Don't Miss!
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- News Gold Rates Today: ನಿನ್ನೆಗಿಂತ ಕೊಂಚ ಇಳಿಕೆಯಾದ ಚಿನ್ನದ ಬೆಲೆ, ಯಾವ ನಗರದಲ್ಲಿ ಎಷ್ಟು?
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಲೀಸ್ಗೂ ಮುನ್ನವೇ 4 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತು 'ಹೊಂಬಣ್ಣ'
ಚಂದನವನದಲ್ಲಿ ಈಗ ಟ್ರೈಲರ್ ನಿಂದಲೇ ಹೆಚ್ಚು ಸುದ್ದಿ ಮಾಡುತ್ತಿರುವ ಸಿನಿಮಾ ಅಂದ್ರೆ 'ಹೊಂಬಣ್ಣ'. ರಕ್ಷಿತ್ ತೀರ್ಥಹಳ್ಳಿ ಎಂಬುವರು ನಿರ್ದೇಶನ ಮಾಡಿರುವ ಈ ಚಿತ್ರ ಮೇಕಿಂಗ್ ಮತ್ತು ಕಥೆಯ ಗಟ್ಟಿತನದಿಂದಲೇ ಮೆಚ್ಚುಗೆ ಪಡೆಯುತ್ತಿದೆ.
'ಹೊಂಬಣ್ಣ' ಟ್ರೈಲರ್ ನೋಡಿ ಶುಭಹಾರೈಸಿದ್ರು ಬಹುಭಾಷಾ ನಟ ಸೋನು ಸೂದ್
ಮೊನ್ನೆಯಷ್ಟೇ ಕಿಚ್ಚ ಸುದೀಪ್ ಮತ್ತು ಬಹುಭಾಷಾ ನಟ ಸೋನು ಸೂದ್ 'ಹೊಂಬಣ್ಣ' ಟ್ರೈಲರ್ ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದರು. ಅಲ್ಲದೇ ಚಿತ್ರಕ್ಕೆ ಶುಭ ಹಾರೈಸಿದ್ದರು. ಈ ಚಿತ್ರದ ಬಗೆಗಿನ ಲೇಟೆಸ್ಟ್ ಸುದ್ದಿ ಏನಂದ್ರೆ ಚಿತ್ರ ಬಿಡುಗಡೆಗೂ ಮುನ್ನವೇ ನಾಲ್ಕು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.
ಹೌದು, ವೆನಿಜುವೆಲಾದಲ್ಲಿ ನಡೆದ 'ಫೈವ್ ಕಾಂಟಿನೆಂಟ್ಸ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್' ನಲ್ಲಿ 'ಹೊಂಬಣ್ಣ' ಚಿತ್ರ ನಾಲ್ಕು ಪ್ರಶಸ್ತಿಗಳನ್ನು ಗೆದ್ದಿದೆ. 'ಬೆಸ್ಟ್ ಎಡಿಟಿಂಗ್ ಫೀಚರ್ ಫಿಲ್ಮ್', 'ಬೆಸ್ಟ್ ಡ್ರಾಮಾ ಫೀಚರ್ ಫಿಲ್ಮ್', 'ಒರಿಜಿನಲ್ ಮ್ಯೂಸಿಕ್ ಸ್ಕೋರ್ ಫೀಚರ್ ಫಿಲ್ಮ್', 'ಸಿನೆಮಾಟೋಗ್ರಫಿ ಫೀಚರ್ ಫಿಲ್ಮ್' ಈ ನಾಲ್ಕು ವಿಭಾಗಗಳಲ್ಲಿಯೂ 'ಹೊಂಬಣ್ಣ' ಸಿನಿಮಾ ಪ್ರಶಸ್ತಿ ಗಿಟ್ಟಿಸಿಕೊಂಡಿದೆ. ಅಲ್ಲದೇ ಈ ಚಿತ್ರ ಈ ತಿಂಗಳು ನಡೆಯಲಿರುವ 'ಮಿಯಾಮಿ ಇಂಡಿಪೆಂಡೆಂಟ್' ಚಿತ್ರೋತ್ಸವಕ್ಕೆ ಅಧಿಕೃತವಾಗಿ ಆಯ್ಕೆ ಆಗಿದೆ. ಈ ಬಗ್ಗೆ ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ ಸ್ವತಃ ತಮ್ಮ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ಚಿತ್ರದ ಈ ಯಶಸ್ಸಿಗೆ ರಕ್ಷಿತ್ ನಿರ್ಮಾಪಕರು ಮತ್ತು ಚಿತ್ರದಲ್ಲಿ ದುಡಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.
'ಹೊಂಬಣ್ಣ' ಟ್ರೈಲರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಕಿಚ್ಚ ಸುದೀಪ್
'ಹೊಂಬಣ್ಣ' ಚಿತ್ರ ಮಲೆನಾಡು ದಟ್ಟ ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣ ಮಾಡಿರುವ ಕಾಡನ್ನು ಉಳಿಸುವ ಕಥೆಯಾಧಾರಿತ ಸಿನಿಮಾ. ಈ ಚಿತ್ರದಲ್ಲಿ ಹಿರಿಯ ನಟರಾದ ಸುಚೇಂದ್ರ ಪ್ರಸಾದ್, ದತ್ತಣ್ಣ ಮತ್ತು ನೀನಾಸಂ ಅಶ್ವಥ್ ಸೇರಿದಂತೆ ಇತರರು ಅಭಿನಯಿಸಿದ್ದಾರೆ. ಚಿತ್ರಕ್ಕೆ ವಿನು ಮನಸು ಸಂಗೀತ ಸಂಯೋಜನೆ ನೀಡಿದ್ದಾರೆ. ಸಂಚಲನ ಮೂವೀಸ್ ಅಡಿಯಲ್ಲಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರ ಇದೇ ಜುಲೈ 7 ಕ್ಕೆ ತೆರೆಕಾಣುತ್ತಿದೆ.