Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿಗಳ ಶಿಳ್ಳೆ, ಕೇಕೆ ನಡುವೆ 'ಅಭಿಮನ್ಯು' ಆಟ
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅಭಿನಯದ 'ಅಭಿಮನ್ಯು' ಚಿತ್ರ ಇಂದು (ನ.7) ರಾಜ್ಯಾದಾದ್ಯಂತ ಬಿಡುಗಡೆಯಾಗಿದೆ. ಬೆಂಗಳೂರಿನ ಅನುಪಮಾ ಮುಖ್ಯ ಚಿತ್ರಮಂದಿರ ಸೇರಿದಂತೆ ಸರಿಸುಮಾರು 150 ಚಿತ್ರಮಂದಿರಗಳಲ್ಲಿ ತೆರೆಕಂಡಿದೆ.
ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ಮಾಣದ ಜೊತೆಗೆ ನಿರ್ದೇಶನವನ್ನೂ ಅರ್ಜುನ್ ಸರ್ಜಾ ಅವರೇ ವಹಿಸಿಕೊಂಡಿದ್ದು ಚಿತ್ರೋದ್ಯಮದಲ್ಲಿ ಅತೀವ ಕುತೂಹಲ ಕೆರಳಿಸಿದೆ. ಚಿತ್ರದಲ್ಲಿ ಅರ್ಜುನ್ ಸರ್ಜಾ ಅವರು ಕರಾಟೆ ಮಾಸ್ಟರ್ ಪಾತ್ರದಲ್ಲಿ ಮಿಂಚಿದ್ದಾರೆ. [ನಾನು ನಿರ್ದೇಶನಕ್ಕಿಳಿದಾಗ ಜನ ನಕ್ಕಿದ್ರು]
ಚಿತ್ರದ ಮೊದಲರ್ಧ ಪ್ರೇಕ್ಷಕರನ್ನು ಹಿಡಿದಿಡುವಲ್ಲಿ ಯಶಸ್ವಿಯಾಗಿದೆ. ದೇಶದ ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ಸಿಗಬೇಕು ಎಂಬ ಆಶಯದಲ್ಲಿ ನಾಯಕನ ಹೋರಾಟ ಇದೆ. ಇದಕ್ಕೆ ನಾನಾ ಅಡ್ಡಿ ಆತಂಕಗಳು ಎದುರಾಗುತ್ತವೆ. ಈ ಚಕ್ರವ್ಯೂಹವನ್ನು ಅಭಿಮನ್ಯು ಹೇಗೆ ಬೇಧಿಸುತ್ತಾನೆ ಎಂಬುದೇ ಚಿತ್ರದ ಕಥೆ.
ಪಾಪ ಪಾಂಡು ಖ್ಯಾತಿಯ ಜಹಾಂಗೀರ್ ಕಾಮಿಡಿ ಚೆನ್ನಾಗಿದ್ದು, ಹಿನ್ನೆಲೆ ಸಂಗೀತ ಸೊಗಸಾಗಿ ಮೂಡಿಬಂದಿದೆ. ವೇಣು ಅವರ ಕ್ಯಾಮೆರಾ ವರ್ಕ್ ಸಹ ಕಣ್ಣಿಗೆ ತಂಪೆರೆಯುವಂತಿದೆ. ಒಟ್ಟಾರೆಯಾಗಿ ಮಧ್ಯಮ ವರ್ಗದ ಪ್ರೇಕ್ಷಕರಿಗೆ ಅತ್ಯುತ್ತಮ ಚಿತ್ರ ಎನ್ನಬಹುದು. ಸಂಪೂರ್ಣ ಚಿತ್ರ ವಿಮರ್ಶೆಗಾಗಿ ನಿರೀಕ್ಷಿಸಿ. (ಫಿಲ್ಮಿಬೀಟ್ ಕನ್ನಡ)