Don't Miss!
- Automobiles ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- News Zero Shadow Day: ನಾಳೆ ಬುಧವಾರ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ; ಸಮಯ, ವಿವರ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಖಿಲ್ಗೆ ಫಿಕ್ಸ್ ಆಗಿದ್ದ 'ಹೊಯ್ಸಳ' ಟೈಟಲ್ ಶಿವಣ್ಣನಿಗೆ ಮೀಸಲಂತೆ..
ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಎರಡನೇ ಚಿತ್ರದ ಶೂಟಿಂಗ್ ಸದ್ಯದಲ್ಲೇ ಶುರುವಾಗಲಿದ್ದು, ಈ ಚಿತ್ರಕ್ಕೆ 'ಹೊಯ್ಸಳ' ಎಂಬ ಟೈಟಲ್ ಇಡಲಾಗಿದೆ ಎಂದು ಸುದ್ದಿಯಾಗಿತ್ತು. ಆದರೆ ಈಗ ಚಿತ್ರದ ಟೈಟಲ್ ಶಿವಣ್ಣನಿಗೆ ಮೀಸಲು ಎಂಬ ಹೊಸ ಸುದ್ದಿ ಕೇಳಿಬಂದಿದೆ.[ನಿಖಿಲ್ ಕುಮಾರ್ ಎರಡನೇ ಚಿತ್ರಕ್ಕೆ ರಾಜ ವಂಶದ ಹೆಸರು]
ಹೌದು, 'ಬಹದ್ದೂರ್' ಖ್ಯಾತಿಯ ಚೇತನ್ ಕುಮಾರ್ ಕಥೆ, ಚಿತ್ರಕಥೆ ಬರೆದು ನಿಖಿಲ್ ಕುಮಾರ್ ಗೆ ಆಕ್ಷನ್ ಕಟ್ ಹೇಳಲಿರುವ ಚಿತ್ರಕ್ಕೆ 'ಹೊಯ್ಸಳ' ಟೈಟಲ್ ಬಹುತೇಕ ಕ್ಯಾನ್ಸಲ್ ಆಗಲಿದೆ. ಮುಂದೆ ಓದಿರಿ..
ಟೈಟಲ್ ಬಿಡುವುದಿಲ್ಲ ಎಂದ ರಾಮು
ನಿರ್ಮಾಪಕ ರಾಮು ರವರು ತಮ್ಮ ಬಳಿಯಿದ್ದ 'ಹೊಯ್ಸಳ' ಟೈಟಲ್ ಅನ್ನು ಈ ಹಿಂದೆ ನಿಖಿಲ್ ಕುಮಾರ್ ಎರಡನೇ ಸಿನಿಮಾಗೆ ಚಿತ್ರತಂಡದ ಮನವಿ ಮೇರೆಗೆ ಕೊಡಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿತ್ತು. ಆದರೆ ಈಗ ರಾಮು ರವರು ತಮ್ಮ ಬ್ಯಾನರ್ ಅಡಿಯಲ್ಲಿ ನೊಂದಾಯಿಸಿರುವ ಟೈಟಲ್ ಅನ್ನು ಕೊಡುವುದಿಲ್ಲ ಎಂದು ಚೆನ್ನಾಂಬಿಕ ಫಿಲ್ಮ್ಸ್ ಸಂಸ್ಥೆಗೆ ತಿಳಿಸಿದ್ದಾರಂತೆ.
ಶಿವಣ್ಣನಿಗೆ 'ಹೊಯ್ಸಳ' ಟೈಟಲ್
ಅಂದಹಾಗೆ 'ಹೊಯ್ಸಳ' ಟೈಟಲ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಮೀಸಲಾಗಿದ್ದು, ಚಿತ್ರಕ್ಕೆ ಈಗ ಕಥೆಯನ್ನು ರೆಡಿ ಮಾಡಲಾಗುತ್ತಿದೆ. ಟೈಟಲ್ ಸಹ ಕಥೆಗೆ ಹೊಂದಿಕೊಳ್ಳುತ್ತದೆ ಎಂದು ನಿರ್ಮಾಪಕ ರಾಮು ರವರು ತಿಳಿಸಿದ್ದಾರೆ.
ನಿಖಿಲ್ ಚಿತ್ರಕ್ಕೆ ಹೊಸ ಟೈಟಲ್ ಹುಡುಕಾಟ
'ಹೊಯ್ಸಳ' ಟೈಟಲ್ ಕೈತಪ್ಪಿರುವುದರಿಂದ ಈಗ ನಿಖಿಲ್ ಕುಮಾರ್ ನಿರಾಸೆಗೊಂಡಿದ್ದು, ಚಿತ್ರತಂಡ ಹೊಸ ಟೈಟಲ್ ಗಾಗಿ ಹುಡುಕಾಟ ನಡೆಸಿದೆ.
ಜೂನ್ 5 ರಿಂದ ಚಿತ್ರೀಕರಣ ಆರಂಭ
ನಿಖಿಲ್ ಕುಮಾರ್ ಎರಡನೇ ಸಿನಿಮಾದಲ್ಲಿ ಅವರಿಗೆ ಜೊತೆಯಾಗಿ ಬೆಳಗಾವಿ ಮೂಲದ ರೂಪದರ್ಶಿ ರಿಯಾ ನಲವಾಡೆ ಅಭಿನಯಿಸಲಿದ್ದಾರೆ. ಚಿತ್ರೀಕರಣಕ್ಕೆ ದಿನಗಣನೆ ಶುರುವಾಗಿದ್ದು, ಜೂನ್ 5 ರಿಂದ ಚಿತ್ರತಂಡ ಶೂಟಿಂಗ್ ಶುರು ಮಾಡಲಿದೆ. ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ಸಂಯೋಜನೆ, ಶ್ರಿಶಾ ಕುದವಳ್ಳಿ ಛಾಯಾಗ್ರಹಣ ಇರಲಿದೆ.['ಜಾಗ್ವಾರ್' ನಾಯಕನಿಗಾಗಿ ಬಂದ್ಲು ಬೆಳಗಾವಿ ಸುಂದರಿ!]