Don't Miss!
- Automobiles Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- News Karnataka Lok Sabha: 28 ಕ್ಷೇತ್ರಗಳ ಜಾತಿವಾರು ಅಭ್ಯರ್ಥಿಗಳು ಯಾರು? ಮಾಹಿತಿ ಇಲ್ಲಿದೆ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾಸಕ ಮುನಿರತ್ನ ವಿರುದ್ಧ ರೊಚ್ಚಿಗೆದ್ದ ಹುಚ್ಚ ವೆಂಕಟ್
ರಾಜರಾಜೇಶ್ವರಿ ಶಾಸಕ ಮುನಿರತ್ನ ವಿರುದ್ಧ ನಟ-ನಿರ್ದೇಶಕ ಹುಚ್ಚ ವೆಂಕಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಮತದಾರರನ್ನ ಸೆಳೆಯಲು 'ಕುಕ್ಕರ್' ಹಂಚುತ್ತಿದ್ದಾರೆ ಎಂದು ಫೈರಿಂಗ್ ಸ್ಟಾರ್ ಗರಂ ಆಗಿದ್ದಾರೆ.
'ನನ್ನ ತಂಗಿ ಮನೆಗೂ ಕೊಟ್ಟು ತಮಗೆ ಮತ ಹಾಕಿ ಎಂದಿದ್ದಾರೆ. ಅಷ್ಟೇ ಅಲ್ಲದೇ 'ಕುಕ್ಕರ್ ಬಾಕ್ಸ್' ಮೇಲೆ ಬರೆದಿರುವ ಡೈಲಾಗ್ ಕಂಡು ಶಾಸಕರನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಸಂಬಂಧ ಇಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹುಚ್ಚ ವೆಂಕಟ್ ಕುಕ್ಕರ್ ಬಾಕ್ಸ್, ಸ್ಟೌವ್ ಹಾಗೂ ನೀರಿನ ಕ್ಯಾನ್ ಹಿಡಿದು ಆಗಮಿಸಿದ್ದರು. ತದ ನಂತರ ಮಾತನಾಡಿದ ಅವರು ''ರಾಜಕೀಯ ಇಂದು ಈ ಹಂತಕ್ಕೆ ಬಂದಿದೆ. ಜನರು ಇಂತಹ ಆಮಿಷಕ್ಕೆ ಒಳಗಾಗದೆ ಉತ್ತಮ ವ್ಯಕ್ತಿಯನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕು'' ಎಂದು ಜನರಿಗೆ ಸಲಹೆ ನೀಡಿದರು.
ಹುಚ್ಚ ವೆಂಕಟ್ ಅವರೇ... ಇದೆಲ್ಲ ನಿಮಗೆ ಮರೆತು ಹೋಯ್ತಾ.?
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಮುನಿರತ್ನ ''ಇದನ್ನ ನಾನು ಹಲವು ವರ್ಷಗಳಿಂದ ಮಾಡಿಕೊಂಡು ಬಂದಿದ್ದೇನೆ. ಬಡವರಿಗೆ, ಅಸಹಾಯಕರಿಗೆ, ನಿರ್ಗತಿಕರಿಗೆ ನೆರವಾಗಿದ್ದೇನೆ. ಇದಕ್ಕೂ ಚುನಾವಣೆಗೂ ಯಾವುದೇ ರೀತಿಯ ಸಂಬಂಧವಿಲ್ಲ. ಇದು ಒಳ್ಳೆಯ ಉದ್ದೇಶದಿಂದ ಮಾಡುತ್ತಿರುವ ಕೆಲಸ'' ಎಂದಿದ್ದಾರೆ.