ್ಕಾ!
2022 ಕನ್ನಡ ಚಿತ್ರರಂಗಕ್ಕಷ್ಟೇ ಅಲ್ಲ, ಹೊಂಬಾಳೆ ಫಿಲ್ಮ್ಸ್ಗೂ ಲಾಭದಾಯಕ. 'ಕೆಜಿಎಫ್ 2', 'ಕಾಂತಾರ'ದಂತಹ ಸಿನಿಮಾಗಳು ಸೂಪರ್ ಸಕ್ಸಸ್ ತಂದುಕೊಟ್ಟಿವೆ. ಇದೇ ಜೋಷ್ನಲ್ಲಿ ಮತ್ತಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.
ಹೊಂಬಾಳೆ ಫಿಲ್ಮ್ಸ್ ಮುಂದಿನ 5 ವರ್ಷಗಳಲ್ಲಿ ಸಿನಿಮಾಗಾಗಿಯೇ ಸುಮಾರು 3000 ಕೋಟಿ ರೂಪಾಯಿ ಹೂಡಿಕೆ ಮಾಡಲು ನಿರ್ಧರಿಸಿದೆ. ಈ ಮಾತನ್ನು ಸ್ವತ: ಹೊಂಬಾಳೆ ಫಿಲ್ಮ್ಸ್ನ ಮಾಲೀಕ ವಿಜಯ್ ಕಿರಗಂದೂರು ಅಧಿಕೃತವಾಗಿ ಘೋಷಿಸಿದ್ದಾರೆ. ಈ ಬಗ್ಗೆ ವಿಜಯ್ ಕಿರಗಂದೂರು ಟ್ವಿಟರ್ನಲ್ಲಿ ಅಧಿಕೃತವಾಗಿ ಬರೆದುಕೊಂಡಿದ್ದಾರೆ.
ಹೊಸ ವರ್ಷದ ಈ ಶುಭ ಸಂದರ್ಭದಲ್ಲಿ ವಿಜಯ್ ಕಿರಗಂದೂರು ತಮ್ಮನ್ನು ಪ್ರೋತ್ಸಾಹಿಸಿದ ಜನತೆಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. 2023ರಲ್ಲಿ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯಿಂದ ಹೊಸ ಹೊಸ ಯೋಜನೆಗಳನ್ನು ರೂಪಿಸಲು ತೀರ್ಮಾನಿಸಿದ್ದಾರೆ.
ಹೊಂಬಾಳೆ 3 ಸಾವಿರ ಕೋಟಿ ಸ್ಕೆಚ್: ಅಸಲಿ ಆಟ ಮುಂದಿನ ವರ್ಷ!
"ಚಿತ್ರ ಪ್ರೇಮಿಗಳ ಪ್ರೀತಿ ಮತ್ತು ಪ್ರೋತ್ಸಾಹದ ಫಲವಾಗಿ ಹೊಂಬಾಳೆ ಫಿಲ್ಮ್ಸ್ ಅತ್ಯಂತ ಯಶಸ್ವಿ ಚಲನಚಿತ್ರಗಳನ್ನು ಕೊಡುಗೆಯಾಗಿ ನೀಡಿದ್ದು, ಈ ಯಶಸ್ವಿ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ತೀರ್ಮಾನಿಸಿದ್ದೇವೆ. ಅದರ ಭಾಗವಾಗಿ ಮುಂದಿನ 5 ವರ್ಷದಲ್ಲಿ ಮನರಂಜನಾ ಕ್ಷೇತ್ರದಲ್ಲಿ 3 ಸಾವಿರ ಕೋಟಿ ಹೂಡಲು ಯೋಜನೆ ಸಿದ್ದವಾಗಿದೆ ಎಂದು ಘೋಷಿಸಿದ್ದಾರೆ.ಹೊಂಬಾಳೆ ಫಿಲಮ್ಸ್ ಸಂಸ್ಥೆ ಇಂದು ದೇಶದ ಪ್ರತಿಷ್ಠಿತ ಚಿತ್ರ ನಿರ್ಮಾಣ ಎಂಬ ಹೆಗ್ಗಳಿಕೆ ಪಡೆದಿರುವುದು ಚಿತ್ರ ಪ್ರೇಮಿಗಳ ಬೆಂಬಲದಿಂದ " ಎಂದು ವಿಜಯ್ ಕಿರಗಂದೂರು ಹೇಳಿದ್ದಾರೆ.
"ಸಿನಿಮಾ ಕ್ಷೇತ್ರ ಇಂದು ಅದ್ಭುತವಾಗಿ ಬೆಳವಣಿಗೆ ಕಂಡಿದೆ. ದೇಶದ ಉದ್ದಗಲಕ್ಕೂ ವೈವಿದ್ಯಮಯ ಹಾಗೂ ಗುಣಮಟ್ಟದ ಸಿನಿಮಾ ನಿರ್ಮಾಣಕ್ಕೆ ಅವಕಾಶವಿದೆ. ದೇಶದ ಯುವ ಪೀಳಿಗೆಯನ್ನು ಜಾಗೃತಗೊಳಿಸುವ ಹಾಗೂ ಪ್ರೋತ್ಸಾಹಿಸುವ ದೃಷ್ಟಿಯಿಂದ ಸಿನಿಮಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಸೇವೆ ಸಲ್ಲಿಸಲು ತೀರ್ಮಾನಿಸಲಾಗಿದೆ. ದೇಶದ ಇತಿಹಾಸ, ಪರಂಪರೆ, ಕಲೆ- ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯಿಸುವ ಗುಣಮಟ್ಟದ ಸಿನಿಮಾಗಳನ್ನು ನೀಡಲು ತೀರ್ಮಾನಿಸಿದ್ದೇವೆ." ಎಂದು ವಿಜಯ್ ಕಿರಗಂದೂರು ಪತ್ರದಲ್ಲಿ ತಿಳಿಸಿದ್ದಾರೆ.
ಹೊಂಬಾಳೆ ಫಿಲ್ಮ್ಸ್ ಮೇಲೆ ಜನರು ಇಟ್ಟಿರುವ ನಂಬಿಕೆ ಹಾಗೂ ಭರವಸೆಗಳನ್ನು ಸುಳ್ಳಾಗದಂತೆ ನೋಡಿಕೊಳ್ಳಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ. ಮತ್ತಷ್ಟು ವಿಭಿನ್ನ ಚಿತ್ರಗಳನ್ನು ನಿರ್ಮಿಸುವ ಮೂಲಕ ಮನರಂಜನಾ ಕ್ಷೇತ್ರಕ್ಕೆ ಮತ್ತಷ್ಟು ಕೊಡುಗೆ ನೀಡುವ ಸಂಕಲ್ಪವನ್ನು ಹೊಸ ವರ್ಷಕ್ಕೆ ಮಾಡಿದ್ದಾರೆಂದು ವಿಜಯ್ ಹೇಳಿದ್ದಾರೆ.