Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಂಸಲೇಖ-ಬರಗೂರು ರಾಮಚಂದ್ರಪ್ಪ ಸೇರಿ ಬರೆದರು 'ಹೊಸ ಅಧ್ಯಾಯ'
ಖ್ಯಾತ ನಿರ್ದೇಶಕ, ಸಾಹಿತಿ ಬರಗೂರು ರಾಮಚಂದ್ರಪ್ಪ ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಸಹಯೋಗದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಟದ ಸ್ಫೂರ್ತಿದಾಯಕ ವಿಡಿಯೋ ಆಲ್ಬಮ್ 'ಹೊಸ ಅಧ್ಯಾಯ' ಹೊರಬಂದಿದೆ.
ಕೊರೊನಾ ವೈರಸ್ ಪಿಡುಗು ಜನಜೀವನದ ಮೇಲೆ ನಡೆಸಿರುವ ದಾಳಿ, ಅದರ ವಿರುದ್ಧದ ಹೋರಾಟ ಹಾಗೂ ಈ ಹೋರಾಟದಲ್ಲಿ ಗೆಲುವು ಕಂಡುಕೊಳ್ಳುತ್ತೇವೆ ಎಂದು ಭರವಸೆ ತುಂಬುವ ಸಾಲುಗಳನ್ನು ಬರಗೂರು ರಾಮಚಂದ್ರಪ್ಪ ರಚಿಸಿದ್ದಾರೆ. ಇದಕ್ಕೆ ಹಂಸಲೇಖ ಹಿನ್ನೆಲೆ ಸಂಗೀತ ನೀಡಿರುವುದಲ್ಲದೆ, ಆ ಸಾಲುಗಳಿಗೆ ಧ್ವನಿ ಕೊಟ್ಟಿದ್ದಾರೆ.
ಕಿರುತೆರೆಯ ಮೇಲೆ ಕೊರೊನಾ ಎಫೆಕ್ಟ್: ನಿರ್ದೇಶಕ ಸೀತಾರಾಮ್ ವಿಶ್ಲೇಷಣೆ
'ದೇಶವಿದೇಶದ ಸಂಚಾರಿ, ಕಣ್ಣಿಗೆ ಕಾಣದ ಸಂಹಾರಿ
ಅಂಟಿದ ನಂಟನು ತಂದವನು
ಜೀವ ಜೀವನ ಕೊಂದವನು
ಕೊರೊನಾ ಕೊರೊನಾ ನಿಶ್ಚಿತ ನಿನ್ನ ಪಲಾಯನ' ಎಂದು ಆರಂಭವಾಗುವ ಸಾಲುಗಳು ಕೊರೊನಾದ ದಾಳಿಯ ಪರಿಣಾಮವನ್ನು ವಿವರಿಸುವುದರ ಜತೆಗೆ ಅದನ್ನು ಹಿಮ್ಮೆಟ್ಟಿಸುತ್ತೇವೆ ಎಂಬ ಭರವಸೆಯನ್ನೂ ಮೂಡಿಸುತ್ತವೆ.
ರಾಜ್ ಕುಮಾರ್ ಜನ್ಮದಿನಕ್ಕೆ ಹಂಸಲೇಖ ನೀಡಿದ ಸುಂದರ ಹಾಡಿನ ಉಡುಗೊರೆ
ಲಾಕ್ ಡೌನ್ ಕಾರಣದಿಂದ ಸ್ತಬ್ಧವಾಗಿರುವ ನಗರ, ಸಂಕಷ್ಟದಲ್ಲಿರುವ ಜನ ಸಾಮಾನ್ಯರು, ದುಡಿಮೆ ಇಲ್ಲದೆ ಕಂಗಾಲಾಗಿರುವ ಕಾರ್ಮಿಕರು, ನಿರೀಕ್ಷೆಗಳನ್ನು ತುಂಬಿಕೊಂಡು ಕಾದಿರುವ ಜನರ ಚಿತ್ರಣಗಳನ್ನು ಸಾಹಿತ್ಯಕ್ಕೆ ಅನುಗುಣವಾಗಿ ಸೆರೆಹಿಡಿದು ಚಿತ್ರಿಸಿದ್ದಾರೆ ನಿರ್ದೇಶಕ ವಿಶ್ವಾಸ್ ಮಾದಿಸೆಟ್ಟಿ. ಸಂಕಲನದ ಕಾರ್ಯವನ್ನೂ ಅವರೇ ನಿರ್ವಹಿಸಿದ್ದಾರೆ. ಸತೀಶ್ ರಾಜೇಂದ್ರನ್ ಅವರ ಛಾಯಾಗ್ರಹಣ, ಕೊರೊನಾ ವೈರಸ್ ಹಾವಳಿ ಬೀರಿರುವ ಪರಿಣಾಮವನ್ನು ಮನಮುಟ್ಟುವಂತೆ ಚಿತ್ರಿಸಿದೆ.
ಸಲಿಕೆ ಹಿಡಿದು ರಸ್ತೆ ರಿಪೇರಿ ಮಾಡಿದ ನಾದಬ್ರಹ್ಮ ಹಂಸಲೇಖ
'ಹೊಸ ಅಧ್ಯಾಯ' ವಿಡಿಯೋ ಆಲ್ಬಮ್ ಕಲಾಕ್ಷಯ ಸ್ಟುಡಿಯೋಸ್ನ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದ್ದು, ಕೊರೊನಾ ವೈರಸ್ ಕಾರಣದಿಂದ ದಿಕ್ಕೆಟ್ಟಿರುವ ಜನರಲ್ಲಿ ಆತ್ಮವಿಶ್ವಾಸ ಮತ್ತು ಸ್ಫೂರ್ತಿ ತುಂಬುವಂತಿದೆ.